ರೈಲು ಹತ್ತುವಾಗ ಬಿದ್ದ ಪ್ರಯಾಣಿಕನ ರಕ್ಷಣೆ


Team Udayavani, Feb 26, 2022, 9:30 AM IST

1train

ಕಲಬುರಗಿ: ನಗರದ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತುವ ಭರದಲ್ಲಿ ಕೆಳಗಡೆ ಬೀಳುತ್ತಿದ್ದ ಪ್ರಯಾಣಿಕನನ್ನು ಪೊಲೀಸ್‌ ಕಾನ್‌ಸ್ಟೇಬಲ್‌ ರಕ್ಷಿಸಿದ್ದಾರೆ.

ಗುರುವಾರ ಸೊಲ್ಲಾಪುರದಿಂದ ಹಾಸನಕ್ಕೆ ಹೊರಟಿದ್ದ ರೈಲು ರಾತ್ರಿ 9 ಗಂಟೆಗೆ ಸುಮಾರಿಗೆ ಬಂದು ನಿಂತಿತ್ತು. ಈ ವೇಳೆ ಜನರಲ್‌ ಬೋಗಿಗೆ 28 ವರ್ಷದ ಅನಿಲ ಎಂಬಾತ ಹತ್ತಲು ಮುಂದಾಗಿದ್ದ. ಆಗ ರೈಲು ಮುಂದಕ್ಕೆ ಚಲಿಸಿತು. ಇದರಿಂದ ನಿಯಂತ್ರಣ ತಪ್ಪಿ ಅನಿಲ ಕೆಳಗೆ ಬಿದ್ದಿದ್ದ. ಫ್ಲಾಟ್‌ ಫಾರಂನಿಂದ ಜಾರಿ ರೈಲಿನ ಚಕ್ರಕ್ಕೆ ಸಿಲುಕುವ ಹಂತಕ್ಕೆ ತಲುಪಿದ್ದ. ಈ ಸಮಯದಲ್ಲಿ ಫ್ಲಾಟ್‌ ಫಾರಂನಲ್ಲಿದ್ದ ಕರ್ನಾಟಕ ರೈಲು ಪೊಲೀಸ್‌ ಇಲಾಖೆ ಕಾನ್‌ಸ್ಟೇಬಲ್‌ ಪ್ರವೀಣ ತಕ್ಷಣಕ್ಕೆ ದೌಡಾಯಿಸಿ ಕೆಳಗೆ ಬಿದ್ದಿದ್ದ ಅನಿಲನ ರಕ್ಷಣೆಗೆ ಮುಂದಾಗಿದ್ದರು.

ಅಲ್ಲದೇ, ಇನ್ನಿಬ್ಬರು ಕಾನ್‌ಸ್ಟೆàಬಲ್‌ಗ‌ಳಾದ ಭಾವಸಾಬ್‌, ಶಂಕರ ಸಹ ನೆರವಿಗೆ ಬಂದಿದ್ದರು. ಆದರೆ, ರೈಲಿನ ಚಲನೆ ವೇಗವಾಗಿದ್ದರಿಂದ ಅನಿಲ ಹಾಗೆ ಜಾರಿಕೊಂಡು ಮುಂದೆ ಹೋಗಿದ್ದ. ಈ ವೇಳೆ ಕಾನ್‌ಸ್ಟೇಬಲ್‌ ಪ್ರವೀಣ ಪಟ್ಟು ಬಿಡದೇ ಆತನನ್ನು ಫ್ಲಾಟ್‌ ಫಾರಂನ ಮೇಲಕ್ಕೆ ಎಳೆದು ರಕ್ಷಿಸುವ ಮೂಲಕ ಸಾಹಸ ಮೆರೆದಿದ್ದಾನೆ. ಈ ಘಟನೆಯ ಸಂಪೂರ್ಣ ದೃಶ್ಯಗಳು ರೈಲ್ವೆ ನಿಲ್ದಾಣದ ಸಿಸಿಟಿವಿಯಲ್ಲಿ ಸೆರೆಯಾಗಿವೆ.

ಜನರಲ್‌ ಬೋಗಿಯಲ್ಲಿ ಹತ್ತುವ ಜನರು ಹೆಚ್ಚಾಗಿ ಇರುತ್ತಾರೆ. ಇದರಿಂದ ಅವಸರದಲ್ಲೇ ಪ್ರಯಾಣಿಕರು ಏರುವುದು ಸಾಮಾನ್ಯ. ಆದ್ದರಿಂದ ರೈಲ್ವೆ ಪೊಲೀಸರು ಮತ್ತು ಸಿಬ್ಬಂದಿ ಜನರಲ್‌ ಬೋಗಿಯ ಕಡೆಯೇ ಗಮನ ಹರಿಸಿ ನಿಂತಿರುತ್ತೇವೆ. ಹೀಗಾಗಿ ಈ ಪ್ರಯಾಣಿಕನನ್ನು ರಕ್ಷಣೆ ಮಾಡಲು ಸಾಧ್ಯವಾಯಿತು ಎಂದು ಕಾನ್‌ಸ್ಟೇಬಲ್‌ ಪ್ರವೀಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.