ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ; ಶಾಸಕರ ಗನ್ ಮ್ಯಾನ್ ಸಹಿತ ಮತ್ತೆ ಇಬ್ಬರ ಬಂಧನ
Team Udayavani, Apr 21, 2022, 3:18 PM IST
ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಹಾಗೂ ಸಿಎಆರ್ ಪೊಲೀಸ್ ಕಾನ್ ಸ್ಟೇಬಲ್ ರುದ್ರಗೌಡ ಪಾಟೀಲ ಎಂಬುವವರನ್ನು ಗುರುವಾರ ಬಂಧಿಸಿದ್ದಾರೆ.
ಇದರೊಂದಿಗೆ ಬಂಧಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಈಗಾಗಲೇ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮೂವರು ಪರೀಕ್ಷಾ ಮೇಲ್ವಿಚಾರಕಿಯರು, ಮೂವರು ಅಭ್ಯರ್ಥಿಗಳು ಹಾಗೂ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಬಂಧಿಸಿದ್ದಾರೆ.
ಶಾಸಕರೊಂದಿಗೆ ಕಾರಿನಲ್ಲಿ ನಗರದ ರಾಮಮಂದಿರ ಬಳಿ ಹೊರಟಿದ್ದಾಗ ಸಿಐಡಿ ಪೊಲೀಸರು ಗನ್ ಮ್ಯಾನ್ ಹಯ್ಯಾಳಿಯನ್ನು ವಶಕ್ಕೆ ಪಡೆದರು.
ಇದನ್ನೂ ಓದಿ:ಕಿಡ್ನಾಪ್ ಆಗಿದ್ದ ಬೇಕರಿ ಮಾಲೀಕಗೆ ರಕ್ಷಣೆ ಒದಗಿಸಲು ಆಗ್ರಹಿಸಿ ಮನವಿ
ಬಂಧಿತ ಗನ್ ಮ್ಯಾನ್ ಹಯ್ಯಾಳಿ (ಅಯ್ಯಣ್ಣ) ದೇಸಾಯಿ ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರಥಮ ಸ್ಥಾನದಿಂದ ಆಯ್ಕೆಯಾಗಿದ್ದ ಎಂದು ತಿಳಿದು ಬಂದಿದೆ.
ರಕ್ಷಿಸುವ ಪ್ರಶ್ನೆಯಿಲ್ಲ: ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ರಾಜ್ಯ ಸಿಐಡಿ ಪೊಲೀಸರು ಇಂದು ಕಾಂಗ್ರೆಸ್ ಶಾಸಕ ರೊಬ್ಬರ, ಗನ್ ಮ್ಯಾನ್ ಒಬ್ಬರನ್ನು ಬಂಧಿಸಿದ್ದಾರೆ. ಸಿಐಡಿ ಪೊಲೀಸರು, ತನಿಖೆಯನ್ನು ಚುರುಕುಗೊಳಿಸಿದ್ದು, ಅಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ತಪ್ಪಿತಸ್ಥರನ್ನು ಬಂಧಿಸಿ, ಕಾನೂನಿನ ಕ್ರಮಕ್ಕೆ ಒಳಪಡಿಸಲಾಗುವುದು ಎಂದಿದ್ದಾರೆ.
ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ, ನ್ಯಾಯ ಒದಗಿಸಲು, ಸಿಐಡಿ ತನಿಖೆಗೆ ಆದೇಶಿಸಲಾಗಿದೆ. ತನಿಖೆಯು ನಿಷ್ಪಕ್ಷಪಾತವಾಗಿ, ನಡೆಯುತ್ತಿದ್ದು, ಅಕ್ರಮದಲ್ಲಿ ಒಳಗಾಗಿದವರು, ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…