ಡೈರಿ ಉತ್ಪನ್ನಗಳ ಜಿಎಸ್ಟಿ ಹೆಚ್ಚಳಕ್ಕೆ ಪ್ರತಿಭಟನೆ
Team Udayavani, Jul 22, 2022, 5:37 PM IST
ಶಹಾಬಾದ: ಲೇಬಲ್ ಹಾಕಿದ ಮೊಸರು, ಮಜ್ಜಿಗೆಗೆ ಜಿಎಸ್ಟಿ ವಿ ಧಿಸುವ ಹಾಗೂ ಡೈರಿ ಉತ್ಪನ್ನಗಳಿಗೆ ಜಿಎಸ್ಟಿ ಹೆಚ್ಚಿಸಿದ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಬುಧವಾರ ಎಸ್ಯುಸಿಐ ಪಕ್ಷದ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಎಸ್ಯುಸಿಐ (ಸಿ) ಪಕ್ಷದ ಸ್ಥಳೀಯ ಸಮಿತಿ ಕಾರ್ಯದರ್ಶಿ ಗಣಪತರಾವ ಮಾನೆ ಮಾತನಾಡಿ, ಮೊದಲೇ ಲೇಬಲ್ ಹಚ್ಚಿದ ಮತ್ತು ಪ್ಯಾಕೇಟ್ ಮಾಡಿರುವ ಮೊಸರು, ಲಸ್ಸಿ, ಮಜ್ಜಿಗೆ ಮೇಲೆ ಶೇ.5 ಜಿಎಸ್ಟಿ ವಿಧಿ ಸಲು ಮತ್ತು ಡೈರಿ ಯಂತ್ರೋಪಕರಣ, ಹಾಲು ಕರೆಯುವ ಯಂತ್ರಗಳಿಗೆ ಶೇ.12ರಿಂದ ಶೇ.18ಕ್ಕೆ ಜಿಎಸ್ಟಿ ಏರಿಸಲು ಚಂಡೀಗಡದಲ್ಲಿ ನಡೆದ 47ನೇ ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರವನ್ನು ಎಸ್ಯುಸಿಐ ಉಗ್ರವಾಗಿ ಖಂಡಿಸುತ್ತದೆ. ಕೂಡಲೇ ಇದನ್ನು ವಾಪಸ್ ತೆಗೆದುಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಎಸ್ಯುಸಿಐ ಜಿಲ್ಲಾ ಸಮಿತಿ ಸದಸ್ಯ ರಾಮಣ್ಣ ಎಸ್. ಇಬ್ರಾಹಿಂಪುರ ಮಾತನಾಡಿ, ಹೈನುಗಾರಿಕೆ ಮೇಲೆ ಲಕ್ಷಾಂತರ ಕುಟುಂಬಗಳು ಅವಲಂಬಿತವಾಗಿವೆ. ಇದರಲ್ಲಿ ಶೇ.71 ಮಹಿಳೆಯರು ಇದ್ದಾರೆ. ಅಲ್ಲದೇ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಹೈನುಗಾರಿಕೆಯೇ ಗ್ರಾಮೀಣ ಜನರ ಜೀವ ಉಳಿಸಿದೆ. ಇಂತಹದ್ದರಲ್ಲಿ ಜಿಎಸ್ಟಿ ಹೇರಿಕೆ ಸಮಂಜಸವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪಕ್ಷದ ಸದಸ್ಯರಾದ ರಾಘವೇಂದ್ರ ಎಂ.ಜಿ, ಜಗನ್ನಾಥ ಎಸ್.ಎಚ್. ಸಿದ್ಧು ಚೌಧರಿ, ಗುಂಡಮ್ಮ ಮಡಿವಾಳ, ರಾಜೇಂದ್ರ ಅತನೂರ, ಮಹಾದೇವಿ ಮಾನೆ, ಮಹಾದೇವಿ ಅತನೂರ, ಅಂಬಿಕಾ ಗುರುಜಾಲಕರ್, ರಮೇಶ ದೇವಕರ್. ಅಜಯ್ ಎ. ರಘು ಪವಾರ ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!