ರೈಲ್ವೆ ಸಿಬ್ಬಂದಿ ಅಚಾತುರ್ಯ; ಪ್ರಯಾಣಿಕರನ್ನು ಬಿಟ್ಟು ಹೋದ ಸಿಕಂದರಾಬಾದ್ ಎಕ್ಸ್‌ಪ್ರೆಸ್‌!


Team Udayavani, Jun 25, 2023, 11:23 AM IST

ರೈಲ್ವೆ ಸಿಬ್ಬಂದಿ ಅಚಾತುರ್ಯ; ಪ್ರಯಾಣಿಕರನ್ನು ಬಿಟ್ಟು ಹೋದ ಸಿಕಂದರಾಬಾದ್ ಎಕ್ಸ್‌ಪ್ರೆಸ್‌!

ಕಲಬುರಗಿ: ಇಲ್ಲಿನ ರೈಲು ನಿಲ್ದಾಣದ ಸಿಬ್ಬಂದಿಗಳ ಅಚಾತುರ್ಯದಿಂದಾಗಿ ಕಲಬುರಗಿಯಿಂದ ಹೈದರಾಬಾದಿಗೆ ತೆರಳಬೇಕಾಗಿದ್ದ ಹಲವಾರು ಪ್ರಯಾಣಿಕರು ರೈಲು ಸಿಗದೆ ಪರದಾಟ ಅನುಭವಿಸಿದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.

ತೆಲಂಗಾಣದ ಸಿಕಂದರಾಬಾದ್ ಗೆ ತೆರಳಲು ಇಲ್ಲಿನ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದ ನೂರಾರು ಪ್ರಯಾಣಿಕರನ್ನು ಹುಬ್ಬಳ್ಳಿ-ಸಿಕಂದರಾಬಾದ್ ಎಕ್ಸ್‌ಪ್ರೆಸ್‌ ರೈಲು ಬಿಟ್ಟು ಹೋಗಿದೆ. ಇದರಿಂದ ಸಿಟ್ಟಿಗೆದ್ದ ಪ್ರಯಾಣಿಕರು ಸ್ಟೇಷನ್ ಮಾಸ್ತರ ಜತೆ ಜಗಳವಾಡಿ ಮತ್ತೊಂದು ರೈಲಿನಲ್ಲಿ ಕಳುಹಿಸಿ ಕೊಟ್ಟ ಬಳಿಕ ಪ್ರಕರಣ ಸುಖಾಂತ್ಯ ಕಂಡಿದೆ.

ಸಿಬ್ಬಂದಿ ಯಡವಟ್ಟು: ಹುಬ್ಬಳ್ಳಿಯಿಂದ ಶನಿವಾರ ರಾತ್ರಿ 9ಕ್ಕೆ ಹೊರಟಿದ್ದ ರೈಲು ಭಾನುವಾರ ‌ಬೆಳಿಗ್ಗೆ 6.15ಕ್ಕೆ ಕಲಬುರಗಿ ನಿಲ್ದಾಣಕ್ಕೆ ಬರಬೇಕಿತ್ತು. ರೈಲು ಬರಲಿದೆ ಎಂದು ಪ್ರಯಾಣಿಕರು ಪ್ಲಾಟ್ ಫಾರಂ ಸಂಖ್ಯೆ 1ರಲ್ಲಿ ಕಾಯುತ್ತಿದ್ದರು. ಆದರೆ ರೈಲು ನಿಲ್ದಾಣದ ಸಿಬ್ಬಂದಿ ರೈಲು ಯಾವ ಪ್ಲಾಟ್ ಫಾರ್ಮನಲ್ಲಿ ಬರುತ್ತದೆ ಎನ್ನುವ ಮಾಹಿತಿ ನೀಡಿರಲಿಲ್ಲ. ಹೈದರಾಬಾದಿಗೆ ಪ್ರಯಾಣಿಸುವ ಪ್ರಯಾಣಿಕರು ನಂ. 1ರಲ್ಲಿ ನಿಂತಿದ್ದರು. ಆದರೆ, ಸಮಯಕ್ಕೆ ಸರಿಯಾಗಿ ಬಂದ ರೈಲು ಮತ್ತೊಂದು ಪ್ಲಾಟ್ ಫಾರ್ಮನಲ್ಲಿ ನಿಂತು ತೆರಳಿದೆ. ಇದರಿಂದಾಗಿ ಮುಂಗಡ ಟಿಕೆಟ್ ಬುಕ್ ಮಾಡಿ ಕಾಯುತ್ತಿದ್ದ ನಿಂತಿದ್ದ ಪ್ರಯಾಣಿಕರಿಗೆ ನಿರಾಶೆ ಮತ್ತು ಸಿಟ್ಟು ಬಂದಿದೆ. ಇದರಿಂದ ಸಿಟ್ಟಿಗೆದ್ದ ಪ್ರಯಾಣಿಕರು ರೈಲ್ವೆ ಸ್ಟೇಷನ್ ಮ್ಯಾನೇಜರ್ ಕಚೇರಿಗೆ ತೆರಳಿ ವಾಗ್ವಾದ ನಡೆಸಿದರು.

ಇದನ್ನೂ ಓದಿ:ಮಣಿಪುರ: ಸಾವಿರಾರು ಮಹಿಳೆಯರಿಂದ ದಾಳಿ: 12 ಉಗ್ರರನ್ನು ಬಿಟ್ಟುಕಳುಹಿಸಿದ ಸೇನೆ

ಪ್ರಯಾಣಿಕ ರೆಹಮಾನ್ ಪಟೇಲ್ ಹೇಳುವಂತೆ, ರೈಲು 6.32ಕ್ಕೆ ಬರಲಿದೆ ಎಂದು ಫಲಕದಲ್ಲಿ ತೋರಿಸುತ್ತಿತ್ತು. ಆದರೆ, ಎಷ್ಟು ಹೊತ್ತಾದರೂ ಬರಲಿಲ್ಲ. ಆ ಮೇಲೆ ರೈಲ್ವೆ ‌ಸಿಬ್ಬಂದಿ ನಂತರ ಬಂದ ಹುಸೇನ್ ಸಾಗರ್ ರೈಲಿನ ಬಗ್ಗೆ ಮಾಹಿತಿ ಅನೌನ್ಸ್ ಮಾಡಿದ ಬಳಿಕವಷ್ಟೇ ನಮ್ಮ ರೈಲು ಹೋಗಿರುವುದು ಗೊತ್ತಾಯಿತು. ಸುಮಾರು 60ಕ್ಕೂ ಹೆಚ್ಚು ಜನ ಹುಬ್ಬಳ್ಳಿ-ಸಿಕಂದರಾಬಾದ್ ರೈಲಿನಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿದ್ದರು. ಸಕಾಲಕ್ಕೆ ಮೈಕ್ ನಲ್ಲಿ ಮಾಹಿತಿ ನೀಡದೇ ಇದ್ದುದರಿಂದ ಈ ಅಚಾತುರ್ಯ ಸಂಭವಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈ ವಿಷಯ ಸ್ಟೇಷನ್ ಮಾಸ್ತರ್ ಪಿ.ಎ. ನರಗುಂದಕರ್,ಗೆ ತಿಳಿದಾಗ ವಿಷಾದ ವ್ಯಕ್ತಪಡಿಸಿ,  ಎಲ್ಲ ಪ್ರಯಾಣಿಕರನ್ನು ಹುಸೇನ್ ಸಾಗರ್ ರೈಲಿನಲ್ಲಿ  ಅಧಿಕಾರಿಗಳು ಕಳುಹಿಸಿಕೊಟ್ಟರು‌.

ಟಾಪ್ ನ್ಯೂಸ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.