ಪಿಎಸ್ಐ ನೇಮಕಾತಿ ವಯೋಮಿತಿ ಹೆಚ್ಚಳದಿಂದ ಕಲ್ಯಾಣಕ್ಕೆ ಅನುಕೂಲ
Team Udayavani, May 29, 2020, 7:02 AM IST
ಮೇ 21ರ "ಉದಯವಾಣಿ'ಯಲ್ಲಿ ಪಿಎಸ್ಐ ವಯೋಮಿತಿ ಹೆಚ್ಚಳಕ್ಕೆ ಕೂಗು ಎಂಬುದಾಗಿ ಪ್ರಕಟವಾಗಿದ್ದ ವಿಶೇಷ ವರದಿ
ಕಲಬುರಗಿ: ಪಿಎಸ್ಐ ನೇಮಕಾತಿ ವಯೋಮಿತಿಯನ್ನು ರಾಜ್ಯ ಸರ್ಕಾರ ಹೆಚ್ಚಳಗೊಳಿಸಿರುವ ನಿರ್ಧಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಚ್ಚಿನ ಅನುಕೂಲವಾಗಲಿದೆ.
ಸಾಮಾನ್ಯ ವರ್ಗಕ್ಕೆ ಈಗಿರುವ 28 ವರ್ಷ ವಯಸ್ಸಿನ ಮಿತಿಯನ್ನು 30 ವರ್ಷಕ್ಕೆ ಹಾಗೂ ಹಿಂದುಳಿದ ವರ್ಗ ಮತ್ತು ಎಸ್ಸಿ, ಎಸ್ಟಿ ಪ್ರವರ್ಗದ 32 ವರ್ಷಕ್ಕೆ ಹೆಚ್ಚಳ ಮಾಡಿರುವುದು ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳಿಗೆ ಸಹಕಾರಿಯಾಗಲಿದೆ. ರಾಜ್ಯದ ಪೊಲೀಸ್ ಇತಿಹಾಸದಲ್ಲಿ 556 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 125 ಹುದ್ದೆಗಳು ಮೀಸಲಿವೆ. ಉಳಿದಂತೆ 431 ಹುದ್ದೆಗಳಲ್ಲಿ ಶೇ. 8ರ ಹುದ್ದೆಗಳು ಸಹ ಈ ಭಾಗಕ್ಕೆ ಸಿಗಲಿವೆ. ಸರ್ಕಾರದ ನಿರ್ಧಾರವನ್ನು ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಜಿ.ಪಂ ಮಾಜಿ ಅಧ್ಯಕ್ಷ ಅಂಬಾರಾಯ ಅಷ್ಠಗಿ ಮುಂತಾದವರು ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ