ಪುಸ್ತಕಗಳ ಆಯ್ಕೆ ಪೂರ್ಣಗೊಳಿಸಲು ರಾಜಾ ಸೂಚನೆ


Team Udayavani, Nov 18, 2018, 11:05 AM IST

gul-1.jpg

ಕಲಬುರಗಿ: ಜಿಲ್ಲಾ ಮಟ್ಟದ ಪುಸ್ತಕ ಖರೀದಿ ಸಮಿತಿ ಸದಸ್ಯರು ನ.30 ರೊಳಗಾಗಿ ಜಿಲ್ಲೆಯ ಲೇಖಕರಿಂದ ಸ್ವೀಕೃತವಾದ ಪುಸ್ತಕಗಳನ್ನು ಪರಿಶೀಲಿಸಿ ಅಂತಿಮ ಆಯ್ಕೆ ಮಾಡಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಕರೆದ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ 2017-18ನೇ ಸಾಲಿನ ಮ್ಯಾಕ್ರೋ ಕ್ರಿಯಾ ಯೋಜನೆ ಅಡಿಯಲ್ಲಿ ಜಿಲ್ಲಾ ಮಟ್ಟದ ಪುಸ್ತಕ ಖರೀದಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಚ್‌ಕೆಆರ್‌ಡಿಬಿ ಜಿಲ್ಲೆಯ ಲೇಖಕರಿಂದ ಪುಸ್ತಕ ಖರೀದಿಸಲು 35 ಲಕ್ಷ ರೂ.ಗಳನ್ನು ನೀಡಿದೆ. ಜಿಲ್ಲೆಯಿಂದ ಸುಮಾರು 124 ಲೇಖಕರಿಂದ ಪುಸ್ತಕಗಳು ಸ್ವೀಕೃತವಾಗಿದ್ದು, ಎಲ್ಲ ಲೇಖಕರ ಪುಸ್ತಕ ಖರೀದಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಮಿತಿ ಸದಸ್ಯರು ಪಿ.ಹೆಚ್‌.ಡಿ. ಸಂಶೋಧನೆಗೆ
ನೀಡಿದ ಪ್ರಬಂಧ, ಕಲಬುರಗಿ ವಿಭಾಗ ಬಿಟ್ಟು ಬೇರೆ ಪ್ರದೇಶಗಳ ವ್ಯಕ್ತಿಗಳ ಪರಿಚಯ ಗ್ರಂಥ, ರಾಜಕೀಯ ಪಕ್ಷಗಳಿಗೆ ನೇರವಾಗಿ ಸಂಬಂಧಿಸಿದ ಪುಸ್ತಕಗಳು, ಅಭಿನಂಧನಾ ಗ್ರಂಥ, ಧಾರ್ಮಿಕ ಪ್ರಚೋದನೆ ಒಳಗೊಂಡ ಪುಸ್ತಕಗಳನ್ನು ಹೊರತುಪಡಿಸಿ ಉಳಿದ ಪುಸ್ತಕಗಳನ್ನು ಪರಿಶೀಲಿಸಿ, ಪುಸ್ತಕಗಳ ಮುದ್ರಣ, ವಿಷಯ, ಸಾಹಿತ್ಯ ಹಾಗೂ ಗುಣಮಟ್ಟಕ್ಕೆ ಅಂಕಗಳನ್ನು ನಿಗದಿಪಡಿಸಿ ಪುಸ್ತಕಗಳ ಆಯ್ಕೆ ಮಾಡಬೇಕು ಎಂದರು.

ಪುಸ್ತಕ ಆಯ್ಕೆ ಸಮಿತಿ ಸದಸ್ಯರು ಓದಿದ ಪುಸ್ತಕಗಳನ್ನು ತಮ್ಮ ತಮ್ಮಲ್ಲಿಯೇ ಬದಲಾಯಿಸಿಕೊಂಡು ಪುನಃ ಅಂಕಗಳನ್ನು ನೀಡಬೇಕು. ಹೀಗೆ ಮೂರು ಬಾರಿ ಪುಸ್ತಕಗಳನ್ನು ಪರಿಶೀಲಿಸಿ ಅಂಕ ನೀಡಿ, ಅಂಕಗಳ ಆಧಾರದ ಮೇಲೆ ಅಂತಿಮ ಪುಸ್ತಕಗಳನ್ನು ಆಯ್ಕೆ ಮಾಡಬೇಕು. ಅಂತಿಮವಾಗಿ ಆಯ್ಕೆ ಮಾಡಿದ ಪುಸ್ತಕಗಳನ್ನು ಕೂಲಂಕುಷವಾಗಿ ಓದಿ ಆಯ್ಕೆಗೆ ಶಿಫಾರಸು ಮಾಡಬೇಕು ಎಂದರು.

ಕಲಬುರಗಿಯು ವಿಭಾಗೀಯ ಕೇಂದ್ರವಾಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಲೇಖಕರು ಇದ್ದಾರೆ. ಅವರು ಬರೆದಿರುವ ಪುಸ್ತಕಗಳನ್ನು ವಿಭಾಗದ ಎಲ್ಲ 1200 ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆ ನೀಡಲು ಅನುಕೂಲವಾಗುವ ಹಾಗೆಯೇ ಪುಸ್ತಕ ಖರೀದಿಗೆ ಹೆಚ್ಚಿನ ಅನುದಾನ ನೀಡಬೇಕೆಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.

ಜಿಲ್ಲಾ ಗ್ರಂಥಾಲಯ ಇಲಾಖೆಯ ಉಪನಿರ್ದೇಶಕ ಅಜಯಕುಮಾರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಾಂತಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ವೀರಭದ್ರ ಸಿಂಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್‌ ಮರಬನಳ್ಳಿ, ಔರಾದ(ಬಿ) ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ| ಗೌಸುದ್ದೀನ್‌ ತುಮಕೂರಕರ ಹಾಗೂ ಮತ್ತಿತರ ಸದಸ್ಯರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.