ಆಧುನಿಕ ಕಲೆ ವೇದಗಳಲ್ಲಿ ಉಲ್ಲೇಖ


Team Udayavani, Mar 10, 2019, 6:35 AM IST

gul-8.jpg

ಆಳಂದ: ಯಾವ ಕಲೆಗಳನ್ನು ಅತ್ಯಾಧುನಿಕವೆಂದು ಕರೆಯುತ್ತೇವೆಯೋ ಅವರೆಲ್ಲವನ್ನೂ ಪುರಾಣ ಹಾಗೂ ವೇದಗಳಲ್ಲಿ ಹೇಳಲಾಗಿದೆ ಎಂದು ನವದೆಹಲಿ ಇಂದಿರಾಗಾಂಧಿ ರಾಷ್ಟ್ರೀಯ ಸಾಂಸ್ಕೃತಿಕ ಮತ್ತು ಕಲಾ ಕೇಂದ್ರದ ಕಾರ್ಯದರ್ಶಿ ಪ್ರೊ| ಸಚ್ಚಿದಾನಂದ ಜೋಶಿ ಹೇಳಿದರು.

ತಾಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮಾನವ ಸಂಪನ್ಮೂಲ ಇಲಾಖೆ ಪ್ರಾಯೋಜಿತ ಹೊಸ ಭಾರತದ ಸಂಸ್ಕೃತಿಯಲ್ಲಿ ಕಲೆ ಪ್ರಭಾವ ಮತ್ತು ಅದರ ಜವಾಬ್ದಾರಿ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಭಾರತ ಸಂಸ್ಕೃತಿ, ಕಲೆ ತವರೂರಾಗಿದೆ. ನಮ್ಮ ಪುರಾಣ, ವೇದಗಳಲ್ಲಿ 64 ಕಲೆಗಳ ಬಗ್ಗೆ ನಮೂದಿಸಲಾಗಿದೆ ಎಂದರು.

ನಾವು ಕಲೆ ಬಗ್ಗೆ ಸಂಕುಚಿತ ಕಲ್ಪನೆ ಹೊಂದಿದ್ದೇವೆ. ಕಲೆ ಎಂದರೆ ಕೇವಲ ನೃತ್ಯ, ಸಂಗೀತ, ಚಿತ್ರಕಲೆ ಅಲ್ಲ. ಕಲೆ ಎನ್ನುವುದು ಜೀವನದ ಒಂದು ಅಂಗ. ನಾವು ಮಾಡುವ ಪ್ರತಿಯೊಂದು ಕ್ರಿಯೆಯಲ್ಲಿ ಕಲೆ ಅಡಗಿದೆ. ನಾವು ಮನೆಯಲ್ಲಿ ವಸ್ತುಗಳನ್ನು ಹೇಗೆ ಇಟ್ಟುಕೊಳ್ಳುತ್ತೇವೆ, ಅಡುಗೆ ಮನೆಯನ್ನು
ಹೇಗೆ ಹೊಂದಿಸಿಕೊಳ್ಳುತ್ತೇವೆ, ಎಂತಹ ಉಡುಗೆ-ತೊಡುಗೆ ಬಳಸುತ್ತೇವೆ ಎನ್ನುವುದೆಲ್ಲವೂ ಕಲೆಯೇ ಎಂದು ಹೇಳಿದರು.

ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಕಲಾವಿದ ಇದ್ದಾನೆ. ಅದನ್ನು ಹೊರತಂದಾಗ ಜೀವನ ಸುಂದರವಾಗುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರ ನಿರ್ಮಾಣವೂ ಒಂದು ಕಲೆ. ಪಕ್ಷಿಯ ಸುಮಧುರ ಹಾಡು, ಸುಂದರವಾದ ಹೂಗಳು, ಜಲಪಾತಗಳ ನರ್ತನ, ಹಸಿರಿನ ಸೊಬಗು. ಇದೊಂದು ದೇವರ ಸುಂದರ ಕಲೆಯಿಂದ ನಿರ್ಮಾಣವಾದ ವಸ್ತು. ಇದನ್ನು ಆನಂದಿಸಬೇಕೆ ಹೊರತು, ನಾಶಮಾಡಬಾರದು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ| ಎಚ್‌.ಎಂ. ಮಹೇಶ್ವರಯ್ಯ ಮಾತನಾಡಿ, ಭಾರತ ಸಾಂಸ್ಕೃತಿಕವಾಗಿ  ಮಂತವಾಗಿದ್ದು, ಪಾರಂಪರಿಕ ಮತ್ತು ಸಾಂಸ್ಕೃತಿಕ ಪ್ರವಾಸೊದ್ಯಮಕ್ಕೆ ಅವಕಾಶಗಳಿವೆ. ಅದಕ್ಕಾಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸುಮಾರು 13 ಕೋಟಿ ರೂ. ವೆಚ್ಚದಲ್ಲಿ ವಸ್ತು ಸಂಗ್ರಹಾಲಯ ಸ್ಥಾಪಿಸಲಾಗುತ್ತಿದೆ ಎಂದರು.

ಕುಲಸಚಿವ ಪ್ರೊ| ಮುಸ್ತಾಕ್‌ ಅಹಮ್ಮದ್‌ ಐ. ಪಟೇಲ್‌ ಸ್ವಾಗತಿಸಿದರು. ಡಾ| ಮಹೇಂದ್ರ ನಿರೂಪಿಸಿದರು, ಡಾ| ಗಣಪತಿ ಸಿನ್ನೂರ್‌ ವಂದಿಸಿದರು. ಸಮ ಕುಲಪತಿ ಪ್ರೊ| ಜಿ.ಆರ್‌. ನಾಯಕ ಹಾಗೂ ವಿಶ್ವವಿದ್ಯಾಲಯ ಸಿಬ್ಬಂದಿ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.