ಮಂಟಕಿ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ
Team Udayavani, Oct 19, 2021, 12:34 PM IST
ಆಳಂದ: ತಾಲೂಕಿನ ಮಂಟಗಿ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 2020-21ನೇ ಸಾಲಿನಲ್ಲಿ 20 ಲಕ್ಷ ರೂ. ಅನುದಾನದಡಿ ಸಿಮೆಂಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಸುಭಾಷ ಗುತ್ತೇದಾರ ಗುದ್ದಲಿ ಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕರು, ಚುನಾವಣೆ ಪೂರ್ವ ನೀಡಿದ ಭರವಸೆಯಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಸರ್ಕಾರದಿಂದ ಬರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳಲು ಗ್ರಾಮಸ್ಥರು ಅಧಿಕಾರಿಗಳ ಮೇಲೆ ಒತ್ತಡ ಹೇರಬೇಕು ಎಂದು ಶಾಸಕ ಗುತ್ತೇದಾರ ಹೇಳಿದರು.
ತಾಪಂ ಮಾಜಿ ಸದಸ್ಯ ಶರಣಬಸಪ್ಪ ಬಿರಾದಾರ, ಗ್ರಾಪಂ ಅಧ್ಯಕ್ಷ ಯಶ್ವಂತರಾವ್ ಪಾಟೀಲ, ಶಿವಪ್ಪ ಪೂಜಾರಿ, ವಿಶ್ವನಾಥ, ಲೋಕೋಪಯೋಗಿ ಪ್ರಭಾರಿ ಎಇಇ ಅರುಣಕುಮಾರ ಬಿರಾದಾರ, ಮುಖಂಡ ನಾಗೂರೆ ಹಾಗೂ ಮುಖಂಡರು, ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್