ಮದ್ಯದಂಗಡಿ ವಿರೋಧಿಸಿ ಪ್ರತಿಭಟನಾ ಮೆರವಣಿಗ
Team Udayavani, Jan 23, 2018, 10:30 AM IST
ಕಲಬುರಗಿ: ರಾಮಮಂದಿರದ ಎದುರಿರುವ ಮದ್ಯದಂಗಡಿ ಹಾಗೂ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಡಾ| ಬಾಬು ಜಗಜೀವನರಾಂ ಪುತ್ಥಳಿ ಹತ್ತಿರದ ಬಾರ್ನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಶ್ರಮಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರ ಹಿರೇಮಠ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಾಗೂ ಅಬಕಾರಿ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು ಜ.8ರಂದು ಹೋರಾಟ ರೂಪಿಸಿದಾಗ ಒಂದು ಮದ್ಯದಂಗಡಿ ಸ್ಥಗಿತಗೊಳಿಸಿ ಮತ್ತೂಂದು ಮದ್ಯದಂಗಡಿ ಬಂದ್ಗೆ ನೋಟಿಸ್ ಜಾರಿ ಮಾಡಲಾಗಿತ್ತು. ಆದರೂ ಬಂದ್ ಮಾಡಿದ ಮದ್ಯದಂಗಡಿ ಮತ್ತೆ ಸಂಜೆ ಆರಂಭವಾಗಿತ್ತು. ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತೆ ಕಾಲಾವಕಾಶ ಕೋರಿದ್ದು ಸರಿಯಲ್ಲ ಎಂದರು.
ರಾಮಮಂದಿರ ಬಳಿ 100 ಮೀಟರ್ ವ್ಯಾಪ್ತಿಯಲ್ಲಿ ಮದ್ಯದಂಗಡಿಯಿರುವುದು ಕಾನೂನು ಬಾಹಿರವಾಗಿದೆ. ಸೂಕ್ತ ಕ್ರಮದ ಭರವಸೆ ನೀಡಲಾಗಿತ್ತು. ಆದರೂ ಈಗ ಮದ್ಯದಂಗಡಿ ಮತ್ತೆ ಆರಂಭಿಸಲು ಅನುಮತಿ ನೀಡಲಾಗಿದೆ. ಅದೇ ರೀತಿ ಉದ್ಯಾನವನ ಬಳಿ ನೋಟಿಸ್ ಜಾರಿ ಮಾಡುವುದಾಗಿ ನೀಡಿದ ಭರವಸೆ ಹುಸಿಯಾಗಿದೆ. ಕೂಡಲೇ ಕಾನೂನು ಕ್ರಮದ ಮೂಲಕ ಮದ್ಯದಂಗಡಿಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿದರು.
ಶ್ರೀರಾಮ ಸೇನೆ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಶ್ರೀರಾಮ ಟ್ರಸ್ಟ್ನ ಮೃತ್ಯುಂಜಯ, ನ್ಯಾಯವಾದಿ ಮಧುಕರ ನಾಯಕ, ವಿಶ್ವಹಿಂದೂ ಪರಿಷತ್ನ ಸಂತೋಷ, ಜೈ ಕರ್ನಾಟಕ ಸಂಘಟನೆಯ ಮಲ್ಲಿಕಾರ್ಜುನ ಸಾರವಾಡ, ಪ್ರಹ್ಲಾದ ಮಠವಾರಿ, ಚಂದ್ರಕಾಂತ ಕೋಳಕಾರ, ಸುಭಾಷ ಕಾಂಬಳೆ, ಗುರುಶಾಂತ ಟೆಂಗಳಿ, ಮಹೇಶ ಗೊಡಬೋಲೆ ಹಾಗೂ ಮಹಿಳೆಯರು ಪ್ರತಿಭಟನಾ ಮೆರವಣಿಗೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ