ರಾಂಪುರಹಳ್ಳಿ-ಶಾಂಪುರಹಳ್ಳಿ 8 ಸ್ಥಾನಗಳಿಗೆ ಚುನಾವಣೆ


Team Udayavani, Jun 7, 2018, 9:55 AM IST

gul-2.jpg

ವಾಡಿ: ತಮ್ಮೂರಿಗೆ ಗ್ರಾಪಂ ಸ್ಥಾನಮಾನ ಕಲ್ಪಿಸಬೇಕು ಎಂದು ಒತ್ತಾಯಿಸಿ ಚುನಾವಣೆ ಬಹಿಷ್ಕಾರ ನಿರ್ಧಾ ಮುಂದುವರಿಸಿರುವ ಚಿತ್ತಾಪುರ ತಾಲೂಕಿನ ತರ್ಕಸ್‌ಪೇಟೆ ಗ್ರಾಮಸ್ಥರು, ಗ್ರಾಪಂ ಚುನಾವಣೆ ಬಹಿಷ್ಕರಿಸುವ ಮೂಲಕ
ಸರಕಾರಕ್ಕೆ ಸವಾಲು ಹಾಕಿದ್ದಾರೆ.

ಕೊಲ್ಲೂರ ಗ್ರಾಪಂ 15 ಸ್ಥಾನಗಳಿಗೆ ಹಾಗೂ ಶಾಂಪುರಹಳ್ಳಿ ಗ್ರಾಪಂ 11 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿ ನಾಮಪತ್ರ ಸಲ್ಲಿಕೆಗೆ ಜೂ.2 ಕೊನೆ ದಿನವಾಗಿತ್ತು. ತರ್ಕಸ್‌ಪೇಟೆಯಿಂದ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ.

ರಾಂಪುರಹಳ್ಳಿ ಗ್ರಾಪಂ ಚುನಾವಣೆಯಿಂದ ತರ್ಕಸ್‌ಪೇಟೆ ಹೊರಗುಳಿದಂತಾಗಿದ್ದು, ರಾಂಪುರಹಳ್ಳಿ ಹಾಗೂ ಶಾಂಪುರಹಳ್ಳಿ ಗ್ರಾಮಗಳ 8 ಸ್ಥಾನಗಳಿಗೆ ಮಾತ್ರ ಜೂ.14 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಕರಬಸಯ್ಯ ಮಠ ತಿಳಿಸಿದ್ದಾರೆ. 

ವಿಧಾನಸಭೆ ಚುನಾವಣೆ ಬಹಿಷ್ಕರಿಸಿ ಅಸಮಾಧಾನ ಹೊರಹಾಕಿದ್ದ ಗ್ರಾಮಸ್ಥರು, ಗ್ರಾಪಂ ಚುನಾವಣೆಯಲ್ಲೂ ಬಹಿಷ್ಕಾರ ನಿರ್ಧಾರ ಮುಂದುವರಿಸಿ ಆಡಳಿತ ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗ್ರಾಮಸ್ಥರು ಹೀಗೆ ಪದೇಪದೆ ಚುನಾವಣೆ ಬಹಿಷ್ಕರಿಸುತ್ತಿದ್ದರೂ ಸಮಸ್ಯೆ ಇತ್ಯರ್ಥಪಡಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ ಎನ್ನುವ ಆರೋಪ ಕೇಳಿಬರುತ್ತಿದೆ.

ಕೊಲ್ಲೂರ ಗ್ರಾಪಂ ವಿಂಗಡಣೆಯಾಗಿ ರಾಂಪುರಹಳ್ಳಿ ಗ್ರಾಮಕ್ಕೆ ನೂತನ ಗ್ರಾಪಂ ಸ್ಥಾನಮಾನ ದಕ್ಕಿಸಿರುವುದೇ ತರ್ಕಸ್‌ಪೇಟೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಕೊಲ್ಲೂರ ಗ್ರಾಪಂ ವಿಂಗಡಿಸಿ ರಾಂಪುರಹಳ್ಳಿಗೆ ಗ್ರಾಪಂ ಸ್ಥಾನ ಕೊಡುವ ಮೂಲಕ ಶಾಂಪುರಹಳ್ಳಿ ಹಾಗೂ ತರ್ಕಸ್‌ಪೇಟೆ ಸೇರ್ಪಡೆ ಮಾಡಿರುವುದು ಅನ್ಯಾಯದಿಂದ ಕೂಡಿದೆ. ಗ್ರಾಪಂ ಸ್ಥಾನಮಾನ ಹೊಂದಲು ತರ್ಕಸ್‌ಪೇಟೆ ಎಲ್ಲಾ ರೀತಿಯಿಂದಲೂ ಅರ್ಹತೆ ಪಡೆದಿದೆ. ಈ ಕುರಿತು ಪ್ರಕರಣ
ನ್ಯಾಯಾಲಯದಲ್ಲಿ ಇರುವಾಗಲೇ ಚುನಾವಣೆ ಘೋಷಣೆ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ತರ್ಕಸ್‌ಪೇಟೆ ಗ್ರಾಮ ಕೊಲ್ಲೂರ ಗ್ರಾಪಂ ಅಧೀನದಲ್ಲಿದ್ದಾಗ ಒಟ್ಟು 6 ಜನರು ಗ್ರಾಪಂ ಸದಸ್ಯರಾಗಿ ಆಯ್ಕೆಯಾಗುತ್ತಿದ್ದರು. ಈಗ ಅದರಲ್ಲಿ ಎರಡು ಸ್ಥಾನಗಳನ್ನು ಕಡಿತಗೊಳಿಸಿ ನಾಲ್ಕು ಸ್ಥಾನಕ್ಕೆ ಇಳಿಸಲಾಗಿದೆ. ತರ್ಕಸ್‌ಪೇಟೆಯನ್ನು ರಾಂಪುರಹಳ್ಳಿಗೆ ಸೇರಿಸುವುದಕ್ಕೆ ತಕರಾರಿದೆ.

ಸರಕಾರ ನಮ್ಮೂರಿಗೆ ಗ್ರಾಪಂ ಸ್ಥಾನಮಾನ ಕಲ್ಪಿಸಲಿ ಅಥವಾ ಕೊಲ್ಲೂರು ಗ್ರಾಪಂಗೆ ಸೇರ್ಪಡೆ ಮಾಡಲಿ. ಯಾವುದೇ ಕಾರಣಕ್ಕೂ ನಾವು ರಾಂಪುರಹಳ್ಳಿಗೆ ಸೇರ್ಪಡೆಯಾಗುವುದಿಲ್ಲ. ಈಗಾಗಲೇ ವಿಧಾನಸಭೆ ಚುನಾವಣೆ ಬಹಿಷ್ಕರಿಸಿದ್ದೇವೆ. ಸದ್ಯ ನಡೆಯುತ್ತಿರುವ ಗ್ರಾಪಂ ಚುನಾವಣೆಯನ್ನು ಬಹಿಷ್ಕರಿಸಿದ್ದೇವೆ. ಗ್ರಾಮಸ್ಥರೆಲ್ಲ ಸಂಘಟಿತರಾಗಿದ್ದೇವೆ. 

ನ್ಯಾಯ ಸಿಗದಿದ್ದರೆ ಮುಂದೆ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಮುಖಂಡರಾದ ದಾನಪ್ಪಗೌಡ ನೀಲಗಲ್‌, ಶಾಂತಯ್ಯ ಗುತ್ತೇದಾರ, ಬಸವರಾಜ ದಂಡಗಿ, ಹಾಜಿಸಾಬ ರಾಜಾಪುರ ಎಚ್ಚರಿಸಿದ್ದಾರೆ. 

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.