ಪೊಲೀಸರ ದೌರ್ಜನ್ಯ ಖಂಡಿಸಿ ಶವವಿಟ್ಟು ಪ್ರತಿಭಟನೆ


Team Udayavani, May 28, 2022, 12:20 PM IST

9protest

ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ಮರತೂರು ಗ್ರಾಮದ ಮಂಜುನಾಥ ಶಂಕರ ಸಿಂಧೆ (32) ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಕುಟುಂಬದ ಸದಸ್ಯರು ಹಾಗೂ ಮೃತನ ಪತ್ನಿ ಡಿವೈಎಸ್ಪಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪೊಲೀಸರು ಬುಧವಾರ ಹಾಗೂ ಗುರುವಾರ ಶಂಕರನ ವಿಚಾರಣೆ ನಡೆಸಿ ಸಿಕ್ಕಾಪಟ್ಟೆ ಥಳಿಸಿದ್ದರು. ಅಲ್ಲದೇ ಜೈಲಿಗೆ ತಳ್ಳುವ ಭಯವೊಡ್ಡಿದ್ದರಿಂದ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ದೂರಿದರು. ಪೊಲೀಸರು ಹಾಗೂ ಮಗು ಕಳ್ಳತನ ಮಾಡಿದ್ದಾನೆಂದು ದೂರು ನೀಡಿರುವ ಸಾಯಿಬಣ್ಣ ಜೋಗೂರು ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಶವದ ಮೇಲಿದ್ದ ಹೊಡೆದ ಗುರುತುಗಳನ್ನು ಸಿಪಿಐಗೆ ತೋರಿಸಿದರು. ಈ ವೇಳೆ ತುಸು ವಾಗ್ವಾದವೂ ನಡೆಯಿತು. ಸಂಜೆ ಪೊಲೀಸರು, ದೂರುದಾರರು ಮತ್ತು ಮೃತನ ಪತ್ನಿ ಸೀತಾ ಮಧ್ಯೆ ಮಾತುಕತೆ ನಡೆದು ಶವ ತೆಗೆದುಕೊಂಡು ಮರತೂರಕ್ಕೆ ಹೋಗಿ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏನಿದು ಪ್ರಕರಣ: ಬುಧವಾರ ಮಂಜುನಾಥ ಪತ್ನಿ ಸೀತಾಳ ಅಣ್ಣ ನಾಗೇಶ್‌ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತನ್ನ ಮಗನನ್ನು ತಾಯಿ ಪ್ರತಿಭಾಳ ಬಳಿಯಿಂದ ಕರೆದುಕೊಂಡು ಹೋಗಿದ್ದ. ಅದರೆ ಆ ಮಗುವನ್ನು ಸೀತಾಳ ಗಂಡ ಮಂಜುನಾಥ ಕರೆದುಕೊಂಡು ಹೋಗಿದ್ದಾನೆಂದು ಪ್ರತಿಭಾಳ ತಂದೆ ಸಾಯಿಬಣ್ಣ ಜೋಗೂರು ಪೊಲೀಸರಿಗೆ ದೂರು ನೀಡಿದ್ದರು. ಇದರಿಂದಾಗಿ ಬುಧವಾರ ಮತ್ತು ಗುರುವಾರ ಕರೆಯಿಸಿ ಮಂಜುನಾಥನನ್ನು ಪೊಲೀಸರ ವಿಚಾರಣೆ ಮಾಡಿದ್ದರು.

ಡೆತ್‌ ನೋಟ್‌ನಲ್ಲೇನಿದೆ?

ಮಂಜುನಾಥ ನೇಣು ಹಾಕಿಕೊಳ್ಳುವ ಮುನ್ನ ಡೆತ್‌ ನೋಟು ಬರೆದಿಟ್ಟಿದ್ದಾನೆ. “ನಾನು ಮರ್ಯಾದಸ್ತ ಕುಟುಂಬದವ. ಜೀವನದಲ್ಲಿ ಯಾವ ತಪ್ಪು ಮಾಡಿಲ್ಲ. ನನ್ನ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ. ಎಫ್‌ಐಆರ್‌ ಮಾಡಿದ್ದಲ್ಲದೇ, ನನ್ನನ್ನು ಮತ್ತು ಹೆಂಡತಿಯನ್ನು ಜೈಲಿಗೆ ಹಾಕುವುದಾಗಿ ಹೇಳಿದ್ದಾರೆ. ಇದು ನನಗಾದ ಅವಮಾನ. ನನ್ನ ಸಾವಿಗೆ ಸಾಯಿಬಣ್ಣ ಜೋಗೂರು, ಶರಣಮ್ಮ, ಪ್ರತಿಭಾ ಮತ್ತು ನಾಗೇಶ ಕಾರಣ. ಹೆಂಡತಿ ಸೀತಾಗಳಿಗೆ ಕ್ಷಮೆ ಕೋರಿ ನಾನು ನಿನಗೆ ಮೋಸ ಮಾಡಿದೆ. ನಿಮ್ಮನ್ನು ಬಿಟ್ಟು ಹೋಗುತ್ತಿದ್ದೇನೆ’ ಎಂದು ಬರೆದು ಮೃತಪಟ್ಟಿದ್ದಾನೆ.

ನಮ್ಮ ಪೊಲೀಸರು ಯಾವುದೇ ಟಾರ್ಚ್‌ರ್‌ ನೀಡಿಲ್ಲ. ಮಗು ಕಳ್ಳತನ ಪ್ರಕರಣದ ದೂರಿನ ಹಿನ್ನೆಲೆಯಲ್ಲಿ ಮಂಜುನಾಥನನ್ನು ಠಾಣೆಗೆ ಕರೆಯಿಸಿ ವಿಚಾರಣೆ ಮಾಡಿದ್ದು ನಿಜ. ಆದರೆ ಹೊಡೆದಿಲ್ಲ. ಹೊಡೆತದಿಂದ ಆತ ಸತ್ತಿಲ್ಲ. ಆತ ಮನೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ. ಡೆತ್‌ ನೋಟ್‌ ಕೂಡ ಬರೆದಿಟ್ಟಿದ್ದಾನೆ. -ಇಶಾ ಪಂತ್‌, ಎಸ್ಪಿ

ನನ್ನ ಗಂಡನಿಗೆ ಪೊಲೀಸರು ಹೊಡೆದಿದ್ದಾರೆ. ಅಲ್ಲದೇ ಜೈಲಿಗೆ ಹಾಕುವುದಾಗಿ ಹೇಳಿದ್ದಾರೆ. ಇದರಿಂದ ಆತ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಗೇಶ ಮತ್ತು ಪ್ರತಿಭಾಗಳಿಗೆ ಜಗಳ ಇತ್ತು. ನಾಗೇಶ ತನ್ನ ಮಗನನ್ನು ತಾನು ಕರೆದುಕೊಂಡು ಹೋದರೆ ನನ್ನ ಗಂಡನ ವಿರುದ್ಧ ದೂರು ನೀಡಿದವರ ವಿರುದ್ಧ ಕ್ರಮ ಆಗಬೇಕು, ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. -ಸೀತಾ, ಮೃತ ಮಂಜುನಾಥ ಪತ್ನಿ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.