ಪಿಯು ಪರೀಕ್ಷೆ: 21,308 ಮಕ್ಕಳು ಹಾಜರ್‌


Team Udayavani, Jun 19, 2020, 6:47 AM IST

ಪಿಯು ಪರೀಕ್ಷೆ: 21,308 ಮಕ್ಕಳು ಹಾಜರ್‌

ಕಲಬುರಗಿ: ಜಿಲ್ಲಾದ್ಯಂತ 21,308 ಮಕ್ಕಳು ದ್ವಿತೀಯ ಪಿಯು ಇಂಗ್ಲಿಷ್‌ ಪರೀಕ್ಷೆಯನ್ನು ಸುಸೂತ್ರವಾಗಿ ಬರೆದಿದ್ದು, ಅಧಿಕಾರಿಗಳು ನಿಟ್ಟುಸಿರು ಬಿಡುವಂತೆ ಮಾಡಿತು.

ಲಾಕ್‌ಡೌನ್‌ ಮುಂದೂಡಲ್ಪಟ್ಟಿದ್ದ ಇಂಗ್ಲಿಷ್‌ ಪರೀಕ್ಷೆ ಜಿಲ್ಲೆಯ 47 ಪರೀಕ್ಷಾ  ಕೇಂದ್ರಗಳಲ್ಲೂ ಬಹುತೇಕ ಸುಗಮವಾಗಿ ಜರುಗಿತು. ಹೊರ ರಾಜ್ಯದಿಂದ ಬಂದ ಐವರು ಮತ್ತು ಹೊರ ಜಿಲ್ಲೆಗಳ 449 ವಿದ್ಯಾರ್ಥಿಗಳು ಸೇರಿ ಒಟ್ಟು 23,058 ಮಕ್ಕಳು ಪರೀಕ್ಷೆ ಬರೆಯಬೇಕಿತ್ತು. ಇದರಲ್ಲಿ 21,308 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಹೊರ ಜಿಲ್ಲೆಯ ಮೂವರು ಸೇರಿ 1,750 ವಿದ್ಯಾರ್ಥಿಗಳು ಗೈರಾದರು. ಉತ್ತರ ಪ್ರದೇಶದ ಗೋರಖಪುರದಿಂದ ಆಗಮಿಸಿದ ವಿದ್ಯಾರ್ಥಿ ನಗರದ ನ್ಯಾಷನಲ್‌ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರೆ, ಮಹಾರಾಷ್ಟ್ರದ ಪುಣೆ, ಉದಯಗಿರಿ ಮತ್ತು ಅಕ್ಕಲಕೋಟೆಯಿಂದ ಬಂದ ವಿದ್ಯಾರ್ಥಿಗಳು ಬೇರೆ-ಬೇರೆ ಕೇಂದ್ರಗಳಲ್ಲಿ ಪರೀಕ್ಷೆಗೆ ಕುಳಿತಿದ್ದರು. ಹೊರ ರಾಜ್ಯ ಮತ್ತು ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.

ಬೆಳಗ್ಗೆಯೇ ಬಂದರು: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಅವಧಿಗೂ ಮುನ್ನ ಪರೀಕ್ಷಾ ಕೇಂದ್ರಗಳ ಎದುರು ಬಂದು ನೆರೆದಿದ್ದರು. ಸ್ನೇಹಿತರು, ಪಾಲಕರು ಒಟ್ಟಾಗಿ ಸೇರಿದ್ದರಿಂದ ಕೆಲ ಕೇಂದ್ರಗಳ ಮುಂದೆ ಅಂತರ ಪಾಲನೆ ಇರಲಿಲ್ಲ. ವಿದ್ಯಾರ್ಥಿಗಳು ಪರಸ್ಪರ ಕುಶಲೋಪರಿ ನಡೆಸಿದ ದೃಶ್ಯಗಳು ಕಂಡು ಬಂದವು. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಜರ್‌ ಮತ್ತು ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಗಿತ್ತು. ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಾಯಿತು. ಬೆಳಗ್ಗೆ 8.15ರಿಂದಲೇ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯೊಳಗೆ ಬಿಡಲಾಯಿತು. ಪರೀಕ್ಷೆಗೆ ಒಳಗಡೆ ಹೋಗುವಾಗ ಅಂತರ ಪಾಲಿಸಿಕೊಂಡು ಹೆಜ್ಜೆ ಹಾಕಿದರು. ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೂ ಪರೀಕ್ಷೆ ನಡೆಯಿತು. ಕಾರಣಾಂತರಗಳಿಂದ ಐದತ್ತು ನಿಮಿಷ ತಡವಾಗಿ ಬಂದ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಯಿತು.

ಅಫಜಲಪುರ: ಕೋವಿಡ್ ದಿಂದಾಗಿ ಕಳೆದ ತಿಂಗಳು ನಡೆಯಬೇಕಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ತಾಲೂಕಿನ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯಿತು. ತಾಲೂಕಿನ ಕರ್ಜಗಿ ಪರೀಕ್ಷಾ ಕೇಂದ್ರದಲ್ಲಿ 416 ವಿದ್ಯಾರ್ಥಿಗಳ ಪೈಕಿ 341 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ 75 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಪಟ್ಟಣದ ಮಹಾಂತಮ್ಮ ಪಾಟೀಲ್‌ ಪಿಯು ಕಾಲೇಜಿನಲ್ಲಿ 295 ವಿದ್ಯಾರ್ಥಿಗಳ ಪೈಕಿ 263 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ 32 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು. ಸರ್ಕಾರಿ ಪಿಯು ಕಾಲೇಜಿನಲ್ಲಿ 436 ವಿದ್ಯಾರ್ಥಿಗಳ ಪೈಕಿ 383 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 53 ವಿದ್ಯಾರ್ಥಿಗಳು ಗೈರಾಗಿದ್ದಾರೆ, ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗಿದೆ ಎಂದು ಮೂರು ಪರೀಕ್ಷಾ ಕೇಂದ್ರಗಳ ಮುಖ್ಯ ಅಧ್ಯಕ್ಷರು ಹಾಗೂ ಪ್ರಾಚಾರ್ಯರಾದ ಚಂದ್ರಕಾಂತ ಬುರಕಲ್‌, ಐ.ಜಿ ಅಂಜುಟಗಿ ಹಾಗೂ ಪರಮೇಶ್ವರ ಧನ್ನಿ ತಿಳಿಸಿದ್ದಾರೆ.

­ಆಳಂದ: ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿನ ಒಟ್ಟು ಐದು ಪರೀಕ್ಷಾ ಕೇಂದ್ರಗಳಲ್ಲಿ ಸುಮಾರು 1600 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆದರು. ಪಟ್ಟಣದಲ್ಲಿನ ಸರ್ಕಾರಿ ಬಾಲಕರ ಮತ್ತು ಬಾಲಕಿಯರ ಪಪೂ ಕಾಲೇಜು, ಮಾದನಹಿಪ್ಪರಗಾ ಜೂನಿಯರ್‌ ಕಾಲೇಜು ಹಾಗೂ ಪಟ್ಟಣದಲ್ಲಿನ ಖಾಸಗಿ ಆರ್‌ಎಂಎಲ್‌ ಕಾಲೇಜು ಹಾಗೂ ಎಸ್‌ಆರ್‌ಜಿ ಕಾಲೇಜಿನಲ್ಲಿ ಪರೀಕ್ಷಾ ಕೇಂದ್ರಗಳಿಗೆ ಯಾವುದೇ ಭಯ ಭೀತಿ ಇಲ್ಲದೆ ತೆರಳಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಪರೀಕ್ಷೆ ಬರೆದು ನೆಮ್ಮದಿ ನಿಟ್ಟುಸಿರು ಬಿಟ್ಟರು. ಆರ್‌.ಎಂ.ಎಲ್‌ ಕಾಲೇಜಿನಲ್ಲಿ ಆರ್‌ಬಿಎಸ್‌ಕೆ ತಂಡದ ಡಾ| ವಿನಾಯಕ ತಾಟಿ ನೇತೃತ್ವದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಿದರು.

ಆರೋಗ್ಯ ಶಿಕ್ಷಣಾಧಿಕಾರಿ ವಿಜಯಲಕ್ಷ್ಮೀ ನಂದಿಕೋಲಮಠ, ಆರೋಗ್ಯ ಸಿಬ್ಬಂದಿ ಶ್ರೀಶೈಲ ಸೇರಿ ಪೊಲೀಸ್‌ ಇಲಾಖೆಯ ಸಿಬ್ಬಂದಿ, ಕಾಲೇಜಿನ ಪ್ರಾಚಾರ್ಯರು ಸೇರಿ ಕೋವಿಡ್‌-19 ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಿದರು.

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.