ಅಲಾವಧಿ ಬೆಳೆಗೆ ಜೀವ ತುಂಬಿದ ವರುಣ


Team Udayavani, Jun 28, 2021, 7:11 PM IST

ಎರೆರೆ3ರರ4ರ

ಕಲಬುರಗಿ: ಮುಂಗಾರು ಮೃಗಶಿರ (ಜೂನ್‌ 7) ಆರಂಭದ ಮುಂಚೆ ಸುರಿದಿದ್ದ ಮಳೆ, ತದನಂತರ ಭರವಸೆ ಮೂಡಿಸದೇ ಮರೆಯಾಗಿದ್ದ ಮುಂಗಾರು ಹಂಗಾಮಿನ ಎರಡನೇ ಮಳೆ ಆರಿದ್ರ ಶುರುವಾಗಿದ್ದು, ರವಿವಾರ ಜೂನ್‌ 27ರಂದು ಜಿಲ್ಲೆಯಾದ್ಯಂತ ಉತ್ತಮವಾಗಿ ಸುರಿದಿದೆ. ಹೀಗಾಗಿ ರೈತನ ಮೊಗದಲ್ಲಿ ಭರವಸೆ ಮೂಡಿದೆ.

ಶನಿವಾರ ರಾತ್ರಿ ಜಿಲ್ಲೆಯಾದ್ಯಂತ 14.8 ಮಿ.ಮೀ ಮಳೆ ಸುರಿದಿದೆ. ಅತಿ ಹೆಚ್ಚಿನ ಮಳೆ ಅಫ‌ಜಲಪುರ ತಾಲೂಕಿನಲ್ಲಿ 34.2 ಮಿ.ಮೀ, ಜೇವರ್ಗಿ ತಾಲೂಕಿನಲ್ಲಿ 22 ಮಿ.ಮೀ, ಚಿಂಚೋಳಿಯಲ್ಲಿ ಅತಿ ಕಡಿಮೆ 3.4 ಮಿ.ಮೀ ಮಳೆಯಾಗಿದೆ. ರವಿವಾರ ಜಿಲ್ಲೆಯಾದ್ಯಂತ ಸಣ್ಣ ಪ್ರಮಾಣದಲ್ಲಿ ಮಳೆ ಸುರಿದಿದೆ. ಶನಿವಾರ ರಾತ್ರಿ ಹಾಗೂ ರವಿವಾರ ಜಿಲ್ಲೆಯಾದ್ಯಂತ ಸುರಿದ ಮಳೆ ಕಲ್ಯಾಣ ಕರ್ನಾಟಕದ ವಾಣಿಜ್ಯ ಬೆಳೆ ತೊಗರಿ ಬಿತ್ತನೆಗೆ ಹಸಿರು ನಿಶಾನೆ ತೋರಿದೆ. ಈಗಾಗಲೇ ಬಿತ್ತನೆ ಮಾಡಿರುವ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು, ಸೊಯಾಬಿನ್‌, ಎಳ್ಳು ಬೆಳೆಗಳಿಗೆ ಜೀವ ತುಂಬಿದಂತಾಗಿದೆ.

ಮೃಗಶಿರ ಆರಂಭದ ನಂತರ ಹೊಲ ಪೂರ್ತಿ ಹಸಿಯಾಗುವ ಹಾಗೆ ಹಾಗೂ ಹಳ್ಳ ಕೊಳ್ಳ ಹರಿಯುವ ಹಾಗೆ ಮಳೆ ಬಂದಿರಲಿಲ್ಲ. ಆದರೆ ಶನಿವಾರ, ರವಿವಾರ ಸುರಿದ ಮಳೆ ಹೊಲ ಸಂಪೂರ್ಣ ಹಸಿಯಾಗುವ ಜತೆಗೆ ಹಳ್ಳ-ಕೊಳ್ಳಗಳಲ್ಲೂ ಸ್ವಲ್ಪ ನೀರು ಹರಿ ಯುವ ಹಾಗೆ ಮಾಡಿದೆ. ಒಟ್ಟಾರೆ ಮಳೆ ಗಾಲದ ವಾತಾವರಣ ನಿರ್ಮಾಣವಾಗಿದೆ. ತೊಗರಿ ಬಿತ್ತನೆಗೆ ಇನ್ನಷ್ಟು ಸಮಯ ಇರುವ ಹಿನ್ನೆಲೆಯಲ್ಲಿ ರೈತ ಗಡಿಬಿಡಿ ಮಾಡಿ ಭೂಮಿಗೆ ಬೀಜ ಹಾಕಿಲ್ಲ.

ಆದರೆ ಮುಂಗಾರು ಮುಂಚೆಯೇ ಮಳೆ ಬಂದ ಹಿನ್ನೆಲೆಯಲ್ಲಿ ರೈತ ಅಲ್ಪಾವಧಿ ಬೆಳೆಗಳಿಗೆ ಹೆಚ್ಚಿನ ಆಸಕ್ತಿ ಹೊಂದಿದ್ದ. ಆದರೆ ಸಕಾಲಕ್ಕೆ ಬೀಜ ದೊರೆಯದ ಹಿನ್ನೆಲೆಯಲ್ಲಿ ಸ್ವಲ್ಪ ಹಿನ್ನಡೆಯಾಯಿತು ಎನ್ನಬಹುದು. ತೊಗರಿ ಬೀಜ ಬಿತ್ತನೆಗೆ ರೈತರು ಕೃಷಿ ಇಲಾಖೆ ಹಾಗೂ ಕೃಷಿ ಸಂಶೋಧನಾ ಕೇಂದ್ರವನ್ನೇ ಸಂಪೂರ್ಣ ನಂಬಿರೋದಿಲ್ಲ. ತನ್ನಲ್ಲೇ ಬೆಳೆದ ಉತ್ತಮ ತೊಗರಿಯನ್ನೇ ಬೀಜಕ್ಕಾಗಿ ಕಾಯ್ದಿಟ್ಟಿ ರುತ್ತಾರೆ. ಹೊಸ ತಳಿ ಬಂದಾಗಲೊಮ್ಮೆ ಸ್ವಲ್ಪ ಪ್ರಮಾಣದಲ್ಲಿ ಬೀಜ ಖರೀದಿಸುತ್ತಾರೆ. ಆದರೆ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು, ಎಳ್ಳು ಬೀಜ ಸಂರಕ್ಷಿಸುವುದು ಸ್ವಲ್ಪ ಕಷ್ಟ.

ಹೀಗಾಗಿ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನೇ ನೆಚ್ಚಿಕೊಂಡಿರುತ್ತಾರೆ. ಆದರೆ ಈ ವರ್ಷ ಬೇಕು ಎಂದಾಗ ಬೀಜ ಹಾಗೂ ಗೊಬ್ಬರ ಸಿಗಲಿಲ್ಲ. ಕೃಷಿ ಅಧಿಕಾರಿಗಳು ಲೆಕ್ಕದಲ್ಲಿ ಮಾತ್ರ ಇಷ್ಟು ಬೀಜ ಬಂದಿದೆ ಎನ್ನುತ್ತಾರೆ. ವಾಸ್ತವಿಕವಾಗಿ ರೈತರಿಗೆ ಅಷ್ಟೊಂದು ಪ್ರಮಾಣದಲ್ಲಿ ಬೀಜ ದೊರಕಿಲ್ಲ. ಅಲ್ಪಾವಧಿ ಬೀಜಗಳು ದೊರಕದ ಕಾರಣ ಪರ್ಯಾಯ ಬೆಳೆ ಬೆಳೆಯುವಂತೆ ಸರ್ಕಾರ ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಹೇಳಿದ್ದನ್ನು ನೋಡಿದರೆ ಬೀಜ ಹಾಗೂ ಗೊಬ್ಬರ ರೈತರ ಬೇಡಿಕೆಗೆ ಅನುಗುಣವಾಗಿ ಪೂರೈಕೆಯಾಗಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.

 

ಟಾಪ್ ನ್ಯೂಸ್

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.