ನೀರಿಗೆ ಶಾಶ್ವತ ಪರಿಹಾರ ಕಲ್ಪಿಸಲು ಮನವಿ
Team Udayavani, Nov 30, 2018, 11:10 AM IST
ಶಹಾಬಾದ: ಬೇಸಿಗೆಯೇ ಪ್ರಾರಂಭವಾಗಿಲ್ಲ. ಈಗಲೇ ಭೀಕರ ಜಲಕ್ಷಾಮ ಆವರಿಸಿ ಕುಡಿಯುವ ಹನಿ ನೀರಿಗಾಗಿ ಗ್ರಾಮಸ್ಥರು
ಪರಿತಪಿಸುತ್ತಿದ್ದಾರೆ. ಆದ್ದರಿಂದ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ತೊನಸನಹಳ್ಳಿ (ಎಸ್) ಗ್ರಾಪಂ ಅಧ್ಯಕ್ಷ ವಿಜಯಕುಮಾರ ಮಾಣಿಕ್ ನೇತೃತ್ವದಲ್ಲಿ ಎಚ್ಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ರಾಜಶೇಖರ ಪಾಟೀಲ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಪಂ ಸದಸ್ಯ ನಾಗೇಂದ್ರ ಹುಗ್ಗಿ, ಸ್ವಾತಂತ್ರ್ಯ ಪೂರ್ವದಿಂದಲೂ ತೊನಸನಹಳ್ಳಿ
(ಎಸ್) ಗ್ರಾಮಕ್ಕೆ ಕುಡಿಯುವ ನೀರಿನ ತೊಂದರೆಯಿದೆ. ಪ್ರತಿವರ್ಷವೂ ಇಲ್ಲಿ ನೀರಿನ ಅಭಾವವೇ ದೊಡ್ಡ ಸಮಸ್ಯೆ. ಶಾಶ್ವತ ಪರಿಹಾರಕ್ಕೆ ಯಾವೊಬ್ಬ ಜನಪ್ರತಿನಿಧಿಯೂ ಗಮನಹರಿಸುತ್ತಿಲ್ಲ. ಗ್ರಾಮದ ಜನರಿಗೆ ನೀರುಣಿಸುತ್ತ ಜೀವನಕ್ಕೆ ಆಧಾರವಾಗಿರುವ ಹಾರಬಾವಿ, ಸೇದೋ ಬಾವಿ, ಇಳೆಬಾವಿ, ಹಣಮಂತ ದೇವರ ಗಿರಕಿ ಬಾವಿ ಹೀಗೆ ಎಲ್ಲ ಬಾವಿಗಳು ಬತ್ತಿ ಹೋಗುತ್ತಿವೆ ಎಂದು ತಿಳಿಸಿದರು.
ಗ್ರಾಮದಲ್ಲಿರುವ ನಾಲ್ಕು ಕೊಳವೆ ಬಾವಿಗಳು ಅಂತರ್ಜಲ ಕುಸಿತದಿಂದ ಉಪಯೋಗಕ್ಕೆ ಬಾರದಂತಾಗಿ ನೀರಿನ ಸಮಸ್ಯೆ ತಲೆದೋರಿದೆ. ಸುಮಾರು 5000 ಸಾವಿರ ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ಜನರು ಮುಖ ತೊಳೆಯಲು ಲೆಕ್ಕ ಹಾಕಬೇಕಾದ ಪರಿಸ್ಥಿತಿ ಮೂಡಿದೆ. ಇನ್ನು ಸ್ನಾನ ಮಾಡುವುದು ದೂರದ ಮಾತು. ದೇವನ ತೆಗನೂರ ಗ್ರಾಮದ ಕೊಳವೆ ಬಾವಿ ಮುಖಾಂತರ ನೀರು ಗ್ರಾಮಕ್ಕೆ ಸರಬಜಾಗುತ್ತಿತ್ತು.
ಅಲ್ಲಿಯೂ ಅಂತರ್ಜಲ ಕುಸಿತದಿಂದ ನೀರಿನ ಸಮಸ್ಯೆ ಕಾಡುತ್ತಿದೆ. ಅಲ್ಲದೇ ವಿದ್ಯುತ್ ಕಣ್ಣಾ ಮುಚ್ಚಾಲೆ ಆಟದಿಂದ ಮತ್ತಷ್ಟು ಸಮಸ್ಯೆಯ ಗಂಭೀರತೆಗೆ ಕಾರಣವಾಗಿದೆ. ಹಲವಾರು ದಶಕಗಳಿಂದ ನೀರಿನ ಸಮಸ್ಯೆಯನ್ನೇ ಹೊತ್ತುಕೊಂಡು ಬದುಕು ಸಾಗಿಸುತ್ತಿರುವ ಗ್ರಾಮದ ಜನರಿಗೆ ಶಾಶ್ವತ ಕುಡಿಯುವ ನೀರಿನ ಸೌಕರ್ಯ ಒದಗಿಸಿಕೊಡಿ ಎಂದರು.
ಎಚ್ಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ರಾಜಶೇಖರ ಪಾಟೀಲ ಮನವಿಗೆ ಸ್ಪಂದಿಸಿ ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮಕೈಗೊಳ್ಳುತ್ತೇನೆ ಎಂದು ಹೇಳಿದರು. ಗ್ರಾಪಂ ಮಾಜಿ ಅಧ್ಯಕ್ಷ ಬಸವರಾಜ ಗೊಳೇದ್, ಗ್ರಾಪಂ ಸದಸ್ಯ ಮಲ್ಲಿಕಾರ್ಜುನ ಬಂಡೇರ್, ಲಕ್ಷ್ಮಣ ಹಾಗೂ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್