ಮಳಖೇಡದಲ್ಲಿ ನಾಳೆಯಿಂದ ರಾಷ್ಟ್ರಕೂಟ ಉತ್ಸವ


Team Udayavani, Mar 3, 2018, 10:55 AM IST

gul-5.jpg

ಕಲಬುರಗಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕು ಮಳಖೇಡದಲ್ಲಿ ಮಾರ್ಚ್‌ 4 ಹಾಗೂ 5ರಂದು ರಾಷ್ಟ್ರಕೂಟ ಉತ್ಸವ-2018 ಏರ್ಪಡಿಸಲಾಗಿದೆ.

ರಾಷ್ಟ್ರಕೂಟ ಉತ್ಸವದ ಅಂಗವಾಗಿ ಮಾರ್ಚ್‌ 4ರಂದು ಬೆಳಗ್ಗೆ 9:00ಕ್ಕೆ ಮಳಖೇಡದ ಕೋಟೆಯೊಳಗೆ ಪೂಜೆ ನೆರವೇರಿಸಲಾಗುತ್ತದೆ. ಬೆಳಗ್ಗೆ 9:00ರಿಂದ 11:00ರ ವರೆಗೆ ರಾಷ್ಟ್ರಕೂಟ ಉತ್ಸವದ ವೇದಿಕೆಯಲ್ಲಿ 8 ಕಲಾ ತಂಡಗಳಿಂದ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.

ಅಂದು ಬೆಳಗ್ಗೆ 11:00ಕ್ಕೆ ಜ್ಞಾನಪೀಠ ಪುರಸ್ಕೃತ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ| ಚಂದ್ರಶೇಖರ ಕುಂಬಾರ ರಾಷ್ಟ್ರಕೂಟ ಉತ್ಸವ ಉದ್ಘಾಟಿಸುವರು. ಮಳಖೇಡ ಭಂಗೀಮಠದ ಗಂಗಾಧರ ಶಿವಾಚಾರ್ಯ ಮಹಾಸ್ವಾಮೀಜಿ, ಮಳಖೇಡ ದರ್ಗಾದ ಹಜರತ್‌ ಸೈಯದ್‌ ಶಹಾ ಮುಸ್ತಫಾ ಖಾದ್ರಿ, ಸೇಡಂ ಶಿವಶಂಕರ ಮಠದ ಶಿವಶಂಕರ ಶಿವಚಾರ್ಯ ಮಹಾಸ್ವಾಮೀಜಿ, ಸೇಡಂ ಕೊತ್ತಲ ಬಸವೇಶ್ವರ ದೇವಾಲಯದ ಸದಾಶಿವ ಮಹಾಸ್ವಾಮೀಜಿ, ಸೇಡಂ ಹಾಲಪ್ಪಯ್ಯ ಮಠದ ಪಂಚಾಕ್ಷರಿ ಮಹಾಸ್ವಾಮೀಜಿ ಹಾಗೂ ಮಳಖೇಡ ಉತ್ತರಾದಿಮಠದ ವ್ಯವಸ್ಥಾಪಕ ಪಂ| ವೆಂಕಣ್ಣಚಾರ್ಯರು ಸಾನ್ನಿಧ್ಯ ವಹಿಸುವರು. ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರು ವಿಶೇಷ ಆಮಂತ್ರಿತರಾಗಿ ಆಗಮಿಸುವರು.

ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅಧ್ಯಕ್ಷತೆ ವಹಿಸಿ ಕವಿರಾಜ ಮಾರ್ಗ ಪ್ರತಿಕೃತಿ ಮಂಟಪ ಉದ್ಘಾಟಿಸುವರು. ಪ್ರವಾಸೋದ್ಯಮ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಖಾತೆ ಸಚಿವ ಪ್ರಿಯಾಂಕ ಖರ್ಗೆ ಮಾನ್ಯಖೇಡದ ರಾಷ್ಟ್ರಕೂಟರು ಪುಸ್ತಕ ಬಿಡುಗಡೆ ಮಾಡುವರು. ಲೋಕಸಭಾ ಸದಸ್ಯ ಡಾ| ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯಸಭಾ ಸದಸ್ಯ ಡಾ| ಬಸವರಾಜ ಪಾಟೀಲ ಸೇಡಂ ಅವರು ಚಿತ್ರಕಲಾ ಪ್ರದರ್ಶನ ಉದ್ಘಾಟಿಸುವರು. ಅಂದು ಮಧ್ಯಾಹ್ನ 12:45ರಿಂದ 1:20ರ ವರೆಗೆ ರಾಷ್ಟ್ರಕೂಟರ ಇತಿವೃತ್ತ ಹಾಗೂ ರಾಷ್ಟ್ರಕೂಟರು ಮತ್ತು ಧಾರ್ಮಿಕ ಸಹಿಷ್ಣುತೆ ಕುರಿತು 1ನೇ ಗೋಷ್ಠಿ, 1:35ರಿಂದ 2:20ರ ವರೆಗೆ ಕವಿರಾಜಮಾರ್ಗದ ಕನ್ನಡ ಜಗತ್ತು ಮತ್ತು ಕವಿರಾಜಮಾರ್ಗದ ದೇಸೀ-ಮಾರ್ಗ ಕುರಿತು 2ನೇ ಗೋಷ್ಠಿ, 2:35ರಿಂದ 3:10ರ ವರೆಗೆ ಸಮಕಾಲೀನ ಕನ್ನಡ ಭಾಷೆ ಸವಾಲುಗಳು ಕುರಿತು ವಿಶೇಷ ಸಂವಾದ ಕಾರ್ಯಕ್ರಮ ಮತ್ತು 3ನೇ ಗೋಷ್ಠಿ, ನಂತರ ಮಧುರ ಹಾಡು ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 3:20ರಿಂದ ಸಂಜೆ 4:10ರ ವರೆಗೆ ಪದ್ಮಶ್ರೀ ಪುರಸ್ಕೃತ ಇಂಬ್ರಾಹಿಂ ಸುತಾರ ಅವರ ವಿಶೇಷ ಅನುಭಾವ ಕಾರ್ಯಕ್ರಮ ನಡೆಯಲಿದೆ. ಸಂಜೆ 4:25ರಿಂದ 5:00ರ ವರೆಗೆ ರಾಷ್ಟ್ರಕೂಟರ ಪರಂಪರೆ ಸೌಹಾರ್ದತೆ ನೆಲೆಗಳು ಹಾಗೂ ರಾಷ್ಟ್ರಕೂಟರ ಸಾಂಸ್ಕೃತಿಕ ಕೊಡುಗೆ ಕುರಿತು 4ನೇ ಗೋಷ್ಠಿ, ಹಾಗೂ ಸಂಜೆ 5:15ರಿಂದ 6:00ರ ವರೆಗೆ ರಾಷ್ಟ್ರಕೂಟರ ವಾಸ್ತುಶಿಲ್ಪ ಹಾಗೂ ರಾಷ್ಟ್ರಕೂಟರ ಶಾಸನಗಳು ಕುರಿತು 5ನೇ ಗೋಷ್ಠಿ ನಡೆಯಲಿದೆ.

ಮಾರ್ಚ್‌ 5ರಂದು ಬೆಳಗ್ಗೆ 8:30ರಿಂದ 9:30ರ ವರೆಗೆ ವಿವಿಧ ಎಂಟು ಜನ ಕಲಾವಿದರಿಂದ ವಿಶೇಷ ಗಾಯನ ಕಾರ್ಯಕ್ರಮಗಳು ನಡೆಯಲಿದೆ. ಬೆಳಗ್ಗೆ 9:30ರಿಂದ 10:15ರ ವರೆಗೆ ಕವಿರಾಜಮಾರ್ಗ ಪರಿಸರದ ಸಾಹಿತ್ಯ ಹಾಗೂ ರಾಷ್ಟ್ರಕೂಟರ ಕಾಲದ ಜಾನಪದ ಕುರಿತು 6ನೇ ಗೋಷ್ಠಿ, ಬೆಳಗ್ಗೆ 11:00ರಿಂದ ಮಧ್ಯಾಹ್ನ 12:5ರ ವರೆಗೆ ವಚನ, ದಾಸ, ತತ್ವಪದ ಮತ್ತು ಸೂಫಿಸಾಹಿತ್ಯ ಕುರಿತು 7ನೇ ಗೋಷ್ಠಿ ನಡೆಯಲಿದೆ. ಮಧ್ಯಾಹ್ನ 12:30ರಿಂದ 1:30ರ ವರೆಗೆ ಓಡಿಸಿ ನೃತ್ಯ ಕಾರ್ಯಕ್ರಮ, ಮಧ್ಯಾಹ್ನ 1:30ರಿಂದ 3:00ರ
ವರೆಗೆ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 3:00ರಿಂದ ಸಂಜೆ 4:30ರ ವರೆಗೆ ರಾಷ್ಟ್ರಕೂಟ ಉತ್ಸವದ ಸಮಾರೋಪ ಸಮಾರಂಭ ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ| ಮಲ್ಲೇಪುರಂ ಜಿ. ವೆಂಕಟೇಶ ಸಮಾರೋಪ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಯಾಗಿ ಖ್ಯಾತ ಸಾಹಿತಿ ಕುಂ. ವೀರಭದ್ರಪ್ಪ ಆಗಮಿಸಲಿದ್ದಾರೆ. ನಂತರ ಸಂಜೆ 4:30ರಿಂದ ರಾತ್ರಿ 11:30ರ ವರೆಗೆ ಕಲಬುರಗಿ ರಂಗಾಯಣದಿಂದ ಜಾನಪದ ನೃತ್ಯ, ಗಂಗಾವತಿ ಪ್ರಾಣೇಶ ಮತ್ತು ತಂಡದಿಂದ ನಗೆ ಹಬ್ಬ, ಮಾನ್ಯಖೇಟದ ಮುಕುಟ ನಾಟಕ, ಬೆಂಗಳೂರಿನ ಸುಮಾ ಅವರಿಂದ ಮಾತನಾಡಿಸುವ ಗೊಂಬೆ ಮತ್ತು ಕೊನೆಯದಾಗಿ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ ಜನ್ಯಾ ಮತ್ತು ತಂಡದಿಂದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.