ಪಿಯು ಫಲಿತಾಂಶ: ಕಲಬುರಗಿ 1 ಸ್ಥಾನ ಜಿಗಿತ


Team Udayavani, Apr 16, 2019, 12:25 PM IST

Udayavani Kannada Newspaper
ಕಲಬುರಗಿ: ಹಿಂದುಳಿದ ಹೈದ್ರಾಬಾದ್‌ -ಕರ್ನಾಟಕ ಪ್ರದೇಶದ ಕೇಂದ್ರ ಸ್ಥಾನವಾದ ಕಲಬುರಗಿ ಜಿಲ್ಲೆ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶದಲ್ಲಿ ಈ ವರ್ಷವೂ ನೆಲ ಕಚ್ಚಿದೆ. ಕಳೆದ ಐದು ವರ್ಷದ ಹಿಂದೆ ಹೇಳಿಕೊಳ್ಳುವಂತ ಸ್ಥಾನದಲ್ಲಿದ್ದ ಜಿಲ್ಲೆಯ ಫಲಿತಾಂಶ ಕಳೆದ ವರ್ಷದಿಂದ ಮತ್ತೆ ಕಳಪೆಯಾಗಿದೆ. ಆದರೆ, ಹಿಂದಿನ ವರ್ಷಕ್ಕಿಂತ ಪ್ರಸಕ್ತ ವರ್ಷ ಒಂದು ಸ್ಥಾನ ಜಿಗಿತ ಕಂಡಿರುವುದೇ ಸಮಾಧಾನಕರ ಸಂಗತಿ. 2018-19ನೇ ಸಾಲಿನ ದ್ವಿತೀಯ ಪಿಯು ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಜಿಲ್ಲೆಗೆ ಶೇ.56.09ರಷ್ಟು ಪ್ರತಿಶತ ಫಲಿತಾಂಶ ಬಂದಿದೆ. ರಾಜ್ಯದ ಶೇಕಡಾವಾರು ಫಲಿತಾಂಶದ ಪಟ್ಟಿಯಲ್ಲಿ 29ನೇ ಸ್ಥಾನವನ್ನು ಕಲಬುರಗಿ ಪಡೆದಿದೆ. ಕೆಳ ಹಂತದಿಂದ ಕಲಬುರಗಿ ನಾಲ್ಕನೇ ಸ್ಥಾನದಲ್ಲಿದೆ. ಅದರಲ್ಲಿ ಪ್ರಸಕ್ತ ವರ್ಷ ಶೇ.2.28ರಷ್ಟು ಫಲಿತಾಂಶ ಪ್ರಗತಿ ಕಂಡಿರುವುದರಿಂದ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ವರ್ಷದ ಜಿಲ್ಲೆಯ ಫಲಿತಾಂಶ ಶೇ.53.61ರಷ್ಟಿತ್ತು. ಶೇಕಡಾವಾರು ಫಲಿತಾಂಶದಲ್ಲಿ 30ನೇ ಸ್ಥಾನ ಪಡೆದಿತ್ತು.
ಹೈದ್ರಾಬಾದ್‌-ಕರ್ನಾಟಕದ ಜಿಲ್ಲೆಗಳ ಫಲಿತಾಂಶಕ್ಕೆ ಹೋಲಿಸಿದರೆ ಕೇಂದ್ರ ಸ್ಥಾನ ಕಲಬುರಗಿಯ ಸಾಧನೆಯೇ ತೀರಾ ಕಳಪೆಯಾಗಿದೆ. ಬಳ್ಳಾರಿ (ಶೇ.64.87), ಕೊಪ್ಪಳ (ಶೇ.63.15) ಕ್ರಮವಾಗಿ 19 ಮತ್ತು 20 ಸ್ಥಾನ ಪಡೆದು, ಹೈ-ಕ ಭಾಗದಲ್ಲಿ ಪ್ರಥಮ, ದ್ವಿತೀಯ ಸ್ಥಾನದಲ್ಲಿರುವುದು ಗಮನಾರ್ಹ. ತೃತೀಯ ಸ್ಥಾನದಲ್ಲಿರುವ ರಾಯಚೂರು (ಶೇ.56.09) 27ನೇ ಸ್ಥಾನ ಪಡೆದು ಕಲಬುರಗಿಕ್ಕಿಂತ ಎರಡು ಸ್ಥಾನಗಳಲ್ಲಿ ಮುಂದಿದೆ. ಬೀದರ ಮತ್ತು ಯಾದಗಿರಿ ಜಿಲ್ಲೆಗಳು ಕಲಬುರಗಿ ಜಿಲ್ಲೆಯ ನಂತರದ ಸ್ಥಾನದಲ್ಲಿದ್ದು, ಶೇಕಡಾವಾರು ಫಲಿತಾಂಶದಲ್ಲಿ ಬೀದರ (ಶೇ.55.78) 30 ಹಾಗೂ ಯಾದಗಿರಿ (ಶೇ.53.02) 31ನೇ ಸ್ಥಾನ ಪಡೆದಿವೆ.
23ನೇ ಸ್ಥಾನ ಪಡೆದಿತ್ತು: ಪಿಯು ಫಲಿತಾಂಶ ಎಂಬುವುದು ಶಿಕ್ಷಣ ಇಲಾಖೆ, ಉಪನ್ಯಾಸಕರು, ಪಾಲಕರು ಮತ್ತು ವಿದ್ಯಾರ್ಥಿಗಳಿಗೆ ಒಂದು ರೀತಿಯಲ್ಲೇ ನುಂಗಲಾಗದ ಕಹಿ ಮಾತ್ರೆಯೇ ಆಗಿದೆ. ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ
ಅನೇಕ ಕ್ರಮಗಳನ್ನು ಕೈಗೊಂಡಿರುವುದಾಗಿ ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳುತ್ತಲೇ ಇರುತ್ತಾರೆ. ಆದರೆ, ಫಲಿತಾಂಶ
ಪ್ರಕಟವಾದಾಗ ಮತ್ತದೇ ಕಳಪೆ ಸಾಧನೆ ಎನ್ನೋದು ಸಾಮಾನ್ಯವಾಗಿದೆ. 2013-14ನೇ ಸಾಲಿನಲ್ಲಿ ಶೇ.57.89ರಷ್ಟು ಫಲಿತಾಂಶದೊಂದಿಗೆ 29ನೇ ಸ್ಥಾನವನ್ನು ಕಲಬುರಗಿ ಪಡೆದಿತ್ತು. ಆದರೆ, ಆಶ್ಚರ್ಯಕರ ರೀತಿಯಲ್ಲಿ ಮಾರನೆ ವರ್ಷ 2014-15ರಲ್ಲಿ ಶೇ.61.06ರಷ್ಟು ಫಲಿತಾಂಶ ಬಂದಿತ್ತು. ಆ ವರ್ಷ ಫಲಿತಾಂಶ ಪಟ್ಟಿಯಲ್ಲಿ 23ನೇ ಸ್ಥಾನ ಪಡೆಯುವ ಮೂಲಕ ಆರು ಸ್ಥಾನಗಳ ಜಿಗಿತವನ್ನು ಜಿಲ್ಲೆ ಕಂಡಿತ್ತು. ನಂತರದಲ್ಲಿ ಮತ್ತೆ ಸತತ ಕುಸಿತವನ್ನು ಜಿಲ್ಲೆ ಕಂಡಿದೆ. 2015-16ರಲ್ಲಿ ಶೇ.57.05ರಷ್ಟು ಫಲಿತಾಂಶದೊಂದಿಗೆ 25ನೇ ಸ್ಥಾನ, 2016 -17ರಲ್ಲಿ ಶೇ.44ರಷ್ಟು ಫಲಿತಾಂಶದೊಂದಿಗೆ 27ನೇ ಸ್ಥಾನ
ಪಡೆದಿತ್ತು. 2017-18ರಲ್ಲಿ 53.61ರಷ್ಟು ಫಲಿತಾಂಶದೊಂದಿಗೆ 30ನೇ ಸ್ಥಾನ ಪಡೆದಿತ್ತು. ಈ ವರ್ಷ 29ನೇ ಸ್ಥಾನ ಪಡೆದು ಒಂದು ಸ್ಥಾನ ಜಿಗಿತ ಕಂಡಿದ್ದು, ಮುಂದಿನ ಸ್ಥಾನ ಪಡೆಯಲಿದೆ ಎಂಬ ಸಹಜ ಕುತೂಹಲ ಇದ್ದೇ ಇದೆ.
ಬಾಲಕಿಯರದ್ದೇ ಮೇಲುಗೈ ಈ ವರ್ಷ ಪಿಯು ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದ ಒಟ್ಟು 28,865 ವಿದ್ಯಾರ್ಥಿಗಳಲ್ಲಿ 14,290 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಇದರಲ್ಲಿ 7,392 ಬಾಲಕಿಯರು, 6,898 ಬಾಲಕರು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ ಒಟ್ಟು 12,546 ವಿದ್ಯಾರ್ಥಿಗಳ ಪೈಕಿ 4,821, ವಾಣಿಜ್ಯ ವಿಭಾಗದಲ್ಲಿ 5,620 ವಿದ್ಯಾರ್ಥಿಗಳ ಪೈಕಿ 2,014 ಮತ್ತು ವಿಜ್ಞಾನ ವಿಭಾಗದಲ್ಲಿ 10,699 ವಿದ್ಯಾರ್ಥಿಗಳ ಪೈಕಿ 6,655 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ನಗರ ಪ್ರದೇಶದಲ್ಲಿ 12,044 ಹಾಗೂ ಗ್ರಾಮೀಣ ಪ್ರದೇಶದಲ್ಲಿ 2,246 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ.
ಮಹೇಶ ಜಿಲ್ಲೆಗೆ ಟಾಪರ್‌ ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಘೋಷಿತ ಪಿಯುಸಿ ಫಲಿತಾಂಶದಲ್ಲಿ ಖಣದಾಳದ ಶರಣಮ್ಮ ಡಿಗ್ಗಾವಿ ಸ್ಮರಣಾರ್ಥದ ಶ್ರೀಗುರು ವಿದ್ಯಾಪೀಠದ ಮಹೇಶ ಭಕರೆ ಜಿಲ್ಲೆಗೆ ಟಾಪರ್‌ ಸ್ಥಾನ ಪಡೆದಿದ್ದಾನೆ. 587  ಕಗಳನ್ನು
ಪಡೆಯುವ ಮೂಲಕ ಸಾಧನೆ ತೋರಿದ್ದು, ಗ್ರಾಮೀಣ ಭಾಗದಿಂದ ಅದರಲ್ಲೂ ಕನ್ನಡ ಮಾಧ್ಯಮದಲ್ಲಿ ಓದಿರುವ ಮಹೇಶ ಮಾದರಿಯಾಗಿ ಹೊರ ಹೊಮ್ಮಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲೆಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಡಿಗ್ಗಾವಿ ಹಾಗೂ ಕಾರ್ಯದರ್ಶಿ ಶಿವರಾಜ ಡಿಗ್ಗಾವಿ ಹರ್ಷ ವ್ಯಕ್ತಪಡಿಸಿದ್ದಾರೆ.
ಶೈಕ್ಷಣಿಕ ವರ್ಷಕ್ಕೆ ಐದು ತಿಂಗಳು ಬಾಕಿಯಿರುವಾಗ ಜಿಲ್ಲೆಗೆ ಬಂದಿದ್ದೇನೆ. ಐದು ತಿಂಗಳಲ್ಲಿ ಉತ್ತಮ ಫಲಿತಾಂಶ
ಪಡೆಯಲು ಸಾಕಷ್ಟು ಪ್ರಯತ್ನ ಪಡಲಾಗಿದೆ. ಚುನಾವಣಾ ಮತ್ತು ಪರೀಕ್ಷೆಗಳು ಒಟ್ಟಾಗಿ ಬಂದಿದ್ದರಿಂದ ಫಲಿತಾಂಶಕ್ಕೆ ತೊಡಕಾಗಿದೆ. ಮುಂದಿನ ವರ್ಷ ಸಮಗ್ರವಾದ ಯೋಜನೆ ಹಾಕಿಕೊಂಡು ಫಲಿತಾಂಶ ಸುಧಾರಣೆಗೆ ಶ್ರಮಿಸಲಾಗುವುದು.
 ಶಿವಶರಣಪ್ಪ ಮೂಳೆಗಾಂವ ಉಪನಿರ್ದೇಶಕ, ಪದವಿ ಪೂರ್ವ ಶಿಕ್ಷಣ ಇಲಾಖೆ

ಟಾಪ್ ನ್ಯೂಸ್

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

Dandeli ಮತದಾನದ ದಿನವೇ ಗ್ಯಾರೇಜ್ ಸೇರಿದ ಪಿಎಸ್ಐ ವಾಹನ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.