ಕುಡಿವ ನೀರಿನ ಸೌಕರ್ಯ ಒದಗಿಸಲು ಆಗ್ರಹ


Team Udayavani, May 31, 2022, 3:36 PM IST

14water

ವಾಡಿ: ವಸೂಲಿ ಮಾಡಲಾದ ತೆರಿಗೆ ಹಣವನ್ನು ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಖರ್ಚು ಮಾಡಬೇಕು ಎಂದು ಆಗ್ರಹಿಸಿ ಇಂಗಳಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈಲಾಸ ನಗರ ತಾಂಡಾ ಜನರು ವಾಡಿ ಪುರಸಭೆ ಆಡಳಿತ ವಿರುದ್ಧ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.

ಖಾಲಿ ಕೊಡಗಳೊಂದಿಗೆ ಸೋಮವಾರ ಪುರಸಭೆ ಕಚೇರಿಗೆ ಆಗಮಿಸಿದ ಕೈಲಾಸ ನಗರ ತಾಂಡಾದ ಬಂಜಾರಾ ಜನರು, ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆ ಮೊಳಗಿಸಿದರು. ಕುಡಿಯುವ ನೀರಿಗಾಗಿ ಬೋರ್‌ವೆಲ್‌ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಕೈಲಾಸ ನಗರ ತಾಂಡಾದ ಯುವ ಮುಖಂಡ ಶ್ರೀಕಾಂತ ಚವ್ಹಾಣ, ಇಂಗಳಗಿ ಗ್ರಾಪಂ ವ್ಯಾಪ್ತಿಯಲ್ಲಿದ್ದ ತಾಂಡಾ ಬಡಾವಣೆಯನ್ನು ಕಲ್ಲು ಗಣಿಗಾರಿಕೆ ದೃಷ್ಟಿಯಿಂದ ಸ್ಥಳಾಂತರಿಸಿದ ಎಸಿಸಿ ಕಂಪನಿಯವರು ವಾಡಿ ಪುರಸಭೆ ಸಮೀಪ ಮನೆಗಳನ್ನು ನಿರ್ಮಿಸಿಕೊಟ್ಟಿದೆ. ಕಳೆದ ಹದಿನೈದು ವರ್ಷಗಳಿಂದ ಸ್ಥಳಾಂತರಗೊಂಡ ಕೈಲಾಸ ನಗರ ಬಡಾವಣೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಇಂಗಳಗಿ ಗ್ರಾಪಂಗೆ ಮತ ಹಾಕಬೇಕು. ತೆರಿಗೆ ಪುರಸಭೆಗೆ ಪಾವತಿಸಬೇಕು. ಬಡಾವಣೆಯ ಅಭಿವೃದ್ಧಿ ಮಾತ್ರ ಯಾರಿಗೂ ಕೇಳಬಾರದು. ಎಸಿಸಿ ಆಡಳಿತವೇ ಪ್ರತಿದಿನ ಟ್ಯಾಂಕರ್‌ಗಳ ಮೂಲಕ ತುಸು ನೀರು ಪೂರೈಕೆ ಮಾಡುತ್ತಿದೆ. ಗ್ರಾಪಂ ಮತ್ತು ಪುರಸಭೆ ಆಡಳಿತಗಳ ಮಧ್ಯೆ ಇರುವ ತಾಂಡಾ ಜನರು ಯಾವುದೇ ಮೂಲ ಸೌಕರ್ಯ ಪಡೆದುಕೊಳ್ಳಲಾಗದೇ ತೊಂದರೆ ಅನುಭವಿಸುತ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯಂತೂ ಗಂಭೀರವಾಗಿದೆ. ಅಧಿಕಾರಿಗಳು ಜನರ ಸಮಸ್ಯೆಗೆ ಪರಿಹಾರ ಹುಡುಕುವಲ್ಲಿ ಅತ್ಯಂತ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2017ನೇ ಸಾಲಿನಲ್ಲಿ ಕೈಲಾಸ ನಗರ ತಾಂಡಾ ಜನರಿಂದ ಪುರಸಭೆಗೆ ಒಟ್ಟು 3.96 ಲಕ್ಷ ರೂ. ತೆರಿಗೆ ಹಣ ಪಾವತಿಯಾಗಿದೆ. ಆದರೆ ಸ್ವೀಕೃತ ಲಕ್ಷಾಂತರ ರೂಪಾಯಿ ತೆರಿಗೆ ಹಣದಲ್ಲಿ ಒಂದು ರೂಪಾಯಿ ಕೂಡ ಅಧಿಕಾರಿಗಳು ಜನರಿಗಾಗಿ ಖರ್ಚು ಮಾಡಿಲ್ಲ. ಪರಿಣಾಮ ಜನರ ಬಹುಮುಖ್ಯ ಬೇಡಿಕೆಯಾಗಿರುವ ನೀರಿನ ಸಮಸ್ಯೆ ನಿವಾರಣೆಗಾಗಿ ತಾಂಡಾದಲ್ಲಿ ನಾಲ್ಕು ಬೋರ್‌ವೆಲ್‌ ಅಳವಡಿಸಬೇಕು. ನೀರಿನ ಮಿನಿ ಟ್ಯಾಂಕ್‌ಗಳನ್ನು ಅಳವಡಿಸಬೇಕು. ನಿರ್ಲಕ್ಷ್ಯ ವಹಿಸಿದರೆ ರಸ್ತೆ ತಡೆದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿ ಕಾಶೀನಾಥ ಧನ್ನಿ, ಕೈಲಾಸ ನಗರದಿಂದ ಒಬ್ಬರು ಇಂಗಳಗಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜನರು ಪುರಸಭೆಯಿಂದ ಅಭಿವೃದ್ಧಿ ಕೇಳುತ್ತಿದ್ದೀರಿ. ಈ ಗೊಂದಲಕಾರಿ ವಿಷಯದ ಹಿನ್ನೆಲೆಯನ್ನು ತಿಳಿದುಕೊಂಡು ಸೂಕ್ತ ಕ್ರಮಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಮುಖಂಡರಾದ ಅಶೋಕ ತಿಪೂಸಿಂಗ್‌, ಹೇಮಂತ ಚೌಗಲೆ, ಶಿವುಕುಮಾರ ಹೂಗಾರ, ಚಂದು ಚೌಗಲೆ, ರಮೇಶ ಜಾಧವ, ಬಸವರಾಜ ಚವ್ಹಾಣ, ಪರಶುರಾಮ ರಾಠೊಡ, ದತ್ತು ಚವ್ಹಾಣ, ಯೋಗಿನಾಥ ಚವ್ಹಾಣ, ಸುನೀಲ ರಾಠೊಡ, ಬಾಬು ಜಾಧವ, ಗಣೇಶ ಚೌಗಲೆ, ಭೀಮು ಚೌಗಲೆ ಸೇರಿದಂತೆ ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.