ಹೊರ ರಾಜ್ಯದ ಚೀಟಿದಾರರಿಗೂ ಅಕ್ಕಿ -ಗೋಧಿ


Team Udayavani, Apr 3, 2020, 5:06 PM IST

GB-TDY-1

ಕಲಬುರಗಿ: ಕೋವಿಡ್ 19 ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಏಪ್ರಿಲ್‌ ಮತ್ತು ಮೇ ಎರಡು ತಿಂಗಳ ಪಡಿತರವನ್ನು ಒಟ್ಟಿಗೆ ವಿತರಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆರಂಭಿಸಿದ್ದು, ಸಂಕಷ್ಟದ ಸಮಯದಲ್ಲಿ ಎಲ್ಲ ಫಲಾನುಭವಿಗಳು ಲಾಭ ಪಡೆಯಲು ನಿಯಮಗಳನ್ನು ಸರಳೀಕರಣ ಮಾಡಲಾಗಿದೆ.

ಬಯೋಮೆಟ್ರಿಕ್‌ ಆಧಾರಿತ ಪಡಿತರ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದರ ಬದಲು ಆಧಾರ್‌ ಕಾರ್ಡ್‌ ಆಧಾರಿತ ಮೊಬೈಲ್‌ ಓಟಿಪಿ ಮೂಲಕ ಪಡಿತರ ವಿತರಣೆಗೆ ಕ್ರಮ ವಹಿಸಲಾಗಿದೆ. ಆಧಾರ್‌ ಕಾರ್ಡ್‌ನ ಮೊಬೈಲ್‌ ಸಂಖ್ಯೆ ನೋಂದಣಿಯಾಗದೇ ಇದ್ದರೂ ಮತ್ತೂಬ್ಬ ಸದಸ್ಯರ ಮೊಬೈಲ್‌ ಸಂಖ್ಯೆ ಬಳಸಿಕೊಡು ಓಟಿಪಿ ಪಡೆಯಬಹುದಾಗಿದೆ. ಫಲಾನುಭವಿಗಳ ಯಾವ ಸದಸ್ಯರಲ್ಲೂ ಮೊಬೈಲ್‌ ಇಲ್ಲದೇ ಹೋದ ಸಂದರ್ಭದಲ್ಲಿ ಬಯೋಮೆಟ್ರಿಕ್‌ ಆಧಾರವಾಗಿಯೇ ಪಡಿತರ ಪಡೆಯಬಹುದಾಗಿದೆ.

ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿ ಇರುವುದರಿಂದ ಕೇವಲ ಪಡಿತರ ಕಾರ್ಡ್‌ ಸಂಖ್ಯೆ ಬಳಸಿ ಸಹ ಫಲಾನುಭವಿಗಳು ಪಡಿತರದ ಲಾಭ ಪಡೆದುಕೊಳ್ಳಬಹುದಾಗಿದೆ. ಕಾರ್ಡ್‌ ಸಂಖ್ಯೆ ಬರೆದುಕೊಂಡು ವಿಶೇಷ ಪ್ರಕರಣ ಎಂದು ಭಾವಿಸಿ ಮಾನವೀಯ ಆಧಾರದ ಮೇಲೆ ಪಡಿತರ ವಿತರಿಸಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ ಎನ್ನುತ್ತಾರೆ ಅಧಿಕಾರಿಗಳು.

ಕಾರ್ಡ್‌ಗಳ ಸಂಖ್ಯೆ: ಜಿಲ್ಲೆಯಲ್ಲಿ ಒಟ್ಟಾರೆ 5,43,986 ಕಾರ್ಡ್‌ಗಳು ಇದೆ. ಬಿಪಿಎಲ್‌ ಕಾರ್ಡ್‌ಗಳು 4,83,118, ಅಂತ್ಯೋದಯ ಕಾರ್ಡ್‌ 63,455 ಹಾಗೂ ಎಪಿಎಲ್‌ ಕಾರ್ಡ್ ಗಳು 15,546 ಕಾಡ್‌ಗಳು ಇದೆ. ಅದೇ ರೀತಿ ಬಿಪಿಎಲ್‌ ಕಾರ್ಡ್‌ದಾರರಿಗಾಗಿ 1,57,661 ಕ್ವಿಂಟಲ್‌ ಅಕ್ಕಿ, ಅಂತ್ಯೋದಯ ಕಾರ್ಡ್‌ದಾರರಿಗೆ 44,418 ಕ್ವಿಂಟಲ್‌ ಅಕ್ಕಿ ಮತ್ತು ಎಪಿಎಲ್‌ ಕಾರ್ಡ್ ದಾರರಿಗೆ 22,624 ಕ್ವಿಂಟಲ್‌ ಅಕ್ಕಿ ಸಂಗ್ರಹವಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಭಾರಿ ಉಪ ನಿರ್ದೇಶಕ ಡಿ.ಎಂ.ಪಾಣಿ ಮಾಹಿತಿ ನೀಡಿದ್ದಾರೆ.

ಜಿಲ್ಲಾದ್ಯಂತ 983 ನ್ಯಾಯ ಬೆಲೆ ಅಂಗಡಿಗಳಲ್ಲಿ ಇದೆ. ಎಲ್ಲ ಕಾರ್ಡ್‌ದಾರರಿಗೆ ಏಪ್ರಿಲ್‌ ಹಾಗೂ ಮೇ ಎರಡು ತಿಂಗಳ ಪಡಿತರ ವಿತರಿಸಲಾಗುತ್ತದೆ. ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿಯೊಬ್ಬ ಸದಸ್ಯನಿಗೆ ಎರಡೂ ತಿಂಗಳು ಸೇರಿ ತಲಾ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಕಾರ್ಡ್‌ಗೆ 4 ಕೆ.ಜಿ ಗೋ ಧಿ ವಿತರಣೆಯಾಗಲಿದೆ. ಪ್ರತಿ ಅಂತ್ಯೋದಯ ಕಾರ್ಡ್‌ದಾರರಿಗೆ ಒಟ್ಟು 70 ಕೆ.ಜಿ ಅಕ್ಕಿ ಹಂಚಿಕೆ ಆಗಲಿದೆ. ಎಪಿಎಲ್‌ ಕಾರ್ಡ್‌ದಾರರಿಗೂ ಅಕ್ಕಿ ವಿತರಣೆ ಮಾಡಲಾಗುತ್ತದೆ. ಎಪಿಎಲ್‌ ಕಾರ್ಡ್‌ದಾರರ ಒಬ್ಬ ಸದಸ್ಯರಿದ್ದರೆ 5 ಕೆಜಿ ಅಕ್ಕಿ ನೀಡಲಾಗುತ್ತದೆ. ಒಬ್ಬರಿಗಿಂತ ಜಾಸ್ತಿ ಇದ್ದರೆ ಒಂದು ಕಾರ್ಡ್‌ಗೆ 10 ಕೆ.ಜಿ ಹಂಚಿಕೆ ಮಾಡಲಾಗುತ್ತದೆ. ಎಪಿಎಲ್‌ ಕಾರ್ಡ್‌ದಾರರ ಪ್ರತಿ ಕೆ.ಜಿ ಅಕ್ಕಿಗೆ 15 ರೂ. ನಿಗದಿ ಮಾಡಲಾಗಿದೆ. ಇವರು ಮುಂಚಿತವಾಗಿ ಪಡಿತರಕ್ಕಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ನ್ಯಾಯ ಬೆಲೆ ಅಂಗಡಿಯಲ್ಲಿ ಜನ ಗುಂಪು ಸೇರದಂತೆ ನಿಯಂತ್ರಿಸಲು ಬೆಳಗ್ಗೆ 50 ಕಾರ್ಡ್‌ದಾರರಿಗೆ ಹಾಗೂ ಸಂಜೆ 50 ಕಾರ್ಡ್ ದಾರರಿಗೆ ಮಾತ್ರ ಪಡಿತರ ವಿತರಿಸಲಾಗುತ್ತದೆ ಎಂದು ವಿವರಿಸಿದರು. ಬಯೋಮೆಟ್ರಿಕ್‌ ಯಂತ್ರ ಬಳಸುವಾಗ ಸಾರ್ವಜನಿಕರು ಸಹ ಕೈಯನ್ನು ಶುದ್ಧವಾಗಿ ತೊಳೆದುಕೊಂಡು ಹಾಗೂ ಯಂತ್ರದ ಸುತ್ತಮುತ್ತ ಶುಚಿತ್ವ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

ಒನ್‌ ಕಾರ್ಡ್‌, ಒನ್‌ ರೇಷನ್‌’ :  ಕೇಂದ್ರ ಸರ್ಕಾರದ “ಒನ್‌ ಕಾರ್ಡ್‌, ಒನ್‌ ರೇಷನ್‌’ ಪರಿಕಲ್ಪನೆ ಅಡಿ ಹೊರ ರಾಜ್ಯದ ಪಡಿತರ ಚೀಟಿದಾರರು ಕೂಡ ಪಡಿತರ ಪಡೆಯಬಹುದಾಗಿದೆ. ನೆರೆಯ ಮಹಾರಾಷ್ಟ್ರ, ತೆಲಂಗಾಣ ಮತ್ತು ಕೇರಳ ರಾಜ್ಯದಲ್ಲೂ “ಒನ್‌ ಕಾರ್ಡ್‌, ಒನ್‌ ರೇಷನ್‌’ ಅನುಷ್ಠಾನ ಮಾಡಿಕೊಂಡಿದ್ದು, ಆ ರಾಜ್ಯದ ಫಲಾನುಭವಿಗಳ ಸುಲಭವಾಗಿ ಪಡಿತರ ಪಡೆಯಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸದ್ಯಕ್ಕೆ ಅಕ್ಕಿ ಮಾತ್ರ ಲಭ್ಯ :  ಪ್ರತಿ ಕಾರ್ಡ್‌ದಾರರಿಗೆ ಅಕ್ಕಿ ಮತ್ತು ಗೋಧಿ ವಿತರಿಸಲಾಗುತ್ತದೆ. ಏ.1ರಿಂದಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಆರಂಭಿಸಲಾಗಿದೆ. ಆದರೆ, ನ್ಯಾಯಬೆಲೆ ಅಂಗಡಿಗಳಿಗೆ ಅಕ್ಕಿ ಮಾತ್ರ ಪೂರೈಕೆ ಆಗಿದೆ. ಗೋದಾಮುಗಳಿಂದ ಗೋಧಿ ಇನ್ನೂ ಸರಬರಾಜು ಆಗಿಲ್ಲ. ಆದ್ದರಿಂದ ಅಕ್ಕಿ ಬಯಸುವವರಿಗೆ ಮಾತ್ರವೇ ಪಡಿತರ ವಿತರಿಸಲಾಗುತ್ತದೆ.

ಕೋವಿಡ್ 19  ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಏಪ್ರಿಲ್‌ ಮತ್ತು ಮೇ ಎರಡು ತಿಂಗಳ ಅಕ್ಕಿ ಮತ್ತು ಗೋಧಿ ಪಡಿತರವನ್ನು ಒಟ್ಟಿಗೆ ವಿತರಿಸಲು ಇಲಾಖೆ ಆರಂಭಿಸಿದೆ. ಅಲ್ಲದೇ, ಇಲಾಖೆಯಿಂದ ಕಲಬುರಗಿ ನಗರದಲ್ಲಿ ಸುಮಾರು 800 ಜನ ನಿಗರ್ತಿಕರು, ಅನಾಥರು, ಅಲೆಮಾರಿಗಳಿಗೆ ಆಹಾರ ಧಾನ್ಯ ವಿತರಿಸಲಾಗುತ್ತದೆ.  –ಡಿ.ಎಂ.ಪಾಣಿ, ಪ್ರಭಾರಿ ಉಪ ನಿರ್ದೇಶಕ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.

 

ರಂಗಪ್ಪ ಗಧಾರ

ಟಾಪ್ ನ್ಯೂಸ್

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

ಫ‌ಲಿತಾಂಶಕ್ಕೆ ಮುನ್ನವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಖತಂ?

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

Weather ಬಿಸಿಲ ತಾಪ: ಪದವಿ ತರಗತಿ ಬೇಗ ಆರಂಭಿಸಲು ತೀರ್ಮಾನ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 8 ಕುಸಿತ, ಮುಸ್ಲಿಂ ಶೇ.43 ಏರಿಕೆ

1-24-thursday

Daily Horoscope: ವ್ಯವಹಾರದಲ್ಲಿ ಪ್ರಗತಿ, ಹಳೆಯ ನಿಕಟ ಪರಿಚಿತರ ಅಕಸ್ಮಾತ್‌ ಭೇಟಿ

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

ಅಮೆರಿಕದಲ್ಲೇ ಕುಳಿತು ಕನ್ನಡ, ತುಳು ಕಲಿತ ಸ್ಯಾಮ್ಯುಯಲ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.