Kalaburagi; ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದ ಕೆಇಎ ಪರೀಕ್ಷಾ ಅಕ್ರಮ ರೂವಾರಿ ಆರ್.ಡಿ.ಪಾಟೀಲ
Team Udayavani, Nov 10, 2023, 5:15 PM IST
ಕಲಬುರಗಿ: ಪ್ರಸಕ್ತ ಸಾಲಿನಲ್ಲಿ ನಡೆದ ಕೆಇಎ ಪರೀಕ್ಷೆಗಲ್ಲೂ ಬ್ಲೂಟೂತ್ ಬಳಕೆ ಮಾಡಿಸಿ ಅಕ್ರಮಕ್ಕೆ ಕಾರಣವಾಗಿದ್ದ ಆರೋಪದ ಅಡಿಯಲ್ಲಿ ಕಣ್ಮರೆಯಾಗಿದ್ದ ಆರ್.ಡಿ.ಪಾಟೀಲ ಅಲಿಯಾಸ್ ರುದ್ರಗೌಡ ಪಾಟೀಲರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯನ್ನಾದರಿಸಿ ಮಹಾರಾಷ್ಟ್ರದ ಸೊಲ್ಲಾಪುರ ಬಳಿ ಪಾಟೀಲನನ್ನು ವಶಕ್ಕೆ ಪಡೆದು ತರಲಾಗುತ್ತಿದೆ ಎಂದು ತಿಳಿದು ಬಂದಿದೆ.
ಎರಡು ದಿನಗಳ ಹಿಂದಷ್ಟೆ ನಗರದ ಅಪಾರ್ಟ್ಮೆಂಟ್ ನಲ್ಲಿ ತಂಗಿದ್ದ ಆತ ಪೊಲೀಸರ ದಾಳಿಯ ಸುಳಿವರಿತು ಅಲ್ಲಿಂದ ಪರಾರಿಯಾಗಿದ್ದ. ಆತನ ಹುಡುಕಾಟಕ್ಕೆ ನಗರ ಕಮಿಷನರೇಟ್ ಮತ್ತು ಎಸ್ಪಿ ಕಲಬುರಗಿ ಮಾರ್ಗದರ್ಶನ ದಲ್ಲಿ ನಾಲ್ಕು ತಂಡಗಳನ್ನು ರಚನೆ ಮಾಡಲಾಗಿತ್ತು.
ಶುಕ್ರವಾರ ಮಹಾರಾಷ್ಟ್ರದಿಂದ ಬಂಧಿಸಿ ಕರೆ ತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಧಿಕೃತವಾಗಿ ಬಂಧನದ ವಿಚಾರ ಪೊಲೀಸರು ಬಹಿರಂಗ ಪಡಿಸಬೇಕಿದೆ.
ಗುರುವಾರವೇ ಬಂಧನ?
ಆರ್.ಡಿ.ಪಾಟೀಲನನ್ನು ಪೊಲೀಸರು ಬುಧವಾರ ಅಥವಾ ಗುರುವಾರ ವಶಕ್ಕೆ ಪಡೆದಿರುವ ಸಾಧ್ಯತೆ ಇದೆ. ಕೆಲವು ಪ್ರಮುಖ ವಿಚಾರಣೆಯ ಬಳಿಕ ಶುಕ್ರವಾರ ಅಧಿಕೃತ ಬಂಧನ ತೋರಿಸುವ ಸಾಧ್ಯತೆ ಇತ್ತು ಎಂದು ಮೂಲಗಳು ತಿಳಿಸಿವೆ.
ಬಂಧನ ಗೊತ್ತಿಲ್ಲ
ಪಾಟೀಲ ಬಂಧನದ ಕುರಿತು ತಮ್ಮ ಬಳಿ ಯಾವುದೇ ಮಾಹಿತಿ ಇಲ್ಲ ಎಂದು ಕಲಬುರಗಿ ಎಸ್ಪಿ ಅಡೂರು ಶ್ರೀನಿವಾಸಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್