ಖಾತ್ರಿ ಕೆಲಸ ನೀಡಲು ಹಿಂದೇಟು-ಪ್ರತಿಭಟನೆ


Team Udayavani, Feb 26, 2022, 11:41 AM IST

7protest

ವಾಡಿ: ಕೆಲಸ ಕೇಳಿಬರುವ ಗ್ರಾಮೀಣ ಭಾಗದ ಜನರಿಗೆ ಅಧಿಕಾರಿಗಳು ಉದ್ಯೋಗ ಖಾತ್ರಿಪಡಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ನಾಲವಾರ ಗ್ರಾಪಂ ನರೇಗಾ ಕಾರ್ಮಿಕರು ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದುಡಿಯುವ ಕೈಗಳಿಗೆ ಕೆಲಸ ನೀಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಪ್ರಾಂತ ರೈತ ಸಂಘದ ತಾಲೂಕು ಅಧ್ಯಕ್ಷ ಸಾಯಬಣ್ಣ ಗುಡುಬಾ, ನಾಲವಾರ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಕೆಲಸಕ್ಕಾಗಿ ಬೇಡಿಕೆಯಿಟ್ಟು ನಮೂನೆ-6ರಲ್ಲಿ ಕಾರ್ಮಿಕರು ಪಂಚಾಯಿತಿಗೆ ಅರ್ಜಿ ಸಲ್ಲಿಸಿದರೂ ಕೆಲಸ ಒದಗಿಸುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ತಿಂಗಳಿಗೆ ಮೂರು ನಾಲ್ಕು ದಿನ ಕೆಲಸ ನೀಡಿದರೆ ಬಡ ಕುಟುಂಬಗಳು ಬದುಕಲು ಸಾಧ್ಯವಿಲ್ಲ. ಕೂಲಿ ಕೆಲಸವನ್ನೇ ನಂಬಿಕೊಂಡು ಜೀವನ ನಡೆಸುತ್ತಿರುವ ಹಳ್ಳಿಯ ಜನರಿಗೆ ನರೇಗಾ ಆಸರೆಯಾಗುತ್ತಿಲ್ಲ. ಇದರಿಂದ ಸರ್ಕಾರದ ಉದ್ಯೋಗ ಖಾತ್ರಿ ಆಶಯ ಈಡೇರುತ್ತಿಲ್ಲ ಎಂದು ಆಪಾದಿಸಿದರು.

ಮಹಿಳಾ ಕಾರ್ಮಿಕರನ್ನು ಗೌರವದಿಂದ ಕಾಣಬೇಕಾದ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು, ಕೆಲಸ ಕೇಳಲು ಕಚೇರಿಗೆ ಬರುವ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ. ಹಸಿವು ನೀಗಿಸಿಕೊಳ್ಳಲು ಮುಂದಾದರೆ ಅವಮಾನಿಸಿ ಕಳುಹಿಸಲಾಗುತ್ತಿದೆ. ಬಡವರ ಬಗ್ಗೆ ನಾಲವಾರ ಗ್ರಾಪಂ ಅಧಿಕಾರಿಗಳಿಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸಾಯಬಣ್ಣ ಗುಡುಬಾ, ಉದ್ಯೋಗ ನೀಡದೇ ವಂಚಿಸುತ್ತಿರುವ ಮತ್ತು ಮಹಿಳಾ ಕಾರ್ಮಿಕರನ್ನು ಅವಮಾನಿಸುತ್ತಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕಾರ್ಮಿಕರಾದ ಸಿದ್ಧಮ್ಮ ಮಳಬಾ, ತೋಟಮ್ಮ, ನಿಂಗಪ್ಪ ಹೊನಗುಂಟಿ, ಸೋಮಶೇಖರ ಪೂಜಾರಿ, ಪಾರ್ವತಿ ಮಳಬಾ ಹಾಗೂ ನೂರಾರು ನರೇಗಾ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.