ಕಲಬುರಗಿ: ಕಂಟೈನ್ ಮೆಂಟ್ ಝೋನ್ ತೆರವುಗೊಳಿಸಲು ಬಂದ ಸಂಸದ ಜಾಧವ್ ಗೆ ಘೇರಾವ್
Team Udayavani, May 10, 2020, 3:22 PM IST
ಕಲಬುರಗಿ: ಜಿಲ್ಲೆಯ ವಾಡಿ ಪಟ್ಟಣದಲ್ಲಿ ಕಂಟೈನ್ ಮೆಂಟ್ ಝೋನ್ ಮುಕ್ತಗೊಳಿಸಲು ತೆರಳಿದ್ದ ಸಂಸದ ಡಾ.ಉಮೇಶ ಜಾಧವ್ ಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿದ ಘಟನೆ ರವಿವಾರ ನಡೆದಿದೆ.
ಎರಡು ವರ್ಷದ ಮಗುವಿಗೆ ಕೋವಿಡ್-19 ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮಗುವಿನ ಕುಟುಂಬ ವಾಸವಿದ್ದ ಪಿಲಕಮ್ಮ ಬಡಾವಣೆಯನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಿ ಸೀಲ್ ಡೌನ್ ಮಾಡಲಾಗಿತ್ತು.
ಮಗು ಸೋಂಕು ಮುಕ್ತವಾಗಿದ್ದು, ಆ ಬಡಾವಣೆಯಲ್ಲಿ ಮತ್ತೆ ಯಾರಿಗೂ ಸೋಂಕು ಕಾಣಿಸಿಕೊಂಡಿಲ್ಲ. ಅಲ್ಲದೇ, ಸೀಲ್ ಡೌನ್ ಮಾಡಿ 28 ದಿನಗಳ ಕಳೆದಿರುವುದರಿಂದ ರವಿವಾರ ಸಂಸದ ಜಾಧವ್ ಬಡಾವಣೆಗೆ ಹಾಕಿದ್ದ ಬ್ಯಾರಿಕೇಡ್ ತೆರವುಗೊಳಿಸಲು ಬಂದಿದ್ದರು.
ಆದರೆ, ಸ್ಥಳದಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು ಎಷ್ಟು ದಿನ ಸೀಲ್ ಡೌನ್ ಇದ್ದರೂ, ಬಡಾವಣೆ ಜನರನ್ನು ಪರಿಸ್ಥಿತಿ ನೋಡಲು ಬಾರದ ಸಂಸದರು ಈಗ ಬಂದಿದ್ದಾರೆ. ಸಂಸದರು ಕಂಟೈನ್ ಮೆಂಟ್ ಝೋನ್ ತೆರವುಗೊಳಿಸುವುದು ಬೇಡ. ಪೊಲೀಸರು, ಆರೋಗ್ಯ ಇಲಾಖೆಯೇ ಅಧಿಕಾರಿಗಳು ತರೆವುಗೊಳಿಸಲಿ ಎಂದು ಸಂಸದ ಜಾಧವ್ ಗೆ ಘೇರಾವ್ ಹಾಕಿದರು.
ಪೊಲೀಸರು ಮಧ್ಯ ಪ್ರವೇಶಿಸಿ ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದರು. ಆಗ ಸಂಸದ ಜಾಧವ್ ಬ್ಯಾರಿಕೇಡ್ ತೆರೆಯುವ ಮೂಲಕ ಕಂಟೈನ್ ಮೆಂಟ್ ಝೋನ್ ಮುಕ್ತಗೊಳಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಸಂಸದರಿಗೆ ಶೇಮ್ ಶೇಮ್ ಎಂದು ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ