ಕಲಬುರಗಿ: ಪ್ರೊಬೆಷನರಿ KAS ಅಧಿಕಾರಿಗೆ IAS ಭಾಗ್ಯ; UPSCಯಲ್ಲಿ ರಾಜ್ಯಕ್ಕೆ 15ನೇ ರ‍್ಯಾಂಕ್

ಕೊವಿಡ್ ಕರ್ತವ್ಯದಲ್ಲಿದ್ದಾಗಲೇ ರ‍್ಯಾಂಕ್ ಸಂದೇಶ ಬಂತು

Team Udayavani, Aug 4, 2020, 9:47 PM IST

ಕಲಬುರಗಿ: ಪ್ರೊಬೆಷನರಿ KAS ಅಧಿಕಾರಿಗೆ IAS ಭಾಗ್ಯ

ಕಲಬುರಗಿ: ಕಳೆದ ಒಂದುವರೆ ತಿಂಗಳ ಹಿಂದೆಯಷ್ಟೇ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಗೆ ಪ್ರೊಬೆಷನರಿ ಕೆಎಎಸ್ ಅಧಿಕಾರಿಯಾಗಿರುವ ಬಂದಿರುವವರಿಗೆ ಈಗ ಐಎಎಸ್ ಭಾಗ್ಯ ಲಭಿಸಿದೆ.

ಮಂಗಳವಾರ ಪ್ರಕಟಗೊಂಡ ಪ್ರಸಕ್ತ ಯುಪಿಎಸ್‌ಸಿಯಲ್ಲಿ (ಕೇಂದ್ರ ಲೋಕಸೇವಾ ಆಯೋಗ) ಪರೀಕ್ಷೆಯಲ್ಲಿ ಪ್ರೋಬೆಷನರಿ ಕೆಎಎಸ್ ಅಧಿಕಾರಿಯಾಗಿ ಜಿಲ್ಲೆಯ ಕೊವಿಡ್ ನಿಯಂತ್ರಣ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಗದೀಶ ಅಡಹಳ್ಳಿ  440ನೇ ರ‍್ಯಾಂಕ್ ಗಳಿಸಿ ಉತ್ತೀರ್ಣರಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ (ಮೊದಲು ಅಥಣಿ) ತಾಲೂಕಿನ ಮೊಳೆ ಗ್ರಾಮದವರಾಗಿರುವ ಜಗದೀಶ ಅಡಹಳ್ಳಿ ಅವರು ಕೊನೆಯ ಆರನೇ ಪ್ರಯತ್ನದಲ್ಲಿ ಐಎಎಸ್ ಕನಸು ನನಸು ಮಾಡಿಕೊಂಡಿದ್ದಾರೆ.

ಯುಪಿಎಸ್‌ಯಲ್ಲಿ ಪ್ರಸಕ್ತ ರಾಜ್ಯಕ್ಕೆ 15ನೇ ರ‍್ಯಾಂಕ್ ಪಡೆದಿದ್ದಾರೆ. ಕಳೆದ 2019ರ ಕೆಎಎಸ್‌ ನಲ್ಲಿ 23ನೇ ರ‍್ಯಾಂಕ್ ಪಡೆದಿರುವ ಜಗದೀಶ ಅವರು ನವದೆಹಲಿಯ ವಾಜಿರಾಮ ಹಾಗೂ ರವಿ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದಾರೆ.

ಕಳೆದ ಒಂದುವರೆ ತಿಂಗಳಿನಿಂದ ಜಿಲ್ಲೆಯಲ್ಲಿ ಕೊವಿಡ್ ಕೇರ್ ಸೆಂಟರ್, ಚೆಕ್‌ ಪೊಸ್ಟ್ ಸೇರಿದಂತೆ ಕೊವಿಡ್ ನಿಯಂತ್ರಣದ ಕುರಿತಾಗಿಯೇ ಕಾರ್ಯನಿರ್ವಹಿಸುತ್ತಿದ್ದು, ಮಂಗಳವಾರ ಕೊವಿಡ್ ನಿಯಂತ್ರಣ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಸಂದರ್ಭದಲ್ಲೇ ಐಎಎಸ್‌ನಲ್ಲಿ ರ‍್ಯಾಂಕ್ ಪಡೆದಿರುವ ವಿಷಯವನ್ನು ಗೆಳೆಯರು ಜಗದೀಶ್ ಅವರಿಗೆ ತಿಳಿಸಿದ್ದಾರೆ.

ಜಗದಿಶ್ ಅವರ ತಂದೆ ವಾಹನ ಚಾಲಕರಾಗಿದ್ದಾರೆ. ಒಟ್ಟಾರೆಯಾಗಿ ತಮ್ಮ ಈ ಸಾಧನೆ ತಮ್ಮ ಅವಿರತ ಶ್ರಮಕ್ಕೆ ಸಿಕ್ಕ ಪ್ರತಿಫಲ ಎಂದು ಜಗದೀಶ್ ಅವರು ತಮ್ಮ ಸಂತೋಷವನ್ನು ಮಾದ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

ತಂದೆ-ತಾಯಿಯ ಆಶೀರ್ವಾದ ಹಾಗೂ ಐಎಎಸ್ ಪಾಸಾಗಬೇಕೆಂಬ ದೃಢ ಇಚ್ಚೆಯೇ ಇದನ್ನು ಸಾಕಾರಗೊಳಿಸಲು ಸಾಧ್ಯವಾಗಿದೆ ಎಂದು ತಿಳಿಸುವ ಜಗದೀಶ ಅಡಹಳ್ಳಿ ಅವರು, ಕಲಬುರಗಿಯಲ್ಲಿನ ಪ್ರೊಬೆಷನರಿ ಸೇವೆ ಸಾಕಷ್ಟು ಅನುಭವ ನೀಡಿದೆ ಎಂದು ಸ್ಮರಿಸುತ್ತಾರೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.