ರಾಹುಲ್‌ ಕಾರ್ಯಕ್ರಮಕ್ಕೆ ಲಕ್ಷ ಜನ ಸೇರುವ ನಿರೀಕ್ಷೆ


Team Udayavani, Mar 16, 2019, 6:13 AM IST

gul-3.jpg

ಕಲಬುರಗಿ: ಕಳೆದ ಫೆಬ್ರುವರಿ ಮೊದಲ ವಾರದಲ್ಲಿ ನಗರಕ್ಕೆ ಬಂದು ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಕಹಳೆ ಮೊಳಗಿಸಿದ ನಂತರ ಅಖೀಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ರಾಹುಲ್‌ ಗಾಂಧಿ ಮಾರ್ಚ್‌ 18ರಂದು ಕಲಬುರಗಿಗೆ ಆಗಮಿಸುತ್ತಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ರಾಜ್ಯದ ಮೊದಲ ಚುನಾವಣಾ ಭಾಷಣ ರ್ಯಾಲಿ ಇದಾಗಿದ್ದು, ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಅವರ ಕ್ಷೇತ್ರ ಕಲಬುರಗಿಯಿಂದ ಕಹಳೆ ಮೊಳಗಿಸಲಿದ್ದಾರೆ. ಇದಕ್ಕಾಗಿ ಸಿದ್ಧತೆಗಳು ನಡೆದಿವೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.18ರಂದು ಬೆಳಗ್ಗೆ 11:30 ಗಂಟೆಗೆ ನಡೆಯುವ ಕಾಂಗ್ರೆಸ್‌ ಪಕ್ಷದ ರ್ಯಾಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಇನ್ನಿತರ ನಾಯಕರು ಭಾಗಿಯಾಗಲಿದ್ದಾರೆ.

ತದನಂತರ 1:30ಕ್ಕೆ ಬೆಂಗಳೂರಿಗೆ ತೆರಳಿ ಅಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳ ಜತೆಗಿನ ಸಂವಾದದಲ್ಲಿ ಪಾಲ್ಗೊಳ್ಳುವರು. ಹೈದರಾಬಾದ್‌ನಿಂದ ಹೆಲಿಕಾಪ್ಟರ್‌ ಮೂಲಕ ಕಲಬುರಗಿಗೆ ಆಗಮಿಸಲಿದ್ದಾರೆ. ರಾಹುಲ್‌ ಗಾಂಧಿ ಆಗಮನದೊಂದಿಗೆ ಕಾಂಗ್ರೆಸ್‌ ಪ್ರಚಾರಕ್ಕೆ ರಾಜ್ಯದಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಸಲು ಉದ್ದೇಶಿಸಲಾಗಿತ್ತು,ಆದರೆ ಬೆಳಗ್ಗೆಯೇ ಕಲಬುರಗಿಯಲ್ಲಿ ಕಾರ್ಯಕ್ರಮ ನಡೆಸಲು ಮುಖಂಡರು ತೀರ್ಮಾನಿಸಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್‌ ಪ್ರಚಾರ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ| ಜಿ. ಪರಮೇಶ್ವರ, ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್‌, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೇರಿದಂತೆ ಬೀದರ್‌, ಕಲಬುರಗಿ, ಯಾದಗಿರಿ ಜಿಲ್ಲೆಯ ಕಾಂಗ್ರೆಸ್‌ ಶಾಸಕರು, ಸಂಸದರು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಕಲಬುರಗಿಯಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಕನಿಷ್ಠ ಒಂದು ಲಕ್ಷಕ್ಕೂ ಹೆಚ್ಚಿನ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. 

ಶುಕ್ರವಾರ ಸಂಜೆ ಖಂಡ್ರೆ ಸಭೆ: ಮಾ.18 ರಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಲಬುರಗಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾ.16ರಂದು ಸಂಜೆ 5 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಪಕ್ಷದ ಪ್ರಮುಖರ ಪೂರ್ವ ಸಿದ್ಧತಾ ಸಭೆ ಕರೆಯಲಾಗಿದೆ. ಸಭೆಯಲ್ಲಿ ಪಕ್ಷದ ಕಾರ್ಯಾಧ್ಯಕ್ಷರು ಸಿದ್ಧತೆಗಳ ಬಗ್ಗೆ ಚರ್ಚಿಸುವರು. ಜತೆಗೆ ಪಕ್ಷದ ಮುಖಂಡರೊಂದಿಗೆ ಸಮಾಲೋಚಿಸುವರು ಎಂದರು.

 ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಪ್ರಚಾರ ಸಮಿತಿ ಅಧ್ಯಕ್ಷ ಜಗನ್ನಾಥ ಗೋಧಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಲ್ಲಮಪ್ರಭು ಪಾಟೀಲ, ಮುಖಂಡರಾದ ಸಿ.ಬಿ. ಪಾಟೀಲ ಓಕಳಿ, ತಿಪ್ಪಣ್ಣಪ್ಪ ಕಮಕನೂರ, ಜಿಪಂ ಪ್ರತಿಪಕ್ಷದ ನಾಯಕ ಶಿವಾನಂದ ಪಾಟೀಲ, ಯುವ ಘಟಕದ ಅಧ್ಯಕ್ಷ ಈರಣ್ಣ ಝಳಕಿ ಹಾಗೂ ಮುಂತಾದವರಿದ್ದರು.

ಚಿತ್ತಾಪುರದ ಜನರ ಆಶೀರ್ವಾದವಿ¨ ಚಿಂಚೋಳಿ ಕ್ಷೇತ್ರಕ್ಕೆ ಬಂದು ಚುನಾವಣೆಗೆ ನಿಂತು ಗೆದ್ದು ತೋರಿಲಿ ಎಂದು ಡಾ| ಉಮೇಶ ಜಾಧವ ಸವಾಲು ಹಾಕಿರುವುದಕ್ಕೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್‌ ಖರ್ಗೆ, ಚಿತ್ತಾಪುರ ಕ್ಷೇತ್ರದ ಜನರು ನನಗೆ ಆರ್ಶೀವಾದ ಮಾಡಿದ್ದಾರೆ. ಅಲ್ಲಿ ನಾನು ಸುಖವಾಗಿದ್ದೇನೆ. ಚಿಂಚೋಳಿಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಉದ್ಬವಿಸಲ್ಲ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲೂ ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂದು ಸುದ್ದಿ ಹಬ್ಬಿಸಲಾಗಿತ್ತು. ಇಷ್ಟಕ್ಕೂ ಚಿಂಚೋಳಿಯಲ್ಲಿ ನಾಯಕರ ಕೊರತೆಯಿಲ್ಲ. ಸಾಕಷ್ಟು ಜನರಿದ್ದಾರೆ. ಅವರೇ ಸೇರಿ ಮುಂದಿನ ದಿನಗಳಲ್ಲಿ ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ತಮ್ಮದೇನಿದ್ದರೂ ಅಭಿವೃದ್ಧಿ ಕೆಲಸಗಳ ಮೇಲೆ ಚುನಾವಣೆ ನಡೆಯುವುದು. ಮತದಾರರು ಕೈ ಬಿಡಲ್ಲ ಎನ್ನುವ ವಿಶ್ವಾಸವಿದೆ. ಬಣ್ಣದ ಮಾತುಗಳಿಗೆ ಜನರು ಮರಳಾಗುವುದಿಲ್ಲ. ಚುನಾವಣೆ ಸಮಯದಲ್ಲಿ ಟೀಕೆ-ಟಿಪ್ಪಣಿಗಳು ಬರುತ್ತಲೇ ಇರುತ್ತವೆ. ಸಮುದಾಯ
ಅಸಮಾಧಾನ ಎಂಬ ವರದಿಗಳು ಬರುತ್ತಿರುತ್ತವೆ.
 ಪ್ರಿಯಾಂಕ್‌ ಖರ್ಗೆ, ಸಚಿವರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.