ಪಿಎಸ್ಐ ಪರೀಕ್ಷೆ ಅಕ್ರಮ: ಕೊನೆಗೂ ಸಿಐಡಿ ಬಲೆಗೆ ಬಿದ್ದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ


Team Udayavani, Apr 29, 2022, 8:39 AM IST

ಪಿಎಸ್ಐ ಪರೀಕ್ಷೆ ಅಕ್ರಮ: ಕೊನೆಗೂ ಸಿಐಡಿ ಬಲೆಗೆ ಬಿದ್ದ ದಿವ್ಯಾ ಹಾಗರಗಿ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಕೊನೆಗೂ ಬಂಧಿಸಲಾಗಿದೆ. ಮಹಾರಾಷ್ಟ್ರದ ಪುಣೆಯಲ್ಲಿ ದಿವ್ಯಾ ಹಾಗರಗಿಯನ್ನು ಸಿಐಡಿ ತಂಡ ಬಂಧಿಸಿದೆ.

ದಿವ್ಯಾ ಹಾಗರಗಿ ಒಡೆತನಕ್ಕೆ ಸೇರಿದ ಜ್ಞಾನ ಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಒಎಂಆರ್ ಶೀಟ್ ತಿದ್ದುಪಡಿ ಹಾಗೂ ಬ್ಲೂಟೂತ್ ಮೂಲಕ ಅಕ್ರಮ ಎಸಗಿದ ಹಿನ್ನೆಲೆಯಲ್ಲಿ ಕಳೆದ ಏ. 9 ರಂದು ಎಫ್ ಐಆರ್ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ದಿವ್ಯಾಳನ್ನು ಕೊನೆಗೂ ಬಂಧಿಸಲಾಗಿದೆ.

ಕಳೆದ ಎರಡುವರೆ ವಾರಗಳಿಂದ ನಾಪತ್ತೆಯಾಗಿದ್ದ ದಿವ್ಯಾ ಬಂಧನ ಪೊಲೀಸರಿಗೆ ದೊಡ್ಡ ಸವಾಲಾಗಿತ್ತು.‌ ಸಿಐಡಿ ಡಿಜಿಪಿ ಪಿ.ಎಸ್.‌ಸಂಧು ಕಲಬುರಗಿಗೆ ಆಗಮಿಸಿ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ ನಾಲ್ಕು ತಂಡಗಳನ್ನು ರಚಿಸಲಾಗಿತ್ತು.  ಪುಣೆಯ ಹೊಟೇಲೊಂದರದಲ್ಲಿ ರಾತ್ರಿ ಊಟ ಮಾಡುವ ಸಮಯದಲ್ಲಿ ಸಿಐಡಿ ತಂಡ ದಾಳಿ ನಡೆಸಿ ಬಂಧಿಸಿದೆ.

ದಿವ್ಯಾಗೆ ಆಶ್ರಯ ನೀಡಿದ್ದ ಸೊಲ್ಲಾಪುರ ಉದ್ಯಮಿ ಸುರೇಶ ಹಾಗೂ ಜ್ಞಾನಜ್ಯೋತಿ ಶಾಲೆಯ ಮುಖ್ಯೋಧ್ಯಾಪಕ ಕಾಶೀನಾಥ್,  ಮೇಲ್ವಿಚಾರಕರಾದ ಅರ್ಚನಾ, ಸುನಂದಾ ಹಾಗೂ ಅಕ್ರಮವಾಗಿ ಪರೀಕ್ಷೆ ಬರೆದ ಶಾಂತಾಬಾಯಿಯನ್ನು ಸೇರಿ ಆರು ಜನರನ್ನು ಬಂಧಿಸಲಾಗಿದೆ. ಗುರುವಾರದವರೆಗೂ 17 ಆರೋಪಿಗಳನ್ನು ಬಂಧಿಸಲಾಗಿತ್ತು ಈಗ ಆರು ಆರೋಪಿಗಳನ್ಬು ಬಂಧಿಸುವುದರ ಮೂಲಕ ಸಂಖ್ಯೆ 23ಕ್ಕೆ ಏರಿದಂತಾಗಿದೆ.

ಇದನ್ನೂ ಓದಿ:ವಿಧಾನಸಭೆ ಚುನಾವಣೆ: ಅಲ್ಲಿನವರು ಇಲ್ಲಿಗೆ, ಇಲ್ಲಿನವರು ಅಲ್ಲಿಗೆ…

ದಿವ್ಯಾ ಹಾಗರಗಿ ಬಂಧನ ವಿಳಂಬ ರಾಜಕೀಯವಾಗಿಯೂ ದೊಡ್ಡ ಚರ್ಚೆಯಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗ ಜ್ಷಾನೇಂದ್ರ ಪ್ರಕರಣದಲ್ಲಿ ಯಾರು ಎಷ್ಟೇ ದೊಡ್ಡವರಿರಲಿ ರಕ್ಣಿಸುವ ಪ್ರಶ್ನೆಯೇ ಇಲ್ಲ ಎಂದು ಪದೇ- ಪದೇ ಹೇಳಿದ್ದರೂ ಜತೆಗೆ ದಿವ್ಯಾ ಹಾಗರಗಿ ಆಸ್ತಿ ಮುಟ್ಟುಗೋಲು ಹಾಕುವುದಾಗಿ ಹೇಳಿದ್ದರೂ ಬಂಧನವಾಗಿರಲಿಲ್ಲ.‌ ಬಿಜೆಪಿ ನಾಯಕರು ಹಾಗೂ ಸಚಿವರು, ಶಾಸಕರು ಬಂಧನವಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂಬ ಆರೋಪ ವ್ಯಾಪಕವಾಗಿ ಕೇಳಿ ಬಂದಿತ್ತು. ಕೊನೆಗೂ ಈಗ ಬಂಧನವಾಗಿರುವುದರಿಂದ ಈಗ ಪ್ರಕರಣದಲ್ಲಿ ಯಾರ್ಯಾರ ಹೆಸರು ಹೊರ ಬರುತ್ತದೆ ಎಂಬುದೇ ಕುತೂಹಲಕಾರಿಯಾಗಿದೆ.

11 ದಿನಗಳ ಕಾಲ ಸಿಐಡಿ ಕಸ್ಟಡಿಗೆ
ದಿವ್ಯಾ ಹಾಗರಗಿ, ಸುರೇಶ ಕಾಟಗಾಂವ್‌, ಕಾಳಿದಾಸ, ಜ್ಞಾನಜ್ಯೋತಿ ಶಾಲೆ ಮೇಲ್ವಿಚಾರಕ ರಾದ ಅರ್ಚನಾ, ಸುನೀತಾ ಹಾಗೂ ಚಾಲಕ ಸದ್ದಾಂ ಹಾಗೂ ನಗರಸಭೆ ಎಫ್ಡಿಸಿ ಜ್ಯೋತಿ ಪಾಟೀಲ ಸೇರಿದಂತೆ 7 ಮಂದಿಗೆ ಮೂರನೇ ಜೆಂಎಫ್ಸಿ ನ್ಯಾಯಾಲಯ 11 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.

ಏನೇನಾಯ್ತು?
ಜ.19 ನೇಮಕಾತಿಯ ತಾತ್ಕಾಲಿಕ ಪಟ್ಟಿ ಪ್ರಕಟ
ಎ. 7 ಸಿಐಡಿ ತನಿಖೆಗೆ ಆದೇಶ
ಎ. 9 ಅಕ್ರಮಕ್ಕೆ ಸಂಬಂಧಿಸಿದಂತೆ ಕಲಬುರಗಿ ಚೌಕ್‌ ಠಾಣೆಯಲ್ಲಿ ಎಫ್ಐಆರ್‌.
ಎ.9 ಪರೀಕ್ಷೆ ಅಭ್ಯರ್ಥಿ ವೀರೇಶನ ಬಂಧನ
ಎ.11 ಆರೋಪಿ ದಿವ್ಯಾ ಹಾಗರಗಿ ನಾಪತ್ತೆ
ಎ.17 ದಿವ್ಯಾ ಮನೆ ಮೇಲೆ ಸಿಐಡಿ ದಾಳಿ, ಪತಿ ರಾಜೇಶ ಹಾಗರಗಿ ಸೇರಿ 8 ಜನರ ಸೆರೆ.
ಎ.20 ಅಫ‌ಜಲಪುರ ಶಾಸಕ ಎಂ.ವೈ. ಪಾಟೀಲ್‌ ಗನ್‌ಮ್ಯಾನ್‌ ಬಂಧನ
ಎ.22 ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಾಂತೇಶ ಪಾಟೀಲ್‌ ಬಂಧನ
ಎ.23 ಕಿಂಗ್‌ಪಿನ್‌ ಆರ್‌.ಡಿ. ಪಾಟೀಲ್‌ ಸೆರೆ
ಎ.26 ನ್ಯಾಯಾಲಯದಿಂದ ಬಂಧನ ವಾರಂಟ್‌
ಎ.27 ಆರ್‌ಟಿಐ ಕಾರ್ಯಕರ್ತ ಸಿದ್ರಾಮಯ್ಯ ಹಿರೇಮಠ ವಿಚಾರಣೆ
ಎ.28 ಶಹಾಬಾದ ನಗರಸಭೆ ಎಫ್ಡಿಸಿ ಜ್ಯೋತಿ ಪಾಟೀಲ್‌ ಬಂಧನ
ಎ.29 ದಿವ್ಯಾ ಹಾಗರಗಿ ಬಂಧನ

18 ದಿನ ಇದ್ದದ್ದು ಎಲ್ಲಿ?
ದಿವ್ಯಾ ಹಾಗರಗಿ ಹಾಗೂ ಸಂಗಡಿಗರು ಅಕ್ರಮ ಪ್ರಕರಣ ಬಯಲಾಗುತ್ತಿದ್ದಂತೆ ಜಿಲ್ಲೆಯ ಅಫ‌ಜಲಪುರ ತಾಲೂಕಿನ ಮುಖಾಂತರ ಸೊಲ್ಲಾಪುರಕ್ಕೆ ಹೋಗಿದ್ದರು. ಅಲ್ಲಿಂದ ರಾಜಸ್ಥಾನ, ಗುಜರಾತ್‌ಗೆ ತೆರಳಿ ವಿವಿಧ ದೇಗುಲಗಳಿಗೆ ಭೇಟಿ ನೀಡಿದ್ದರು. ಅಲ್ಲದೇ ಅಲ್ಲಲ್ಲಿ ವಾಸ್ತವ್ಯ ಮಾಡುತ್ತ ಪೊಲೀಸರ ಕಣ್ತಪ್ಪಿಸಿದ್ದರು. ಸುರಕ್ಷಿತ ಜಾಗ ಅರಸಿ ಪುಣೆಗೆ ಬಂದಾಗ ಉದ್ಯಮಿ ಸುರೇಶ ಕಾಟಗಾಂವ್‌ ಆಶ್ರಯ ಕಲ್ಪಿಸಿದ್ದರು. ದಿವ್ಯಾಗೆ ಉದ್ಯಮಿ ಸುರೇಶ ಕಾಟೆಗಾಂವ್‌ ಮೊದಲು ಅಷ್ಟೊಂದು ಪರಿಚಯವಿರಲಿಲ್ಲ. ಹೀಗಾಗಿ ದಿವ್ಯಾಗೆ ಆಶ್ರಯ ನೀಡಲು ಸುರೇಶ್‌ಗೆ ಹೇಳಿದ್ದು ಯಾರು ಎಂಬುದು ತಿಳಿಯಬೇಕಿದೆ.

ಎಂಜಿನಿಯರ್‌ ಇನ್ನೂ ನಾಪತ್ತೆ
ಪಿಎಸ್‌ಐ ಅಲ್ಲದೇ ಲೋಕೋಪಯೋಗಿ, ಎಫ್ಡಿಸಿ ಮತ್ತಿತರ ಪರೀಕ್ಷೆಗಳಲ್ಲೂ ಅಕ್ರಮ ಎಸಗಿರುವ ನೀರಾವರಿ ಇಲಾಖೆ ಸಹಾಯಕ ಎಂಜಿನಿಯರ್‌ ಮಂಜುನಾಥ ಮೇಳಕುಂದಿ ಹಾಗೂ ಜ್ಞಾನಜ್ಯೋತಿ ಶಾಲೆ ಪ್ರಾಚಾರ್ಯ ಕಾಶೀನಾಥ ಇನ್ನೂ ಪತ್ತೆಯಾಗಿಲ್ಲ.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.