ಅಸಂಘಟಿತ ಕಾರ್ಮಿಕರಿಂದ ಪ್ರತಿಭಟನೆ
Team Udayavani, Feb 1, 2019, 6:39 AM IST
ಕಲಬುರಗಿ: ಕೇಂದ್ರ ಸರ್ಕಾರ ತರಲು ಹೊರಟಿರುವ ಸಾಮಾಜಿಕ ಭದ್ರತೆ, ಕಲ್ಯಾಣ ಮತ್ತು ಔದ್ಯೋಗಿಕ, ಆರೋಗ್ಯ, ಸುರಕ್ಷಾ ಕರಡು ಮಸೂದೆ ರದ್ದುಪಡಿಸಬೇಕು. ಕಟ್ಟಡ ಕಾರ್ಮಿಕರ ಪತ್ನಿಗೆ ಹೆರಿಗೆಯಾದರೆ ಆಕೆಯ ಪತಿಗೂ ಹೆರಿಗೆ ರಜೆ ವಿಸ್ತರಣೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘದ ನೇತೃತ್ವದಲ್ಲಿ ನಗರದ ಅಂಚೆ ಕಚೇರಿ ಎದುರು ಅಸಂಘಟಿತ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಅಂಚೆ ಇಲಾಖೆ ನೌಕರರ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬಜೇಟ್ನಲ್ಲಿ ಶೇ.3 ರಷ್ಟು ಅನುದಾನವನ್ನು ಅಸಂಘಟಿತ ಕಾರ್ಮಿಕರ ಕಲ್ಯಾಣ ಯೋಜನೆಗಳಿಗೆ ಒದಗಿಸುವಂತೆ, ಕಟ್ಟಡ ಕಾರ್ಮಿಕರ ನೋಂದಣಿ ನವೀಕರಣ ಹಾಗೂ ಸೌಲಭ್ಯ ಕೊಡಿಸುವಲ್ಲಿ ಕಾರ್ಮಿಕರ ಸಂಘಟನೆಗಳ ಪಾತ್ರ ಇರುವುದನ್ನು ಮುಂದುವರಿಸಿಕೊಂಡು ನೋಂದಾಯಿತ ಕಟ್ಟಡ ಕಾರ್ಮಿಕರ ಪತ್ನಿಯರಿಗೆ ಹೆರಿಗೆಯಾದ ಸಂದರ್ಭದಲ್ಲಿ ಪುರುಷ ಕಾರ್ಮಿಕರಿಗೂ ಹೆರಿಗೆ ರಜೆ ನೀಡುವಂತೆ ಒತ್ತಾಯಿಸಿದರು.
ಕಳೆದ ಮಂಡಳಿ ಸಭೆಯಲ್ಲಿ ನಿರ್ಣಯಿಸಿದಂತೆ ಎಲ್ಕೆಜಿಯಿಂದ ವಿದ್ಯಾಭ್ಯಾಸದ ಸೌಲಭ್ಯ, ಸ್ವಾಭಾವಿಕ ಮರಣ ಧನ ಸಹಾಯ 2 ಲಕ್ಷ ರೂ., ಮನೆ ಕಟ್ಟಲು ಸಾಲ ಹಾಗೂ ಇತರ ಸೌಲಭ್ಯಗಳ ತೀರ್ಮಾನಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸಲು ಆಗ್ರಹಿಸಿದರು.
ಜಿಲ್ಲಾ ಸಂಚಾಲಕ ಶಂಕರ ಕಟ್ಟಿಸಂಗಾವಿ, ರವಿ ಡೊಂಗರಗಾಂವ್, ಅಭಿಲಾಷ ಬಿ., ಫತ್ರು ಪಟೇಲ, ಬಾಬು ಬಡಿಗೇರ, ವೀರಶೆಟ್ಟಿ ಸುಂಠಾಣ, ಚಂದ್ರಕಾಂತ ಹೂಗಾರ, ಗುರು ಘತ್ತರಗಿ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು