ಕನ್ನಡ ಭವನ ಬಾಕಿ ಕಾಮಗಾರಿಗೆ ಅನುದಾನ ನೀಡಲು ಮನವಿ
Team Udayavani, Aug 16, 2022, 4:53 PM IST
ಕಲಬುರಗಿ: ನಗರದ ಕನ್ನಡ ಭವನದ ಸುಂದರೀಕರಣಕ್ಕಾಗಿ ಬಾಕಿ ಉಳಿದ ಕಾಮಗಾರಿಗಳನ್ನು ಮುಗಿಸಿಕೊಡಲು ಸೂಕ್ತ ಅನುದಾನ ಕೋರಿ ಜಿಲ್ಲಾ ಉಸ್ತುವಾರಿ ಸಚಿವ ಡಾ| ಮುರುಗೇಶ ನಿರಾಣಿ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಮನವಿ ಸಲ್ಲಿಸಿದರು.
ಕನ್ನಡ ಭವನದಲ್ಲಿನ ಬಾಪುಗೌಡ ದರ್ಶನಾಪುರ ರಂಗಮಂದಿರದಲ್ಲಿ ಶಾಶ್ವತ ಧ್ವನಿವರ್ಧಕ ಅಳವಡಿಸುವಿಕೆ, ಆಸನಗಳ ವ್ಯವಸ್ಥೆ, ಆವರಣದಲ್ಲಿ ಸುಂದರ ಮತ್ತು ಸ್ವತ್ಛವಾದ ಹಸಿರು ತುಂಬಿ ಉದ್ಯಾನವನವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಅದರ ಬಗ್ಗೆ ಜಿಲ್ಲೆಯ ಶಾಸಕರುಗಳಿಂದಲೂ ಕೂಡ ಅನುದಾನ ಪಡೆಯಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ತೇಗಲತಿಪ್ಪಿ ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ| ಮುರುಗೇಶ ನಿರಾಣಿ ಅವರು ಕನ್ನಡ ಭವನದ ಸುಂದರೀಕರಣಕ್ಕಾಗಿ ಬೇಕಾದ ಸವಲತ್ತು ಮಾಡಿಕೊಡುವುದಾಗಿ ಭರವಸೆ ನೀಡಿದರು.
ಎಂಎಲ್ಸಿ ಶಶೀಲ್ ಜಿ.ನಮೋಶಿ, ಶಾಸಕರಾದ ರಾಜಕುಮಾರ ಪಾಟೀಲ ತೆಲ್ಕೂರ, ಸುಭಾಷ್ ಆರ್.ಗುತ್ತೇದಾರ, ಜಿಲ್ಲಾಧಿಕಾರಿ ಯಶ್ವಂತ ಗುರುಕರ್, ಪ್ರಮುಖರಾದ ರಾಘವೇಂದ್ರ ಕುಲಕರ್ಣಿ, ಲಕ್ಷ್ಮಣ ದಸ್ತಿ, ಶಾಮರಾವ ಪ್ಯಾಟಿ, ಸಿದ್ರಾಮಪ್ಪಾ ಪಾಟೀಲ ಧಂಗಾಪುರ ಸೇರಿದಂತೆ ಅನೇಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ