ಕಬ್ಬಿನ ಬಾಕಿ ಹಣ ಪಾವತಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Sep 7, 2018, 1:45 PM IST
ಅಫಜಲಪುರ: ತಾಲೂಕಿನ ರೇಣುಕಾ ಸಕ್ಕರೆ ಕಾರ್ಖಾನೆಯವರು ಕಬ್ಬಿನ ಬಾಕಿ ಹಣ ಪಾವತಿ ಮಾಡುತಿಲ್ಲ ಎಂದು ಕಾರ್ಖಾನೆ ಎದುರು ರೈತರು ಪ್ರತಿಭಟನೆ ಮಾಡುವ ವೇಳೆ ಬಾಕಿ ಹಣ ಪಾವತಿಗಾಗಿ ಆಗ್ರಹಿಸಿ ರೈತನೊಬ್ಬ ವಿಷ ಸೇವನೆಗೆ ಮುಂದಾದ ಘಟನೆ ನಡೆಯಿತು.
ತಾಲೂಕಿನ ಹವಳಗಾದಲ್ಲಿರುವ ರೇಣುಕಾ ಸಕ್ಕರೆ ಕಾರ್ಖಾನೆಯವರು ರೈತರ ಕಬ್ಬಿನ ಬಾಕಿ ಒಂಭತ್ತು ತಿಂಗಳು ಕಳೆದರೂ ರೈತರ ಖಾತೆಗೆ ಹಾಕದ ಹಿನ್ನೆಲೆಯಲ್ಲಿ ಕಾರ್ಖಾನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿರುವಾಗ ರೈತ ಮಲ್ಲು ಬಳೂರ್ಗಿ ಎನ್ನುವರು ವಿಷ ಸೇವನೆಗೆ ಮುಂದಾದರು. ಕೂಡಲೇ ಉಳಿದ ಪ್ರತಿಭಟನಾಕಾರರು ಈ
ಕೃತ್ಯವನ್ನು ತಡೆದರು.
ನಂತರ ಪ್ರತಿಭಟನೆಯನ್ನು ಉದ್ದೇಶಿಸಿ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ, ಕಾರ್ಖಾನೆಯವರು ತಾಲೂಕಿನ ರೈತರ ಕಬ್ಬನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿರುವುದಲ್ಲದೇ ಹಣ ಪಾವತಿ ಮಾಡುವಲ್ಲಿಯೂ ವಿಳಂಬ ಮಾಡುತ್ತಿದ್ದಾರೆ. ಇದರಿಂದ ರೈತರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಸಾಲ ಮಾಡಿ ಸಂಸಾರ ಮಾಡುತ್ತಿದ್ದಾರೆ. ಸಾಲ ಮರುಪಾವತಿ ಮಾಡಲಾಗದ ಪರಿಸ್ಥಿತಿ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಷ್ಟೆಲ್ಲ ಕಷ್ಟದಲ್ಲಿರುವ ರೈತರಿಗೆ ಕಾರ್ಖಾನೆಯವರು ದಾನ ನೀಡುವುದಿಲ್ಲ. ಕಬ್ಬು ಖರೀದಿಸಿ ಅವರಿಗೆ ಸಿಗಬೇಕಾದ ಹಣ ಪಾವತಿ ಮಾಡುವಲ್ಲಿ ವಿಳಂಬ ಮಾಡುವುದು ಸರಿಯಲ್ಲ ಎಂದರು.
ರೈತರನ್ನುದ್ದೇಶಿಸಿ ಕಾರ್ಖಾನೆ ಆಡಳಿತ ಮಂಡಳಿ ಅಧಿಕಾರಿ ಬಿ.ಪಿ. ಹೂಗಾರ ಮಾತನಾಡಿ, ರೈತರು ಆತ್ಮಹತ್ಯೆಗೆ ಯತ್ನಿಸುವುದು ಬೇಡ, ಆದಷ್ಟು ಬೇಗ ಬಾಕಿ ಹಣವನ್ನು ರೈತರ ಖಾತೆಗೆ ಪಾವತಿಸಲಾಗುತ್ತದೆ ಎಂದು ಭರವಸೆ ನೀಡಿದ ಮೇಲೆ ರೈತರು ಪ್ರತಿಭಟನೆಯಿಂದ ಹಿಂದಕ್ಕೆ ಸರಿದರು. ರೈತ ಮುಖಂಡರಾದ ಭೀಮರಾಯಗೌಡ ಪಾಟೀಲ, ಭಾಗಣ್ಣ ಕುಂಬಾರ, ಮಲ್ಲು ಬಳೂರ್ಗಿ, ರಾಜು ಉಂಡಿ, ಲಗಮಣ್ಣ ಪೂಜಾರಿ, ಕಾಂತು ಪಾಟೀಲ, ನಿಂಗಣ್ಣ ಕೆರಮಗಿ, ಪರೇಪ್ಪ ಬಳೂರ್ಗಿ ಇತರರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?