ಕಲಬುರಗಿ ಉಪವಿಭಾಗದಲಿ ಕಾಳಗಿ ಸೇರಿಸಲು ಮನವಿ


Team Udayavani, Oct 17, 2017, 10:17 AM IST

gul-3.jpg

ಕಾಳಗಿ: ಸುಮಾರು ವರ್ಷಗಳ ಹೋರಾಟದ ಫಲವಾಗಿ ಕಾಳಗಿ ನೂತನ ತಾಲೂಕು ಕೇಂದ್ರವಾಗಿ ರಚನೆಯಾಗಿದೆ. ಅದೇ ರೀತಿ ಈ ಭಾಗದ ಜನರ ಶಾಶ್ವತ ಸಮಸ್ಯೆ ನಿವಾರಣೆಗಾಗಿ ಕಾಳಗಿ ತಾಲೂಕನ್ನು ಕಲಬುರಗಿ ಉಪವಿಭಾಗದಲ್ಲಿ ಸೇರಿಸಬೇಕು. ಇದು ಎಲ್ಲ ಜನರ ಬೇಡಿಕೆಯೂ ಆಗಿದೆ ಎಂದು ತಾಲೂಕಿನ ಎಲ್ಲ ಮಠಾಧೀಶರ ನೇತೃತ್ವದಲ್ಲಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು.

ಕಾಳಗಿ ತಾಲೂಕಿನ ಮಠಾಧೀಶರು ಹಾಗೂ ಧಾರ್ಮಿಕ ಮುಖಂಡರ ಒಕ್ಕೂಟ ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ರ್ಯಾಲಿಯಲ್ಲಿ ಮಾತನಾಡಿದ ಭರತನೂರಿನ ಶ್ರೀ ಗುರುನಂಜೇಶ್ವರ ಮಹಾಸ್ವಾಮಿಗಳು, ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಕಾಳಗಿ ತಾಲೂಕು ಕೇಂದ್ರವಾಗಿರುವುದು ಸಂತಸದಾಯಕವಾಗಿದೆ. ಆದರೆ ಈ ಭಾಗದ ರೈತರು, ಜನಸಾಮಾನ್ಯರ ಹಿತದೃಷ್ಟಿಯಿಂದ ಕಾಳಗಿಯನ್ನು ಸೇಡಂ ಅಥವಾ ಇನ್ನಾವುದೇ ಉಪವಿಭಾಗಕ್ಕೆ ಸೇರಿಸದೆ ಕಲಬುರಗಿ ಉಪವಿಭಾಗಕ್ಕೆ ಮಾತ್ರ ಸೇರಿಸಬೇಕು ಎಂದು ಆಗ್ರಹಿಸಿದರು.

ತಾಲೂಕಿನ ಕಾಳಗಿ-ಗುಂಡಗುರ್ತಿ-ಕೋಡ್ಲಿ ಹೋಬಳಿಯ ಶೇ. 80ರಷ್ಟು ಗ್ರಾಮಗಳು ಚಿತ್ತಾಪುರ ಅಥವಾ ಸೇಡಂಗೆ 80ರಿಂದ 100 ಕಿಮೀ ದೂರದಲ್ಲಿವೆ. ಆದರೆ ಈ ಎಲ್ಲ ಗ್ರಾಮಗಳು ಕಲಬುರಗಿ ಜಿಲ್ಲೆಗೆ ಕೇವಲ 10ರಿಂದ 15 ಕಿಮೀ ಅಂತರದಲ್ಲಿವೆ. ಕಾಳಗಿ ತಾಲೂಕಿನ ರೈತರು, ಜನಸಾಮಾನ್ಯರು ಸಮೀಪದ ಕಲಬುರಗಿ ಜಿಲ್ಲೆ ಮಾರುಕಟ್ಟೆ ಮೇಲೆ ಕೃಷಿ ಸಾಮಗ್ರಿ ಖರೀದಿ ಮಾರಾಟ ಹಾಗೂ ಶಿಕ್ಷಣ, ವೈದ್ಯಕೀಯ ಸೌಲಭ್ಯಗಳಿಗಾಗಿ ಅವಲಂಬಿತರಾಗಿದ್ದಾರೆ. ಅದರಿಂದ ಕಾಳಗಿಯನ್ನು ಕಲಬುರಗಿ ಉಪವಿಭಾಗದಲ್ಲಿ ಸೇರಿಸುವುದರಿಂದ ಜನರಿಗೆ ಹೆಚ್ಚಿನ ಉಪಯುಕ್ತವಾಗುತ್ತದೆ ಎಂದು ಹೇಳಿದರು.

ಶಿವಬಸವೇಶ್ವರ ಹಿರೇಮಠ ದಿಂದ ಪ್ರಾರಂಭವಾದ ಮಠಾಧೀಶರ ಬೃಹತ್‌ ಪ್ರತಿಭಟನಾ ರ್ಯಾಲಿ ಮುಖ್ಯ ಬಜಾರ ಮೂಲಕ ಸಂಚರಿಸಿ ಅಂಬೇಡ್ಕರ್‌ ವೃತ್ತದಲ್ಲಿ ತಹಶೀಲ್ದಾರಗೆ ಮನವಿ ಸಲ್ಲಿಸಿದರು. ಮುಗುಳನಾಗಾಂವ ಶ್ರೀ ಅಭಿನವ ಸಿದ್ದಲಿಂಗ ಮಹಾಸ್ವಾಮಿಗಳು, ಟೆಂಗಳಿಯ ಶ್ರೀ ಡಾ| ಶಾಂತಸೋಮನಾಥ ಶಿವಾಚಾರ್ಯರು, ಕಾಳಗಿಯ ಶ್ರೀ ಶಿವಬಸವ ಶಿವಾಚಾರ್ಯರು, ಪೇಠಶಿರೂರನ ಜೇಮಸಿಂಗ್‌ ಮಹಾರಾಜರು ಮಾತನಾಡಿದರು.

ಹೊಸಳ್ಳಿಯ ಶ್ರೀ ಸಿದ್ಧಲಿಂಗ ಶಿವಚಾರ್ಯರು, ಬಣಮಗಿ ಶ್ರೀ ರಾಚೋಟೇಶ್ವರ ಶಿವಾಚಾರ್ಯರು, ಕಬ್ಬಣಗುತ್ತಿ ಶ್ರೀ ಪರ್ವತಲಿಂಗ ಪರಮೇಶ್ವರ ಮಹಾರಾಜರು, ರಟಕಲ್‌ನ ಶ್ರೀ ಸಿದ್ದರಾಮ ಮಹಾಸ್ವಾಮಿಗಳು, ಶ್ರೀ ಮುರುಘೇಂದ್ರ ಮಹಾಸ್ವಾಮಿಗಳು, ಶ್ರೀ ರೇವಣಸಿದ್ದ ಶಿವಾಚಾರ್ಯರು, ಕೊಡ್ಲಿ ಶ್ರೀ ಬಸವಲಿಂಗ ಶಿವಾಚಾರ್ಯರು, ಪೇಠಶಿರೂರ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಡೊಣ್ಣೂರ ಶ್ರೀ ಪ್ರಶಾಂತ ದೇವರು, ಬೆಳಗುಂಪ ಶ್ರೀ ಶಿವಗಂಗಾಧರ ಸ್ವಾಮಿಗಳು, ರೈತರಾದ ಶಿವರಾಯ ಬೊಮ್ಮಣ್ಣಿ, ಸೋಮಶೇಖರ
ಮಕಪನೊರ, ಮಲ್ಲಣ್ಣ ಕುಡ್ಡಳ್ಳಿ, ಶೇಖರ ಪಾಟೀಲ, ಬಸವಾಜ ಚಿಟ್ಟಾ, ವೀರೇಶ ಪಾಟೀಲ, ಕಾಳಶೆಟ್ಟಿ ಸುಂಠಾಣ, ಕಾಳಪ್ಪ ಚಿಮ್ಮನಚೊಡ ಇದ್ದರು.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.