ಟಿಪ್ಪು ಸುಲ್ತಾನ್ ಜಯಂತಿ ರದ್ದು ವಿರೋಧಿಸಿ ಪ್ರತಿಭಟನೆ
Team Udayavani, Aug 4, 2019, 11:10 AM IST
ಚಿತ್ತಾಪುರ: ಟಿಪ್ಪು ಸುಲ್ತಾನ್ ಜಯಂತಿ ರದ್ದು ಖಂಡಿಸಿ ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಚಿತ್ತಾಪುರ: ಮೈಸೂರಿನ ಹುಲಿ ಎಂದೇ ಪ್ರಖ್ಯಾತಿ ಪಡೆದಿರುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ರದ್ದುಗೊಳಿಸಿ ಹೊರಡಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಟಿಪ್ಪು ಸುಲ್ತಾನ್ ಸಂಯುಕ್ತ ರಂಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಗ್ರೇಡ್-2 ತಹಶೀಲ್ದಾರ್ ರವೀಂದ್ರ ದಾಮಾ ಅವರಿಗೆ ಮನವಿ ಸಲ್ಲಿಸಿದರು.
ಟಿಪ್ಪು ಸುಲ್ತಾನ್ ಒಂದು ಸಮುದಾಯ, ಒಂದು ರಾಜ್ಯಕ್ಕೆ ಸೀಮಿರಾದವರಲ್ಲ. ಬ್ರಿಟಿಷರ ವಿರುದ್ಧ ಹೋರಾಡಿದ ಅವರ ಛಾತಿ ಹಾಗೂ ರಾಜ್ಯಕ್ಕಾಗಿ ಮಕ್ಕಳನ್ನು ಒತ್ತೆಯಿಟ್ಟ ಅವರ ತ್ಯಾಗದಿಂದಾಗಿ ಅವರು ಇತಿಹಾಸದಲ್ಲಿ ಅಮರರಾಗಿದ್ದಾರೆ. ರಾಕೇಟ್ ತಂತ್ರಜ್ಞಾನ, ರೇಷ್ಮೆ ಬೆಳೆ, ನೀರಾವರಿ, ದೇವಸ್ಥಾನಗಳಿಗೆ ದತ್ತಿಯಂತಹ ಹಲವಾರು ಕ್ರಮಗಳಿಂದಾಗಿ ಅವರು ಜನಾನುರಾಗಿ ಆಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಸಾಧನೆಗಳನ್ನು ಇಂದಿನ ಪೀಳಿಗೆಗೆ ಮುಟ್ಟಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿತ್ತು. ಆದರೆ ಸಂಘ ಪರಿವಾರ ಟಿಪ್ಪು ಸುಲ್ತಾನ್ರನ್ನು ಬರೀ ಮುಸ್ಲಿಂ ಎನ್ನುವ ಕಾರಣಕ್ಕಾಗಿ ದ್ವೇಷದಿಂದ ಕಂಡು ಜಯಂತಿಯನ್ನು ರದ್ದು ಮಾಡಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಈ ನಿರ್ಧಾರವನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದರು. ಗ್ರೇಡ್-2 ತಹಶೀಲ್ದಾರ್ ರವೀಂದ್ರ ದಾಮಾ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಶಹಬಾದ ಡಿವೈಎಸ್ಪಿ ಕೆ. ಬಸವರಾಜ, ಸಿಪಿಐ ಪಂಚಾಕ್ಷರಿ ಸಾಲಿಮಠ, ದಲಿತ ಮತ್ತು ಮೈನಾರಿಟೀಸ್ ಸೇನೆ ತಾಲೂಕು ಅಧ್ಯಕ್ಷ ಆಸೀಫ್ ಶೇಖ, ಎಂ.ಡಿ ಅಲಿ, ಯೂತ್ ಅಧ್ಯಕ್ಷ ಎಂ.ಡಿ. ಹುಸೇನ್, ವಾಸೀಂ ಖಾನ್, ಹುಸೇನ್ ಪಗಡಿ, ಬಾಬಾ ಸೌದಾಗರ್, ಶೇಖ ಮೋಸಿನ್, ಶಫೀ ವಸ್ತಾದ್, ಹಫೀಜ್, ನಯೀಮ್, ಇಸ್ಮಾಯಿಲ್, ಇಬ್ರಾಹೀಂ ಶೇಖ, ಲತೀಫ್ ದಿಗ್ಗಾಂವ, ಅಖೀಲ್, ಖಾಲೀಕ್, ಫಾರೋಖ, ಅಬ್ಬು, ಯಾಸೀನ್ ಇಬ್ರಾಹೀಂಪುರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್