ಪಿಎಸ್ಐ ಪರೀಕ್ಷೆ ಅಕ್ರಮ: ಸಿಐಡಿ ಬಲೆಗೆ ಬಿದ್ದ ಕಿಂಗ್ ಪಿನ್ ಆರ್.ಡಿ ಪಾಟೀಲ್
Team Udayavani, Apr 23, 2022, 12:50 PM IST
ಕಲಬುರಗಿ: ಪಿಎಸ್ಐ ನೇಮಕದ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ ಕಿಂಗ್ ಪಿನ್ ಎನ್ನಲಾಗುತ್ತಿರುವ ಅಫಜಲಪುರದ ಅರ್.ಡಿ.ಪಾಟೀಲ್ ನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಕರಣ ಹೊರ ಬರುತ್ತಿದ್ದಂತೆ ಆರ್.ಡಿ.ಪಾಟೀಲ್ ತಲೆ ಮರೆಸಿಕೊಂಡಿದ್ದ. ಶೋಧ ಕಾರ್ಯ ನಡೆಸಿದ್ದರೂ ಸಿಕ್ಕಿರಲಿಲ್ಲ. ನಿನ್ನೆಯಷ್ಟೆ ಅವರ ಸಹೋದರ ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಮಹಾಂತೇಶ ಪಾಟೀಲ್ ಎಂಬುವರನ್ನು ಬಂಧಿಸಲಾಗಿತ್ತು.
ಆರ್.ಡಿ.ಪಾಟೀಲ್ ನನ್ನು ಮಹಾರಾಷ್ಟ್ರದಲ್ಲಿ ವಶಕ್ಕೆ ಪಡೆದುಕೊಂಡ ಸಿಐಡಿ ಅಧಿಕಾರಿಗಳು ಆತನನ್ನು ಕಲಬುರಗಿ ಕಡೆಗೆ ಕರೆದುಕೊಂಡು ಬರುತ್ತಿದ್ದಾರೆ.
ಇದನ್ನೂ ಓದಿ:ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ: ಶಾಸಕ ಡಾ.ಜಿ ಪರಮೇಶ್ವರ್
ಆರ್.ಡಿ.ಪಾಟೀಲ್ ಪಿಎಸ್ಐ ಅಲ್ಲದೇ ಇತರ ನೇಮಕಾತಿಗಳಲ್ಲೂ ಬ್ಲೂಟೂತ್ ಬಳಸಿ ಅಕ್ರಮ ನಡೆಸಿದ್ದಾನೆ ಎನ್ನಲಾಗಿದೆ. ಹೀಗಾಗಿ ಬಂಧನದ ನಂತರ ಅನೇಕ ಸ್ಫೋಟಕ ಮಾಹಿತಿ ಹೊರ ಬರುವ ಸಾಧ್ಯತೆಗಳಿವೆ.
ದಿವ್ಯ ಬಂಧನ ಯಾವಾಗ?: ಕಳೆದ ಹತ್ತು ದಿನಗಳಿಂದ ಬಿಜೆಪಿ ನಾಯಕಿ ದಿವ್ಯ ಹಾಗರಗಿ ಬಂಧನವಾಗದಿರುವುದು ಸಾರ್ವಜನಿಕರ ಅದರಲ್ಲೂ ಕಾಂಗ್ರೆಸ್ ಆಕ್ರೋಶ ಕ್ಕೆ ಕಾರಣವಾಗಿದೆ. ಜಾಮೀನು ಸಲುವಾಗಿ ಅರ್ಜಿ ಹಾಕುತ್ತಾರೆ ಎಂದಾದರೆ ಪೊಲೀಸ್ ರಿಗೆ ಸಿಗದಿರುವುದು ಹಾಸ್ಯಾಸ್ಪದವಾಗಿದೆ. ಬಂಧನವಾಗದಂತೆ ಬಿಜೆಪಿ ನಾಯಕರು, ಕೆಲ ಸಚಿವರು ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಮತ್ತೊಂದೆಡೆ ಮುಂದೆ ನಡೆಯಬೇಕಿದ್ದ 404 ಪಿಎಸ್ಐ ಹುದ್ದೆಗಳ ನೇಮಕಾತಿಗೂ ಅಕ್ರಮ ವಾಸನ ಕಂಡು ಬಂದಿದೆ. ಮುಂಗಡವಾಗಿ ಪರೀಕ್ಷೆಯ ಕೇಂದ್ರ, ಹಣ ಪಡೆಯುವ ಕುರಿತಾದ ಆಡಿಯೋವನ್ನು ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ಬಿಡುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್ ಕಾಲೇಜು: ಜಯಪ್ರಕಾಶ್ ಹೆಗ್ಡೆ
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ