ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ
Team Udayavani, Jul 23, 2019, 9:48 AM IST
ಕಲಬುರಗಿ: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಕಲಬುರಗಿ: ಕೇಂದ್ರ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಕೃಷಿ, ಕೂಲಿ ಕಾರ್ಮಿಕರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅರಣ್ಯ ಭೂಮಿ ಹಕ್ಕು ಕಾಯ್ದೆ ದುಲರ್ಬಗೊಳಿಸಲು ಯತ್ನಿಸುತ್ತಿದ್ದು, ದೇಶಾದ್ಯಂತ ಲಕ್ಷಾಂತರ ಆದಿವಾಸಿಗಳು ಹಾಗೂ ಅರಣ್ಯವಾಸಿಗಳು ಒಕ್ಕಲೆಬ್ಬಿಸಲ್ಪಡುವ ಭೀತಿಯಲ್ಲಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸುಪ್ರಿಂಕೋರ್ಟ್ ತಿರಸ್ಕೃತಗೊಂಡ ಅರಣ್ಯ ಭೂಮಿ ಹಕ್ಕುಗಳ ಅರ್ಜಿದಾರರನ್ನು ತಕ್ಷಣವೇ ಒಕ್ಕಲೆಬ್ಬಿಸುವಂತೆ ಸರ್ಕಾರಕ್ಕೆ ಆದೇಶಿಸಿತ್ತು. ಜನರ ಒತ್ತಾಯದ ಮೇರೆಗೆ ಆದೇಶಕ್ಕೆ ಜು.10ರ ವರೆಗೆ ತಡೆಯಾಜ್ಞೆ ಕೊಡಲಾಗಿತ್ತು. ಮುಂದಿನ ವಿಚಾರಣೆ ಜು.24ಕ್ಕೆ ಬರಲಿದೆ. ಈ ನಡುವೆ ಸರ್ಕಾರ ಸುಪ್ರಿಂಕೋರ್ಟ್ ನಿರ್ದೇಶನದಂತೆ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಕ್ರಮವಹಿಸಿದೆ. ಆದಾಗ್ಯೂ, ಲಕ್ಷಾಂತರ ಅರ್ಜಿದಾರರು ಭೀತಿಗೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಅಲ್ಲದೇ, ಕೇಂದ್ರ ಸರ್ಕಾರ 1927ರ ಅರಣ್ಯ ಕಾಯ್ದೆಗೆ ತಿದ್ದುಪಡಿ ಮಾಡಿ ಅರಣ್ಯ ಹಾಗೂ ಖನಿಜ ಸಂಪನ್ಮೂಲಗಳನ್ನು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ಅನುಕೂಲ ಮಾಡಿಕೊಡಲು ಹೊರಟಿದೆ. ಆದ್ದರಿಂದ ಕೂಡಲೇ ಆದಿವಾಸಿಗಳು ಹಾಗೂ ಅರಣ್ಯವಾಸಿಗಳು ಭೂಮಿ ಹಕ್ಕು ಪಡೆಯುವ ಕುರಿತಂತೆ ಕಾಯ್ದೆಗೆ ಸೂಕ್ತ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.
ಡಾ| ಎಂ.ಎಸ್. ಸ್ವಾಮಿನಾಥನ್ ವರದಿ ಶಿಫಾರಸಿನಂತೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಸೂಕ್ತ ಬೆಲೆ ನೀಡಿ ಬೆಳೆಗಳ ಖರೀದಿಸುವ ಕಾಯ್ದೆ ಮತ್ತು ಎಲ್ಲ ಕೃಷಿಕರಿಗೆ ಅಗತ್ಯ ಸಾಲ ಒದಗಿಸಬೇಕು. ಬೆಳೆ ನಷ್ಟದ ಸಂದರ್ಭದಲ್ಲಿ ಮನ್ನಾ ಮಾಡುವ ಕಾಯ್ದೆಗಳನ್ನು ಸಂಸತ್ತಿನಲ್ಲಿ ಮಂಡಿಸಿ ಅಂಗೀಕರಿಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.
ಮಳೆ, ಬೆಳೆ ಇಲ್ಲದೇ ರೈತರು ಹಾಗೂ ಕೃಷಿ ಕೂಲಿಕಾರರು ಮಹಾನಗರಗಳಿಗೆ ಗುಳೆ ಹೋಗುತ್ತಿದ್ದಾರೆ. ಕೂಡಲೇ ಅದನ್ನು ತಡೆಯಲು ಸೂಕ್ತ ಕ್ರಮ ಕೈಗೊಳ್ಳಬೇಕು. ಬೇಸಿಗೆಯಲ್ಲಿ ಕೆಲಸ ಮಾಡಿದ ಉದ್ಯೋಗ ಖಾತ್ರಿ ಯೋಜನೆ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ, ಅಶೋಕ ಮ್ಯಾಗೇರಿ, ಪಾಂಡುರಂಗ ಮಾವಿನ, ಮಲ್ಲಣಗೌಡ ಬನ್ನೂರ, ಶಾಂತಪ್ಪ ಪಾಟೀಲ, ಸುಭಾಷ ಹೊಸಮನಿ, ಸಿದ್ದಲಿಂಗಯ್ಯಸ್ವಾಮಿ ಯಂಪಳ್ಳಿ, ಸಿದ್ದು ಪಾಳಾ, ಸಿದ್ದರಾಮ, ಪರಶುರಾಮ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ