ರಾಯಚೂರು ಏರ್‌ಪೋರ್ಟ್‌ ಜಾಗ ಪರಭಾರೆ!

ಸರ್ಕಾರಿ ಜಾಗದಲ್ಲೇ ಮನೆ, ದೇಗುಲ ನಿರ್ಮಾಣಅನಾಥವಾಗಿದೆ ಬೆಲೆ ಬಾಳುವ 398 ಎಕರೆ ಪ್ರದೇಶ

Team Udayavani, Jan 17, 2020, 10:54 AM IST

17-January-1

ರಾಯಚೂರು: ಯರಮರಸ್‌ ಬಳಿ ವಿಮಾನ ನಿಲ್ದಾಣ ನಿರ್ಮಾಣಕ್ಕೆಂದು ಹಲವು ದಶಕಗಳಿಂದ ಮೀಸಲಿಟ್ಟ “ಚಿನ್ನದ ಬೆಲೆ’ಯ ಭೂಮಿ ಒತ್ತುವರಿಗೆ ಒಳಪಟ್ಟಿದೆ. ಸುಮಾರು 398 ಎಕರೆ ಪ್ರದೇಶವನ್ನು ವಿಮಾನ ನಿಲ್ದಾಣಕ್ಕೆಂದು ಸ್ವಾದೀನಪಡಿಸಿಕೊಳ್ಳಲಾಗಿತ್ತು. ಅದರಲ್ಲಿ ಮುಖ್ಯವಾಗಿ ಏಗನೂರು ವ್ಯಾಪ್ತಿಗೆ ಸೇರಿದ 366 ಎಕರೆ ಜಮೀನು ಇದ್ದರೆ, ಯರಮರಸ್‌ ವ್ಯಾಪ್ತಿಯ 32 ಎಕರೆ ಜಮೀನಿದೆ. ಅದರ ಜತೆಗೆ ಕಂಟೋನ್ಮೆಂಟ್‌ ಭೂಮಿ ಕೂಡ ಇದ್ದು, ಅದೂ ಒತ್ತುವರಿಯಾಗಿದೆ. ಯರಮರಸ್‌ ದಂಡ್‌ ಇದೇ ವ್ಯಾಪ್ತಿಗೆ ಒಳಪಡಲಿದ್ದು, ಅಲ್ಲಿ ಕೆಲವರು ಈ ಭೂಮಿಯನ್ನೂ ತಮ್ಮ ಹೆಸರಿಗೆ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪಗಳಿವೆ.

ಸುಮಾರು ವರ್ಷಗಳ ಹಿಂದೆ ಈ ಜಮೀನು ಸ್ವಾಧೀನ ಮಾಡಿಕೊಂಡಿದ್ದು, ಇಂದಿಗೂ ಸರ್ಕಾರ ಅಲ್ಲಿ ಯಾವುದೇ ರಕ್ಷಣಾ ಕ್ರಮ ಕೈಗೊಂಡಿಲ್ಲ. ಸುತ್ತಲೂ ಬಟಾಬಯಲಿದ್ದು, ಯಾರು ಏನು ಬೇಕಾದರೂ ಮಾಡಬಹುದು ಎನ್ನುವಂತಿದೆ ಪರಿಸ್ಥಿತಿ.

ಏಗನೂರು ಬೆಳೆದಂತೆಲ್ಲ ಅಲ್ಲಿನ ಕೆಲವರು ಸರ್ಕಾರದ ಸ್ವಾಧಿಧೀನಕ್ಕೆ ಒಳಪಟ್ಟ ಜಮೀನಿನಲ್ಲೇ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಸರ್ಕಾರಕ್ಕೆ ಜಮೀನು ಮಾರಿದ್ದರೂ ಇಂದಿಗೂ ಕೃಷಿ ಮಾಡಿಕೊಂಡು ಬರಲಾಗುತ್ತಿದೆ. ಗೈರಾಣಿ ಜಮೀನು ಎಂದು ಕೆಲವರು ಉಳುಮೆ ಮಾಡಿದರೆ, ಪಿತ್ರಾರ್ಜಿತ ಆಸ್ತಿ ಎಂದು ಇನ್ನೂ ಕೆಲವರು ಕೃಷಿ ಮಾಡುತ್ತಿದ್ದಾರೆ. ಎಲ್ಲಕ್ಕಿಂತ ಮಿಗಿಲಾಗಿ ಇದು ಕೆಂಪು ಮಣ್ಣಾಗಿರುವ ಕಾರಣ ಮರಂಗಾಗಿ ಬೇಕಾಬಿಟ್ಟಿಯಾಗಿ ಭೂಮಿ ಅಗೆಯಲಾಗಿದೆ. ಇದರಿಂದ ಅಲ್ಲಲ್ಲಿ ದೊಡ್ಡ ದೊಡ್ಡ ಗುಂಡಿಗಳನ್ನು ತೋಡಲಾಗಿದೆ. ಮುಂದೆ ಈ ಗುಂಡಿಗಳನ್ನು ಮುಚ್ಚಬೇಕಾದರೂ ಸರ್ಕಾರ ಹಣ ಖರ್ಚು ಮಾಡಬೇಕಿದೆ. ಹೀಗೆ ಹಲವು ಕಾರಣಗಳಿಗೆ ಈ ಭೂಮಿ ಬಳಕೆಯಾಗುತ್ತಿದ್ದರೂ ಜಿಲ್ಲಾಡಳಿತ ಕಣ್ಮುಚ್ಚಿ ಕುಳಿತಿದೆ. ಇದೇ ಸ್ಥಳದಲ್ಲಿ ಚಿಕ್ಕ ದೇವಸ್ಥಾನ ಕೂಡ ನಿರ್ಮಿಸಲಾಗಿದೆ.

ಅದನ್ನು ವರ್ಷದಿಂದ ವರ್ಷಕ್ಕೆ ವಿಸ್ತರಿಸುತ್ತಿದ್ದು, ಮುಂದೊಂದು ದಿನ ದೇವಸ್ಥಾನದ ತೆರವಿನ ವೇಳೆ ಜಟಿಲ ಸಮಸ್ಯೆ ತಲೆದೋರಿದರೂ ಅಚ್ಚರಿ ಪಡಬೇಕಿಲ್ಲ.

ತ್ಯಾಜ್ಯ ವಿಲೇವಾರಿ ತಾಣ: ಕೆಲವೊಂದು ತ್ಯಾಜ್ಯ ವಿಲೇವಾರಿಗೂ ಈ ಭೂಮಿ ಬಳಕೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯರು ಸಾಕಷ್ಟು ಬಾರಿ ಆಕ್ಷೇಪ ವ್ಯಕ್ತಪಡಿಸಿದರೂ ಪ್ರಯೋಜನವಾಗಿಲ್ಲ. ಹಿಂದೆ ಸೆಪ್ಟಿಕ್‌ ಟ್ಯಾಂಕ್‌ ವಾಟರ್‌ ಬಿಡಲಾಗುತ್ತಿತ್ತು. ಅದಕ್ಕೆ ವಿರೋಧ ಬಂದ ಕಾರಣ ಈಗ ಕಡಿಮೆಯಾಗಿದೆ. ಆದರೆ ಮೆಡಿಕಲ್‌ ತ್ಯಾಜ್ಯ, ಹತ್ತಿ ತ್ಯಾಜ್ಯ, ಘನ ತ್ಯಾಜ್ಯ, ಕಟ್ಟಡ ತ್ಯಾಜ್ಯಗಳನ್ನು ಆಗಾಗ ಈ ಭಾಗದಲ್ಲೇ ವಿಲೇವಾರಿ ಮಾಡಲಾಗುತ್ತಿದೆ. ನಿರುಪಯುಕ್ತ ಹತ್ತಿ ತಂದು ಸುಡಲಾಗುತ್ತದೆ. ಇದರಿಂದ ಸಮಸ್ಯೆಯಾಗುತ್ತಿದೆ ಎನ್ನುತ್ತಾರೆ ಸ್ಥಳೀಯರು.

„ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.