ಜೋಳ ಬಿತನೆಗೆ ಅವಕಾಶ ನೀಡಿದ ಮಳೆ


Team Udayavani, Oct 18, 2018, 11:24 AM IST

gul-2.jpg

ಕಲಬುರಗಿ: ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಳೆ ಬುಧವಾರ ಬೆಳಗಿನ ಜಾವ ಜಿಲ್ಲೆಯಾದ್ಯಂತ ಅಲ್ಪ ಪ್ರಮಾಣದಲ್ಲಿ ಸುರಿದಿದ್ದರಿಂದ ಹಿಂಗಾರಿನ ಪ್ರಮುಖ ಬೆಳೆಯಾಗಿರುವ ಜೋಳ ಬಿತ್ತನೆಗೆ ಸ್ವಲ್ಪ ಅವಕಾಶ ನೀಡಿದ್ದರೆ, ತೇವಾಂಶವಿಲ್ಲದೇ ಒಣಗುತ್ತಿದ್ದ ತೊಗರಿಗೆ ಆಸರೆಯಾಗಿದೆ.

ಹಿಂಗಾರು ಹಂಗಾಮಿನ ಉತ್ತರಿ ಮಳೆ ಸೆಪ್ಟೆಂಬರ್‌ 13ರಂದು ಆರಂಭವಾಗಿದ್ದರೂ ತದನಂತರದ ಹಸ್ತಿ ಮಳೆ ಸುರಿದಿರಲಿಲ್ಲ. ಬುಧವಾರ ಸುರಿದ ಮಳೆ ಚಿತ್ತಿಯಾಗಿದೆ. ಈ ಮಳೆ ಕಾಲಾವಧಿ ಇದೇ ಅಕ್ಕೋಬರ್‌ 24ರ ವರೆಗೆ ಇರುತ್ತದೆ. ಸ್ವಾತಿ ಮಳೆಯು ಅಕ್ಕೋಬರ್‌ 24ರಂದು ಪ್ರಾರಂಭವಾಗುತ್ತದೆ. ವಿಜಯದಶಮಿ ಹಬ್ಬದಂದು  ಹಾಗೂ ಸ್ವಾತಿ ಮಳೆಯೂ ಬರಲಿದೆಎನ್ನಲಾಗುತ್ತಿದೆ.

ಜೋಳ ಬಿತ್ತನೆ ಇಷ್ಟೋತ್ತಿಗೆ ಮುಗಿಯಬೇಕಿತ್ತು. ಕಡಲೆಯಂತು ಈಗಾಗಲೇ ಸಾಲು-ಸಾಲು ಹರಿಯಬೇಕಿತ್ತು. ಆದರೆ ಮಳೆ ಬಾರದೇ ಭೂಮಿಯಲ್ಲಿ ತೇವಾಂಶವಿಲ್ಲದ ಕಾರಣ ರೈತ ಬಿತ್ತನೆಗೆ ಮುಂದಾಗಿರಲಿಲ್ಲ. ಆದರೆ ಕೆಲವೆಡೆ ಮಳೆ ಬರಬಹುದೆಂಬ ಆಶಾಭಾವನೆಯಿಂದ ಜೋಳ ಬಿತ್ತನೆ ಮಾಡಲಾಗಿದೆ. ಕೆಲವೆಡೆ ಕಡಲೆ ಬಿತ್ತನೆ ಮಾಡಲಾಗಿದ್ದರೂ ತೇವಾಂಶವಿಲ್ಲದ ಕಾರಣ ಬೀಜ ಮೊಳಕೆಯೊಡೆದಿಲ್ಲ. ಆದರೆ ಬುಧವಾರ ಸುರಿದ ಮಳೆ ಜೋಳ ಬಿತ್ತನೆಗೆ ಅವಕಾಶ ನೀಡುವಂತಾದರೆ, ಕಡಲೆ ಮೊಳಕೆಯೊಡಲು ಸಹಕಾರಿಯಾಗಿದೆ.

ಮಂಗಳವಾರ ಸಂಜೆ ಹಾಗೂ ಬುಧವಾರ ಬೆಳಗಿನ ಜಾವ ಜಿಲ್ಲೆಯಾದ್ಯಂತ 22 ಮಿ.ಮೀ ಮಳೆ ಸುರಿದಿದೆ. ಅಕ್ಟೋಬರ್‌ ತಿಂಗಳಿನಲ್ಲಿ ಜಿಲ್ಲೆಯಾದ್ಯಂತ 68 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ ಕೇವಲ 28 ಮಿ.ಮೀ ಮಾತ್ರ ಸುರಿದು ಶೇ. 58ರಷ್ಟು ಮಳೆ ಕೊರತೆಯಾಗಿದೆ. ಅದೇ ರೀತಿ ಸೆಪ್ಟೆಂಬರ್‌ ತಿಂಗಳಿನಲ್ಲಿ ಸರಾಸರಿ 189 ಮಿ.ಮೀ ಮಳೆ ಬರಬೇಕಿತ್ತು. ಆದರೆ ಕೇವಲ 63 ಮಿ.ಮೀ ಮಾತ್ರ ಸುರಿದು ಶೇ. 67ರಷ್ಟು ಮಳೆ ಕೊರತೆಯಾಗಿದೆ.

ಸೆಪ್ಟೆಂಬರ್‌ ತಿಂಗಳಿನಲ್ಲಿ ಮಳೆ ಬಂದಿದ್ದರೆ ಹಿಂಗಾರಿ ಬಿತ್ತನೆಯೂ ಸುಗಮವಾಗುತ್ತಿತ್ತು. ಜತೆಗೆ ಹೈ. ಕ. ವಾಣಿಜ್ಯ ಬೆಳೆ ತೊಗರಿಯೂ ಉತ್ತಮವಾಗಿ ಇಳುವರಿ ಬರಲು ಸಾಧ್ಯವಾಗುತ್ತಿತ್ತು.  ಬುಧವಾರ ಬೆಳಗಿನ ಜಾವ ಸುರಿದ ಮಳೆ ಇನ್ನಷ್ಟು ಪ್ರಮಾಣದಲ್ಲಿ ಬಂದಿದ್ದರೆ ಜೋಳ-ಕಡಲೆ ಬಿತ್ತನೆಗೆ ಯಾವುದೇ ಆತಂಕವಿರಲಿಲ್ಲ. ಏಕೆಂದರೆ ಭೂಮಿ ಕಾದ ಹಂಚಿನಂತಾಗಿದ್ದರಿಂದ ಈ ಮಳೆಯಿಂದ ಭೂಮಿ ಆಳವಾಗಿ ಹಸಿ(ತೇವಾಂಶ)ಯಾಗಿಲ್ಲ. ತೇವಾಂಶ ಕೊರತೆಯಿಂದ ಶೇ. 50 ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ತೊಗರಿ ಹೂವು ಉದುರಿದೆ.

ಆದರೆ ಈ ಮಳೆ ಹೂವು ಉದುರುವುದನ್ನು ನಿಲ್ಲಿಸಬಹುದಾಗಿದೆ. ಹೀಗಾಗಿ ಎಕರೆಗೆ ಕನಿಷ್ಠ ಒಂದು ಕ್ವಿಂಟಲ್‌ ಇಳುವರಿಯಾದರೂ ಬರಬಹುದೆಂಬ ನಿರೀಕ್ಷೆ ರೈತರದ್ದಾಗಿದೆ. ಕಳೆದ ವರ್ಷ ತೊಗರಿ ಎಕರೆಗೆ 6 ರಿಂದ 7 ಕ್ವಿಂಟಲ್‌ ಇಳುವರಿ ಬಂದಿತ್ತು. ಆದರೆ ಈ ವರ್ಷ 1ರಿಂದ 2 ಕ್ವಿಂಟಲ್‌ ಇಳುವರಿ ಬರುವುದು ದುಸ್ತರವಾಗಿದೆ. ಚಿಂಚೋಳಿ, ಸೇಡಂ ಹಾಗೂ ಚಿತ್ತಾಪುರ ತಾಲೂಕಿನಲ್ಲಿ ಸ್ವಲ್ಪ ಪರ್ವಾಗಿಲ್ಲ ಎನ್ನುವಂತೆ ಬೆಳೆ ಇದೆ. ಅಫಜಲಪುರ ಹಾಗೂ ಜೇವರ್ಗಿ ತಾಲೂಕಿನಲ್ಲಿ ಒಂದು ಕ್ವಿಂಟಲ್‌ ಸಹ ಇಳುವರಿ ಬಾರದ ಕೆಟ್ಟ ಪರಿಸ್ಥಿತಿಯಿದೆ.

ಕೈ ಹಿಡಿಯದ ಸೂರ್ಯಕಾಂತಿ: ಹಿಂಗಾರು ಹಂಗಾಮಿನಲ್ಲಿ ಸೂರ್ಯಕಾಂತಿಯೂ ಪ್ರಮುಖ ಬೆಳೆಯಾಗಿದೆ. ಆದರೆ ಮಳೆ ನಾಪತ್ತೆಯಾಗಿದ್ದರಿಂದ ರೈತ ಈ ಸಲ ಸೂರ್ಯಕಾಂತಿ ಬಿತ್ತನೆಗೆ ಮುಂದಾಗಿಲ್ಲ. ಆದರೆ ಮುಂಗಾರು ಹಂಗಾಮಿನಲ್ಲಿ ತೊಗರಿ ನಡುವೆ ಒಂದು ಸಾಲ ಸೂರ್ಯಕಾಂತಿ ಹಾಕಲಾಗಿದ್ದು, ಕೆಲವೆಡೆ ಸ್ವಲ್ಪ ಪ್ರಮಾಣದಲ್ಲಾದರೂ ಇಳುವರಿ ಬರುವ ಲಕ್ಷಣಗಳು ಕಂಡು ಬಂದಿವೆ. ಒಟ್ಟಾರೆ ಹಿಂಗಾರು ಮಳೆ ಅಭಾವ ಕುಸುಬೆ, ಗೋಧಿ ಸೇರಿದಂತೆ
ಇತರ ಹಿಂಗಾರು ಬೆಳೆಗಳಿಗೂ ಕುತ್ತು ತಂದಿದೆ. ಎರಡೂಮೂರು ದಿನದೊಳಗೆ ಮಗದೊಮ್ಮೆ ಮಳೆ ಚೆನ್ನಾಗಿ ಬರಲಿದೆ ಎಂಬುದಾಗಿ ಕೃಷಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮಳೆ ಬೀಳುವವರೆಗೂ ಯಾವುದನ್ನು ನಿಶ್ಚಿತವಾಗಿ ಹೇಳುವಂತಿಲ್ಲ ಎನ್ನುವಂತಾಗಿದೆ.

„ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.