ಮಳೆ ಆರ್ಭಟ: ರಸ್ತೆ ಸಂಚಾರಕ್ಕೆ ಅಡೆತಡೆ


Team Udayavani, Jun 17, 2017, 3:34 PM IST

gul3.jpg

ಆಳಂದ: ಒಂದೆಡೆ ಮುಂಗಾರು ಮಳೆ ಸುರಿಯುವ ಸಂತೋಷ. ಇನ್ನೊಂದೆಡೆ ತಾಲೂಕಿನ ಪ್ರಮುಖ ರಸ್ತೆಗಳ ಸಂಪರ್ಕ ಸೇತುವೆ ಹಾಗೂ ಸೇತುವೆ ರಸ್ತೆಗಳಿಗೆ ಹಾನಿಯಾಗಿ ವಾಹನ ಸಂಚಾರಕ್ಕೆ ಅಡೆತಡೆಯಾಗಿದೆ. 

ಪಟ್ಟಣದಿಂದ ತಡಕಲ್‌ ಮಾರ್ಗವಾಗಿ ಸಂಚರಿಸುವ ಮಲಂಗ ಮತ್ತು ಸುಭಾಷ ಗುತ್ತೇದಾರ ತೋಟದ ಹತ್ತಿರದಿಂದ ಹಾಯ್ದು ಹೋಗಿರುವ ರಾಜ್ಯ ಹೆದ್ದಾರಿ ಸೇತುವೆಗೆ ಮತ್ತು ರಸ್ತೆಗೆ ಹಾನಿ ಆಗಿದ್ದರಿಂದ ಮತ್ತೆ ಸಂಚಾರಕ್ಕೆ ತೊಂದರೆ ಉಂಟಾಗಿ ವಾಹನಗಳು ಮಾರ್ಗ ಬದಲಿಸಿ ಸಂಚರಿಸುತ್ತಿವೆ. 

ಶುಕ್ರವಾರ ದೇಗಾಂವ ಮುನ್ನೊಳ್ಳಿ ಸೇತುವೆ, ಬಸವಣ್ಣ ಸಂಗೋಳಗಿ ಮುನ್ನೊಳ್ಳಿ ರಸ್ತೆಯ ಸೇತುವೆಗೆ ಹಾನಿಯಾಗಿದ್ದರಿಂದ ಸಂಚಾರ ಸ್ಥಗಿತಗೊಂಡಿದೆ ಎಂದು ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ತಿಳಿಸಿದ್ದಾರೆ. ಈ ಕುರಿತು ತುರ್ತು ಕ್ರಮಕೈಗೊಂಡು ಸಂಚಾರಕ್ಕೆ ಅನುಕೂಲ ಒದಗಿಸಲು ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಲಬುರಗಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಗೆ ಬರುವ ತಾಲೂಕಿನ ಅಂಬಲರಗಾ ಮಹಾಗಾಂವ ಕ್ರಾಸ್‌ ರಸ್ತೆ ತೀರಾ ಆಮೆಗತಿಯಲ್ಲಿ ಸಾಗಿದ್ದು, ಮಳೆ ನೀರಿಗೆ ರಸ್ತೆ ಕೆಸರು ಗದ್ದೆಯಾಗಿದೆ. ಮಹಾರಾಷ್ಟ್ರದ ಉಮರಗಾದಿಂದ ಸುಲೆಪೇಟವರೆಗಿನ ಹೆದ್ದಾರಿ ಇದಾಗಿದೆ. ಆಳಂದ ವಿ.ಕೆ. ಸಲಗರ ಹೆದ್ದಾರಿ ಕಾಮಗಾರಿ ಪೂರ್ಣಗೊಂಡಿದೆ. 

ಅಂಬಲಗಾ ಕ್ರಾಸ್‌ ಮಡಕಿ, ಮಹಾಗಾಂವ ತಾಂಡಾದ ರಸ್ತೆ ಮಾಡಲು ಸುಮಾರು 5 ಕಿ.ಮೀ. ರಸ್ತೆ ಆಗೆದಿದ್ದು, ಇದರಿಂದಾಗಿ ಇಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ರಸ್ತೆಯುದ್ದಕ್ಕೂ ಕೆಸರು ಆಗಿದ್ದರಿಂದ ಸಂಚಾರವೂ ಅಪಾಯಕಾರಿಯಾಗಿ ಪರಿಣಮಿಸಿದೆ.

ಕಲಬುರಗಿ ತಲುಪಲು ಹೆಚ್ಚು ಸಮಯ ಬೇಕಿದೆ. ಚಿಂಚನಸೂರ ಮಾರ್ಗವಾಗಿ ಹೋಗಬೇಕಾದರೆ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಈ ರಸ್ತೆ ಶೀಘ್ರವೇ ದುರಸ್ತಿಗೊಳಿಸಬೇಕು ಎಂದು ಈ ಭಾಗದ ಸಾರ್ವಜನಿಕರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ. 

ಜೆಡಿಎಸ್‌ ಒತ್ತಾಯ: ತಾಲೂಕಿನ ಕೆಲವು ಕಡೆ ರಸ್ತೆ ನಿರ್ಮಾಣ ಮಾಡಿ ಕೈಗೊಂಡ ಸೇತುವೆ ಮತ್ತು ಅದರ ಬಳಿಯ ರಸ್ತೆ ಕಾಮಗಾರಿ ಕಳಪೆ ಆಗಿದ್ದರಿಂದ ಕೊಚ್ಚಿ ಹೋಗಿದೆ. ಈ ಕಾಮಗಾರಿ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸಬೇಕು ಎಂದು ಜೆಡಿಎಸ್‌ ಮುಖಂಡ ಸೂರ್ಯಕಾಂತ ಕೊರಳ್ಳಿ  ಆಗ್ರಹಿಸಿದ್ದಾರೆ. 

ಪರಿಹಾರಕ್ಕೆ ಬಿಜೆಪಿ ಒತ್ತಾಯ: ಶಾಸಕರು ಪಕ್ಷಾತರ ರಾಜಕಾರಣದಲ್ಲೇ ಕಾಲ ಕಳೆಯುತ್ತಿದ್ದಾರೆ. ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಇಂಥ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಮಾಜಿ ಶಾಸಕ ಸುಭಾಷ  ಗುತ್ತೇದಾರ ಒತ್ತಾಯಿಸಿದ್ದಾರೆ. 

ಸಿಪಿಐ ಒತ್ತಾಯ: ಉದ್ಯೋಗ ಖಾತ್ರಿಯಲ್ಲಿ ಸಮಪರ್ಕವಾಗಿ ಎಲ್ಲೆಡೆ ಬದು  ನಿರ್ಮಾಣ ಕೆಲಸ ಮಾಡಿದ್ದರೆ ಮಳೆಯಾದ ಮೇಲೂ ಜಮೀನುಗಳ ಮಣ್ಣು ಕೊಚ್ಚಿ ಹೋಗುತ್ತಿರಲಿಲ್ಲ. ಇದಕ್ಕೆ ಆಡಳತ ನಿರ್ಲಕ್ಷವೇ ಸಾಕ್ಷಿ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಮೌಲಾ ಮುಲ್ಲಾ ಆರೋಪಿಸಿದ್ದಾರೆ.

* ಮಹಾದೇವ ವಡಗಾಂವ

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.