ರಫೇಲ್ ಹಗರಣ: ಸದನ ಸಮಿತಿ ರಚಿಸಲು ಒತ್ತಾಯ
Team Udayavani, Sep 29, 2018, 6:00 AM IST
ಕಲಬುರಗಿ: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಬಹುಕೋಟಿ ಹಗರಣ ನಡೆದಿದೆ ಎಂಬುದಾಗಿ ಸದನದೊಳಗೆ ಹಾಗೂ ಹೊರಗೆ ಕಾಂಗ್ರೆಸ್ ಹೋರಾಟ ಮಾಡಿದ್ದರೂ ಪ್ರಧಾನಮಂತ್ರಿಗಳು ಕ್ಯಾರೇ ಎನ್ನುತ್ತಿಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಗೆ ಪ್ರಾಮಾಣಿಕತೆ ಇದ್ದರೆ ಸದನ ಸಮಿತಿ ರಚಿಸಿ ಹಗರಣವನ್ನು ತನಿಖೆಗೆ ಒಳಪಡಿಸಲಿ. ನಾವು ಈ ಹಿಂದೆ ಭೋಪೋರ್ಸ್ ಹಗರಣದಲ್ಲಿ ಸದನ ಸಮಿತಿ ರಚಿಸಿದ್ದೆವು ಎಂದು ಹೇಳಿದರು.
ಪ್ರಧಾನಿ ಮೋದಿಯವರು ಅನಿಲ ಅಂಬಾನಿ ಅವರನ್ನು ಕರೆದುಕೊಂಡು ಫ್ರಾನ್ಸ್ಗೆ ತೆರಳಿದ್ದರು. ನಂತರ ಫ್ರಾನ್ಸ್ ಅಧ್ಯಕ್ಷರ ಮೇಲೆ ಒತ್ತಡ ಹೇರಿ ರಿಲಯನ್ಸ್ ಸಂಸ್ಥೆಗೆ ರಫೇಲ್ ಯುದ್ಧ ವಿಮಾನ ಉತ್ಪಾದನೆಗೆ ಟೆಂಡರ್ ನೀಡಿದ್ದಾರೆ. ರಫೇಲ್ ಯುದ್ಧ ವಿಮಾನ ಉತ್ಪಾದನೆಯನ್ನು ಎಚ್ಎಎಲ್ಗೆ ವಹಿಸಿದ್ದರೆ ಸಾವಿರಾರು ಜನರಿಗೆ ಉದ್ಯೋಗ ದೊರಕುತ್ತಿತ್ತು ಎಂದರು.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ಗೆ 13 ಸ್ಥಾನ ಬಿಟ್ಟು ಕೊಡುವ ಬಗ್ಗೆ ಪಕ್ಷದ ವತಿಯಿಂದ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು. ಹೊಂದಾಣಿಕೆ ಅಥವಾ ಸ್ಥಾನ ಬಿಟ್ಟು ಕೊಡುವ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು.
– ಡಾ| ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ನಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
MUST WATCH
ಹೊಸ ಸೇರ್ಪಡೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!