ಅರಸು ಭವನ-ವೀರಶೈವ ಹಾಸ್ಟೇಲ್‌ ನಿವೇಶನಕ್ಕೆ ಪ್ರಸ್ತಾಪ


Team Udayavani, Apr 1, 2022, 10:59 AM IST

7hostel

ಆಳಂದ: ಪಟ್ಟಣದಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ, ಸ್ವತ್ಛತೆ, ಕಸ ವಿಲೇವಾರಿ, ಚರಂಡಿ ನಿರ್ವಹಣೆ ಸೇರಿದಂತೆ ವಾರ್ಡ್‌ ಸಮಸ್ಯೆಗಳಿಗೆ ಸ್ಪಂದಿಸದ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರು ಒತ್ತಾಯಿಸಿದರು.

ಪುರಸಭೆಯಲ್ಲಿ ಗುರುವಾರ ಅಧ್ಯಕ್ಷೆ ರಾಜಶ್ರೀ ಶ್ರೀಶೈಲ ಖಜೂರಿ ಅಧ್ಯಕ್ಷತೆಯಲ್ಲಿ ಕರೆದ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪರಿಸರ ಅಭಿಯಂತರರು ಸದಸ್ಯರ ಯಾವುದೇ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಸಿಬ್ಬಂದಿ ಮೊಬೈಲ್‌ ಯಾವಾಗಲೂ ಸ್ವಿಚ್‌ ಆಫ್‌ ಆಗಿರುತ್ತದೆ. ಆದ್ದರಿಂದ ಇವರನ್ನೆಲ್ಲ ಕೂಡಲೇ ಅಮಾನತು ಮಾಡಬೇಕು ಎಂದು ಸದಸ್ಯ ಮೃತ್ಯುಂಜಯ ಆಲೂರ, ಆಸೀಫ್‌ ಚೌಸ್‌, ಸೋಮಶೇಖರ ಹತ್ತರಕಿ ಇನ್ನಿತರರು ಆಗ್ರಹಿಸಿದರು.

ವಾರ್ಡ್‌ 1ರಲ್ಲಿ ಕೊಳವೆ ಬಾವಿ ತೋಡಿ ನಾಲ್ಕು ತಿಂಗಳಾದರೂ ಮೋಟಾರ್‌ಗೆ ವಿದ್ಯುತ್‌ ಸಂಪರ್ಕ ಒದಗಿಸಿಲ್ಲ ಎಂದು ಮಹಿಳಾ ಸದಸ್ಯೆ ಸಭೆ ಗಮನಕ್ಕೆ ತಂದರು. ಈ ಕುರಿತು ಕ್ರಮಕ್ಕೆ ಮುಖ್ಯಾಧಿಕಾರಿಗಳು ಸೂಚಿಸಿದರು.

ಸದಸ್ಯೆ ಆಸ್ಮೀತಾ ಚಿಟಗುಪ್ಪಕರ್‌ ಮಾತನಾಡಿ, ರಜ್ವಿರೋಡ್‌ನಿಂದ ಆರ್ಯ ಸಮಾಜದ ಮಂದಿರದ ವರೆಗೆ ನಳಕ್ಕೆ ನೀರು ಕಲ್ಪಿಸುವಂತೆ ಒತ್ತಾಯಿಸಿದರು.

ಸದಸ್ಯ ಶ್ರೀಶೈಲ ಪಾಟೀಲ, ಮೃತ್ಯುಂಜಯ ಆಲೂರೆ, ಅಕ್ರಮ ನಳ ಕಡಿತಗೊಳಿಸಬೇಕು. ಟ್ಯಾಕ್ಸ್‌ ವಸೂಲಾತಿ ಹೆಚ್ಚಿಸಬೇಕು ಎಂದು ಹೇಳಿದರು. ಕಾಂಗ್ರೆಸ್‌ ಸದಸ್ಯೆ ಕವಿತಾ ಸಂಜಯ ನಾಯಕ, 14ನೇ ಹಣಕಾಸಿನ ವಾರ್ಡ್‌ಗೆ ಪರಿಶಿಷ್ಟ ಜಾತಿ ಅನುದಾನ ನೀಡುವಂತೆ ಆಗ್ರಹಿಸಿದರು.

ಉಪಾಧ್ಯಕ್ಷ ಈರಣ್ಣಾ ಹತ್ತರಕಿ ಮಾತನಾಡಿ, ಸಿಬ್ಬಂದಿ ಕರ್ತವ್ಯದಿಂದ ನುಣಿಚಿಕೊಂಡರೆ ಸಹಿಸಿಕೊಳ್ಳುವುದಿಲ್ಲ. ವಾರ್ಡ್‌ಗಳಿಗೆ ಭೇಟಿ ನೀಡಿ ಮೂಲಸೌಲಭ್ಯ ಕಲ್ಪಿಸಬೇಕು ಎಂದರು.

ಮಧ್ಯ ಪ್ರವೇಶಿಸಿದ ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ, ಮುಂದೆ ಇಂಥ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುವುದು. ಕಾಲಾವಕಾಶ ನೀಡಬೇಕು ಎಂದಾಗ ಸದಸ್ಯರು ಸುಮ್ಮನಾದರು. ಪಟ್ಟಣದಲ್ಲಿ ಡಾ| ದೇವರಾಜ ಅರಸು ಭವನ ನಿರ್ಮಾಣ, ವೀರಶೈವ ಸಮಾಜದ ವಸತಿ ನಿಲಯ ಕಟ್ಟಡಕ್ಕೆ ಸಿಎ ಸೈಟ್‌ (ನಿವೇಶನ) ನೀಡಲು ಮೇಲಧಿಕಾರಿಗಳ ಪ್ರಸ್ತಾವನೆ ಕಳುಹಿಸಿ ಒಪ್ಪಿಗೆ ಪಡೆಯಲು ಸಭೆಯಲ್ಲಿ ಅನುಮೋದಿಸಲಾಯಿತು.

ಶಿವಪುತ್ರ ನಡಗೇರಿ, ಲಕ್ಷ್ಮಣ ಝಳಕಿಕರ್‌ ಮಾತನಾಡಿ, ಡಾ| ಅಂಬೇಡ್ಕರ್‌ ಭವನ ನಿರ್ಮಾಣಕ್ಕೆ 1.50ಕೋಟಿ ರೂ. ಅನುದಾನವಿದೆ. ಆದರೆ ಇದುವರೆಗೂ ಸಿಎ ಸೈಟ್‌ ಒದಗಿಸಿಲ್ಲ ಏಕೆ ಎಂದು ಪ್ರಶ್ನಿಸಿದರು. ಇದೇ ವೇಳೆ ಪುರಸಭೆಯ ಅನುಪಯುಕ್ತ ವಾಹನಗಳು ಮತ್ತು ಇತರೆ ವಸ್ತುಗಳ ಇ-ಹರಾಜು ಮಾಡಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ನಂತರ ಪಟ್ಟಣದ ಅಗತ್ಯ ಸ್ಥಳಗಳಲ್ಲಿ ಸುಲಭ ಶೌಚಾಲಯ ನಿರ್ಮಾಣಕ್ಕೆ ಸ್ಥಳ ಒದಗಿಸಲು ಹಾಗೂ ಗುತ್ತಿಗೆ ಆಧಾರದ ಮೇಲೆ ಕಂಪ್ಯೂಟರ್‌ ನಿರ್ವಾಹಕರ ನೇಮಕಾತಿಗೆ ನಿರ್ಧರಿಸಲಾಯಿತು.

14ನೇ ಹಣಕಾಸು 2019-20ನೇ ಸಾಲಿನ 15 ಲಕ್ಷ ರೂ. ಕ್ರಿಯಾ ಯೋಜನೆ, ಘಟನೋತ್ತರ ಅನುಮೋದನೆ, 15ನೇ ಹಣಕಾಸಿನ ಟಿಂಡರ್‌ ಕರೆಯಲು ಒಪ್ಪಿಗೆ ನೀಡಲಾಯಿತು. ಖಂಡೋಬಾ ದೇವಸ್ಥಾನ, ಮಾಲ್ಗಣಾಧಿಧೀಶ್ವರ, ವಾಸುದೇವಾಯ ದೇವಸ್ಥಾನ ಕಟ್ಟಡಕ್ಕೆ ಪರವಾನಗಿ ನೀಡುವ ಕುರಿತು ಪ್ರಸ್ತಾವಕ್ಕೆ ದಾಖಲೆಗಳಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಸದಸ್ಯರು ಸೂಚಿಸಿದರು.

ಎಲ್ಲ ವಾರ್ಡ್‌ಗಳಿಗೆ ಬೀದಿ ದೀಪ ಅಳವಡಿಕೆ 2020-21-2022ನೇ ಸಾಲಿನ 15ನೇ ಹಣಕಾಸಿನ ಪರಿಷ್ಕೃತ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು. ಬಾಕಿ ಉಳಿದ ಬಿಲ್‌ ಪಾವತಿಗೆ ಅನುಮೋದನೆ ಕಲ್ಪಿಸಲಾಯಿತು.

ವೈಹಿದ್‌ ಜರ್ದಿ, ಅಮಜದ್‌ ಅಲಿ ಖರ್ಜಗಿ, ಸಂತೋಷ ಹೂಗಾರ, ವಿಜಯಲಕ್ಷ್ಮೀ ಷಣ್ಮುಖ, ಶಭಾನಾಬೇಗಂ ಮೀರು, ಕನ್ಯಾಕುಮಾರಿ ಪೂಜಾರಿ ಹಾಗೂ ಇತರ ಸದಸ್ಯರು, ವ್ಯವಸ್ಥಾಪಕ ಶಂಭುಲಿಂಗ ಕಿನ್ನೆ, ಕಿರಿಯ ಅಭಿಯಂತರ ಜಗದೀಶ, ಪರಿಸರ ಅಭಿಯಂತರ ರವಿಕಾಂತ ಮಿಸ್ಕಿನ್‌, ಸಿಬ್ಬಂದಿ ಅಂಬರಾಯ ಲೋಕಾಣೆ, ನೈರ್ಮಲ್ಯ ನಿರೀಕ್ಷಕ ಲಕ್ಷ್ಮಣ ತಳವಾರ, ರಾಘವೇಂದ್ರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.