ಪಿಯು ಕಾಲೇಜು ವಿದ್ಯಾರ್ಥಿನಿಯರ ಪ್ರತಿಭಟನೆ
ಉಪನ್ಯಾಸಕರ ಖಾಲಿ ಹುದ್ದೆ ಭರ್ತಿ ಮಾಡಲು ಆಗ್ರಹ
Team Udayavani, Jul 2, 2019, 2:34 PM IST
ಆಳಂದ: ಸರ್ಕಾರಿ ಬಾಲಕಿಯರ ಪಿಯು ಕಾಲೇಜಿಗೆ ಸೂಕ್ತ ಸ್ಥಳಕ್ಕೆ ಆಗ್ರಹಿಸಿ ತಹಶೀಲ್ದಾರ್ ಬಸವರಾಜ ಎಂ. ಬೆಣ್ಣೆಶಿರೂರ ಅವರಿಗೆ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.
ಆಳಂದ: ಮೊದಲಿದ್ದ ಸ್ಥಳದಲ್ಲೇ ಸರ್ಕಾರಿ ಬಾಲಕಿಯರ ಪಿಯು ತರಗತಿಗಳು ನಡೆಸಬೇಕು ಎಂದು ಆಗ್ರಹಿಸಿ ಸಂಘಟನೆಗಳ ಆಶ್ರಯದಲ್ಲಿ ಕಾಲೇಜು ವಿದ್ಯಾರ್ಥಿನಿಯರು ಸೋಮವಾರ ಪ್ರತಿಭಟನೆ ನಡೆಸಿದರು.
ಕಾಲೇಜು ವಿದ್ಯಾರ್ಥಿನಿಯರು ಮತ್ತು ಕನ್ನಡಪರ ಸಂಘಟನೆಗಳ ಅನೇಕ ಕಾರ್ಯಕರ್ತರು ಸೇರಿ ಪ್ರಮುಖ ರಸ್ತೆಗಳ ಮೂಲಕ ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿ ತಾಲೂಕು ಮತ್ತು ಪಿಯು ಆಡಳಿತ ವ್ಯವಸ್ಥೆ ವಿರುದ್ಧ ಘೋಷಣೆ ಕೂಗಿದರು.
ಕಳೆದ ಸಾಲಿನಲ್ಲಿ ಬೋಧಿಸಿದ ಕಟ್ಟಡದಲ್ಲೇ ತರಗತಿ ನಡೆಸದೆ ಪಟ್ಟಣದಿಂದ ದೂರದ ಪ್ರದೇಶದಲ್ಲಿ ಪ್ರಾರಂಭಿಸಿದ್ದರಿಂದ ವಿದ್ಯಾರ್ಥಿನಿಯರಿಗೆ ತೊಂದರೆ ಅನುಭವಿಸುವಂತಾಗಿದೆ. ಕಳೆದ ಸಾಲಿನ ನಡೆಸಿದಂತೆ ಮೊದಲಿನ ಕಟ್ಟಡದಲ್ಲೇ ತರಗತಿ ನಡೆಸಬೇಕು ಎಂದು ಒತ್ತಾಯಿಸಿದರು.
ಉಪನ್ಯಾಸಕರ ಖಾಲಿ ಹುದ್ದೆಗಳಿಂದಾಗಿ ಶೈಕ್ಷಣಿಕ ಮಟ್ಟ ಕುಸಿಯುತ್ತಿದೆ. ಉಪನ್ಯಾಸಕರ ಖಾಲಿ ಹುದ್ದೆ ಕೂಡಲೇಭರ್ತಿ ಮಾಡಬೇಕು. ಕಾಲೇಜಿನ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಒದಗಿಸಬೇಕು ಹಾಗೂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಸಂಬಂಸಿದಂತೆ ಪ್ರಯೋಗಾಲಯ ಸ್ಥಾಪಿಸಿ ವಿದ್ಯಾರ್ಥಿನಿಯರ ಶೈಕ್ಷಣಿಕ ವ್ಯವಸ್ಥೆಗೆ ಅನುಕೂಲ ಒದಗಿಸಬೇಕು ಎಂದು ಆಗ್ರಹಿಸಿದರು.
ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಬಸವರಾಜ ಎಸ್. ಕೊರಳ್ಳಿ, ನಾಗರಾಜ ಘೋಡಕೆ, ನರೇಶ ಬೋಸ್ಲೆ, ಲಕ್ಷ್ಮೀಕಾಂತ ಉದನೂರ, ಅಮಿತ ಪಾಟೀಲ, ಸಚಿನ ವಾರಿಕ, ಸುನಿಲ ಐರೊಡಗಿ, ಕರಣ ರಾಠೊಡ, ದೌಲಪ್ಪ ವಣದೆ ಮತ್ತು ವಿದ್ಯಾರ್ಥಿನಿಯರಾದ ನಿಖೀತಾ, ಸರೋಜಾ, ಪ್ರೇಮಾ, ಸುಶ್ಮಿತಾ, ರತ್ನಾ, ಶೋಭಾ, ಈರಮ್ಮ, ಅರ್ಪಿತಾ, ಗಂಗಾ, ಸನ್ನಾ, ಕಾವೇರಿ ವಣದೆ, ಪೂಜಾ, ಪ್ರತಿಕ್ಷಾ, ಸ್ವಪ್ನಾ, ಕಾವೇರಿ, ರಾಜೇಶ್ರೀ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ