ಎನ್ಈಕೆಆರ್ಟಿಸಿ ಅಭಿವೃದ್ಧಿಗೆ ಮನವಿ
Team Udayavani, Sep 16, 2017, 10:48 AM IST
ಕಲಬುರಗಿ: ಈಶಾನ್ಯ ಸಾರಿಗೆ ಸಂಸ್ಥೆ ಅಭಿವೃದ್ಧಿ ಮಾಡಲು ಹಾಗೂ ಹೈಕ ಭಾಗದ ಜನರಿಗೆ ಉತ್ತಮ ಸಾರಿಗೆ ನೀಡುವ ನಿಟ್ಟಿನಲ್ಲಿ ಸಹಕಾರ ಹಾಗೂ ಅನುದಾನ ನೀಡುವಂತೆ ಸಾರಿಗೆ ನಿಗಮದ ಅಧ್ಯಕ್ಷ ಮಹ್ಮದ ಇಲಿಯಾಸ್ ಸೇಠ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಹೈಕ ಭಾಗದಲ್ಲಿನ ಬೆಳವಣಿಗೆ ಹಾಗೂ ಅವಶ್ಯಕ ಇರುವ ಅನುದಾನದ ಕುರಿತು ಗಮನ ಸೆಳೆದರು.
ಈಶಾನ್ಯ ಸಾರಿಗೆ ಸಂಸ್ಥೆಗೆ 1250 ಹೊಸ ಬಸ್ಗಳ ಪ್ರಸ್ತಾವನೆಗೆ ಸರಕಾರ ಅನುಮೋದನೆ ನೀಡಿದೆ. ಮುಂದಿನ ದಿನಗಳಲ್ಲಿ ಖರೀದಿ ಕಾರ್ಯಾಚರಣೆ ಆರಂಭಿಸಲಾಗುವುದು. ಆದರೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಸ್ ಶೆಲ್ಟರ್ಗಳ ಕೊರತೆ ತೀವ್ರವಾಗಿದೆ. ಈ ಕುರಿತು ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾವು ಕೂಡಲೇ ಮಂಜೂರಾತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು. ಸಚಿವರಾದ ಎಚ್.ಎಂ.ರೇವಣ್ಣ,
ರಾಮಲಿಂಗಾರೆಡ್ಡಿ, ನಾಲ್ಕು ಸಾರಿಗೆ ನಿಗಮದ ಅಧ್ಯಕ್ಷರು, ಎಂಡಿಗಳು ಹಾಗೂ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ