ಸಾರಿಗೆ ನೌಕರರ ಕುಟುಂಬಸ್ಥರ ಪ್ರತಿಭಟನೆ


Team Udayavani, Apr 13, 2021, 12:51 PM IST

ಸಾರಿಗೆ ನೌಕರರ ಕುಟುಂಬಸ್ಥರ ಪ್ರತಿಭಟನೆ

ಕಲಬುರಗಿ: ಸಾರಿಗೆ ನೌಕರರಿಗೆ ಆರನೇ ವೇತನ ಆಯೋಗದ ಅನ್ವಯ ಸಂಬಳ ಜಾರಿಮಾಡಬೇಕು ಎಂದು ಒತ್ತಾಯಿಸಿ ಮುಷ್ಕರದಲ್ಲಿ ತೊಡಗಿರುವ ನೌಕರರನ್ನು ವರ್ಗಾವಣೆಮಾಡಿರುವುದನ್ನು ವಿರೋಧಿಸಿ ಕುಟುಂಬ ವರ್ಗದವರು ಸೋಮವಾರ ನಗರದ ಈಶಾನ್ಯಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಡಿಪೋ ಮುಂದೆ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಾದ್ಯಂತ ನಡೆಸುತ್ತಿರುವ ಸಾರಿಗೆ ನೌಕರರು ಮುಷ್ಕರ ಸೋಮವಾರ ಆರು ದಿನಪೂರೈಸಿದೆ. ಕಳೆದ ಎರಡು ದಿನಗಳ ಹಿಂದೆಮುಷ್ಕರದಲ್ಲಿ ತೊಡಗಿರುವ 45 ಸಿಬ್ಬಂದಿಯನ್ನುಸೇವೆಯಿಂದ ವಜಾ ಮತ್ತು 75 ಜನ ಸಿಬ್ಬಂದಿಯನ್ನು ವರ್ಗಾವಣೆಗೊಳಿಸಿ ಈಶಾನ್ಯ ಸಾರಿಗೆ ಸಂಸ್ಥೆ ಆದೇಶಿಸಿದೆ. ಸಂಸ್ಥೆಯ ಈಕ್ರಮ ನೌಕರರು ಮತ್ತು ಕುಟುಂಬ ಸದಸ್ಯರಲ್ಲಿ ಅಸಮಾಧಾನ ಭುಗಿಲೇಳು ಕಾರಣವಾಗಿದೆ. ಇಲ್ಲಿನ ಕೇಂದ್ರ ಬಸ್‌ ನಿಲ್ದಾಣ ರಸ್ತೆಯಲ್ಲಿರುವ ಡಿಪೋ ಮತ್ತು ಶಾಂತಿ ನಗರ, ವಿದ್ಯಾನಗರದಲ್ಲಿರುವ ಡಿಪೋಗಳ ಮುಂದೆ ಜಮಾವಣೆಗೊಂಡ ನೌಕರರ ಕುಟುಂಬದವರು ಮತ್ತು ಮಕ್ಕಳು, ನೌಕರರ ಮುಷ್ಕರವು ರಾಜ್ಯ ಮಟ್ಟಾಗಿದೆ. ಆದರೆ, ಕೆಲವೇ ಕೆಲ ನೌಕರರನ್ನು ಈಶಾನ್ಯ ರಸ್ತೆ ಸಾರಿಗೆಯ ಅಧಿಕಾರಿಗಳುಗುರಿಯಾಗಿಸಿಕೊಂಡು ಏಕಾಏಕಿ ವರ್ಗಾವಣೆಮಾಡಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ಹೊರಹಾಕಿದರು.

ಎಲ್ಲೆಡೆ ಹೋರಾಟ ನಡೆಯುತ್ತಿದ್ದಾಗ ನೌಕರರಿಗೆ ವೈಯಕ್ತಿಕವಾಗಿ ಯಾವ ನಿರ್ಧಾರತೆಗೆದುಕೊಳ್ಳಲು ಬರುವುದಿಲ್ಲ. ಇದು ಗೊತ್ತಿದ್ದರೂಅಧಿಕಾರಿಗಳು ಉದ್ದೇಶಪೂರ್ವಕವಾಗಿ ನೌಕರರನ್ನು ಬೇರೆ-ಬೇರೆ ಕಡೆಗಳಿಗೆ ವರ್ಗಾವಣೆ ಮಾಡಲಾಗಿದೆ. ದಿಢೀರನೆವರ್ಗಾವಣೆ ಮಾಡಿದರೆ ಕುಟುಂಬ ಸಮೇತ ವರ್ಗವಣೆಯಾದ ಸ್ಥಳಕ್ಕೆ ಹೋಗುವುದಾದರೂ ಹೇಗೆ ಎಂದು ಮಹಿಳೆಯರು ಆಳಲು ತೋಡಿಕೊಂಡರು. ಮೇಲಾಗಿ ನೌಕರರಿಗೆ ಕಡಿಮೆ ಸಂಬಳ ನೀಡಲಾಗುತ್ತಿದೆ. ಈಗ ಕಳೆದೊಂದು ತಿಂಗಳಿಂದ ಸಂಬಳ ಬಿಡುಗಡೆಮಾಡಿಲ್ಲ. ಸಂಬಳವಿಲ್ಲದೆ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ವೇತನ ಪರಿಷ್ಕರಣೆ ಮಾಡಲೇಬೇಕು. ಮುಷ್ಕರ ನಿತರರ ಬೇಡಿಕೆಈಡೇರಿಸಬೇಕೆಂದು ಪ್ರತಿಭಟನಾನಿರತ ಮಹಿಳೆಯರು ಆಗ್ರಹಿಸಿದರು.

ಬಸ್‌ ಸಂಚಾರಕ್ಕೆ ತಡೆ: ಕೇಂದ್ರ ಬಸ್‌ ನಿಲ್ದಾಣದಿಂದ ಹೈದರಾಬಾದ್‌ಗೆ ಹೊರಟಿದ್ದಸಾರಿಗೆ ಬಸ್‌ವೊಂದನ್ನು ಮಹಿಳೆಯರು ಬಸ್‌ ನಿಲ್ದಾಣದಲ್ಲೇ ತಡೆದು ಸಿಟ್ಟು ಹೊರಹಾಕಿದರು. ಮುಷ್ಕರದ ನಡುವೆಯೂ ಬಸ್‌ಚಲಾಯಿಸುವುದು ಸರಿಯಲ್ಲ ಎಂದು ಆಕ್ಷೇಪವ್ಯಕ್ತಪಡಿಸಿದ ಮಹಿಳೆಯರು, ಬಸ್‌ನಿಂದಚಾಲಕನನ್ನು ಕೆಳಗಡೆ ಇಳಿಸಿದರು. ಅಲ್ಲದೇ,ಬಸ್‌ ಒಳಗೆ ಹೋಗಿ, ಬಸ್‌ನಲ್ಲಿದ್ದ ಜನರನ್ನೂ ಕೆಳಗಿಳಿಸಿದರು. ನಮಗೆ ಅನ್ಯಾಯವಾಗಿದೆ. ನಮಗೆ ನ್ಯಾಯ ಸಿಗುವವರೆಗೆ ಬಸ್‌ ಓಡಿಸಲುಬಿಡುವುದಿಲ್ಲ. ಬಸ್‌ನಿಂದ ಇಳಿಯಿರಿ ಎಂದು ಎಂದು ಪ್ರಯಾಣಿಕರಲ್ಲಿ ಮನವಿ ಮಾಡಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.