ಪಿಎಸ್ಐ ಅಕ್ರಮ ನೇಮಕಾತಿ : ಸಿಐಡಿಯಿಂದ ಎರಡನೇ ಆರೋಪ ಪಟ್ಟಿ ಸಲ್ಲಿಕೆ
Team Udayavani, Jul 29, 2022, 9:02 PM IST
ಕಲಬುರಗಿ: ಪಿಎಸ್ಐ ನೇಮಕಾತಿಯ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖಾ ತಂಡ 1609 ಪುಟಗಳ ಎರಡನೇ ಆರೋಪ ಪಟ್ಟಿ ( ಚಾಜ್೯ಶೀಟ್) ಸಲ್ಲಿಸಿದೆ.
545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕಳೆದ ಜುಲೈ 5ರಂದು 1974 ಪುಟಗಳ ದೋಷಾರೋಪಣ ಪಟ್ಟಿಯನ್ನು ನ್ಯಾಯಕ್ಕೆ ಸಲ್ಲಿಸಿದ ನಂತರ ಈಗ 1609 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿದೆ.
ನಗರದ ಎಂಎಸ್ ಐ ಡಿಗ್ರಿ ಮಹಾವಿದ್ಯಾಲಯದಲ್ಲಿನ ಪರೀಕ್ಷೆ ಕೇಂದ್ರದಲ್ಲಿ ಬ್ಲೂಟೂತ್ ಬಳಕೆ ಹಾಗೂ ಇತರ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಕಿಂಗ್ ಪಿನ್ ರುದ್ರಗೌಡ ಪಾಟೀಲ್, ಪರೀಕ್ಷಾ ರ್ಥಿಗಳು ಹಾಗೂ ಸಹಾಯ ಮಾಡಿದವರು ಒಳಗೊಂಡ 8 ಆರೋಪಿಗಳನ್ನು ಒಳಗೊಂಡ ಸುದೀರ್ಘ ವಾಗಿ ನಡೆದು ಬಂದ ತನಿಖಾ ಹಾದಿಯನ್ನು ಸಾಕ್ಷ್ಯಾಧಾರ ಗಳೊಂದಿಗೆ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಶುಕ್ರವಾರ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಸಿಐಡಿ ಡಿವೈಎಸ್ಪಿ ವಿರೇಂದ್ರಕುಮಾರ ಅವರು ತನಿಖಾಧಿಕಾರಿಯಾಗಿ ಚಾಜ್೯ಶೀಟ್ ಸಲ್ಲಿಸಿದ್ದಾರೆ.
ಪರೀಕ್ಷಾರ್ಥಿ ಪ್ರಭು ತಂದೆ ಶರಣಪ್ಪ ಹಾಗೂ ಇವರ ತಂದೆ ಶರಣಪ್ಪ, ಚಂದ್ರಕಾಂತ ಕುಲಕರ್ಣಿ, ಆರ್.ಡಿ.ಪಾಟೀಲ್, ಕಾಶೀನಾಥ್ ಚಿಲ್, ಪ್ರಕಾಶ ಊಡಗಿ ಅವರನ್ನು ಆರೋಪಿಗಳನ್ನಾಗಿ ಪಟ್ಟಿ ಸಲ್ಲಿಸಲಾಗಿದೆ.
ಮೊದಲ ಆರೋಪ ಪಟ್ಟಿಯಲ್ಲಿ
ಗೋಕುಲ್ ಬಡಾವಣೆಯಲ್ಲಿರುವ ಬಿಜೆಪಿ ನಾಯಕಿ ದಿವ್ಯ ಹಾಗರಗಿ ಒಡೆತನದ ಜ್ಞಾನಜೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ 34 ಆರೋಪಿಗಳನ್ನು ಒಳಗೊಂಡ ಸುದೀರ್ಘವಾಗಿ ನಡೆದು ಬಂದ ತನಿಖಾ ಹಾದಿಯನ್ನು ಸಾಕ್ಷ್ಯಾ ಧಾರಗಳೊಂದಿಗೆ ಸಲ್ಲಿಸಲಾಗಿರುವುದನ್ನು ಇಲ್ಲಿ ಪ್ರಸ್ತಾಪಿಸಬಹುದಾಗಿದೆ.
ಒಟ್ಟಾರೆ ಬ್ಲೂಟೂತ್ ಬಳಸಿ ಹೇಗೆ ಅಕ್ರಮ ಎಸಗಲಾಗಿದೆ ಜೊತೆಗೆ ಯಾರ್ಯಾರು ಅಕ್ರಮದಲ್ಲಿ ತಮ್ಮ ಪಾತ್ರ ನಿರೂಪಿಸಿದ್ದಾರೆ ಹಾಗೂ ಹಣದ ವ್ಯವಾರ ಸೇರಿದಂತೆ ಇತರ ಎಲ್ಲಾ ಆಯಾಮಗಳ ಒಳಗೊಂಡ ಅಂಶಗಳನ್ನು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ಏಪ್ರಿಲ್ ತಿಂಗಳಿನ ಮೊದಲ ವಾರದಲ್ಲಿ ಪ್ರಕರಣ ಬಯಲಿಗೆ ಬಂದು ಇಲ್ಲಿನ ಜೋಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು