ಪಡಿತರದೊಂದಿಗೆ ಮಾಸ್ಕ್‌-ಸ್ಯಾನಿಟೈಸರ್‌ ವಿತರಣೆಗೆ ಆಗ್ರಹ


Team Udayavani, May 12, 2020, 2:38 PM IST

ಪಡಿತರದೊಂದಿಗೆ ಮಾಸ್‌-ಸ್ಯಾನಿಟೈಸರ್‌ ವಿತರಣೆಗೆ ಆಗ್ರಹ

ಕಲಬುರಗಿ: ವರ್ಷದ 12 ತಿಂಗಳು ಪ್ರತಿ ಕುಟುಂಬದ ತಲಾ ಸದಸ್ಯರಿಗೆ 15 ಕೆಜಿ ಪಡಿತರ ಧಾನ್ಯ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಬಿಪಿಎಲ್‌, ಎಪಿಎಲ್‌ ಎನ್ನುವ ತಾರತಮ್ಯವಿಲ್ಲದೆ ಕನಿಷ್ಠ ಒಂದು ವರ್ಷದ ಮಟ್ಟಿಗೆ ರೇಷನ್‌ ಕೊಡಬೇಕು. ಅಕ್ಕಿ, ತೊಗರಿ ಬೇಳೆ, ಎಣ್ಣೆ, ಸಕ್ಕರೆ, ಉಪ್ಪು ಸೇರಿ 16 ಸಾಮಗ್ರಿ ನೀಡಬೇಕು. ಇವುಗಳಿಗಿಂತ ಬಹುಮುಖ್ಯವಾಗಿ ಸೋಫು, ಸ್ಯಾನಿಟೈಸರ್‌, ಮಾಸ್ಕ್, ಮಹಿಳೆಯರಿಗೆ ನ್ಯಾಪ್ಕಿನ್‌ ಪ್ಯಾಡ್‌ ಒದಗಿಸಬೇಕು ಎಂದು ಆಗ್ರಹಿಸಿದರು.

ಡಾ| ಎಂ.ಎಸ್‌. ಸ್ವಾಮಿನಾಥನ ವರದಿಯಂತೆ ಉತ್ಪಾದನಾ ವೆಚ್ಚಕ್ಕೆ ಶೇ.50 ಲಾಭಾಂಶ ಸೇರಿಸಿ ಭತ್ತ, ತೊಗರಿ, ಹತ್ತಿ, ಮೆಣಸಿನಕಾಯಿ, ಗೋವಿನ ಜೋಳ, ಶೇಂಗಾ ಮತ್ತಿತರರ ಕೃಷಿ ಉತ್ಪನ್ನಗಳನ್ನು ಬೆಂಬಲಬೆಲೆಯಲ್ಲಿ ಖರೀದಿಸಬೇಕು. ತರಕಾರಿ, ಹಣ್ಣು ಇತ್ಯಾದಿ ಕೃಷಿ ಉತ್ಪನ್ನಗಳಿಗೆ ಟೋಲ್‌ ಫ್ರೀ, ಉಚಿತ ಸಾಗಾಣಿಕೆ ವೆಚ್ಚ, ಮಾರುಕಟ್ಟೆ ಶುಲ್ಕ ವಿನಾಯಿತಿ ನೀಡಬೇಕು. ಅಲ್ಲದೇ, ಸಂಕಷ್ಟದಲ್ಲಿರುವ ಎಲ್ಲ ರೈತರಿಗೆ ಕನಿಷ್ಠ 10 ಸಾವಿರ ಆರ್ಥಿಕ ನೆರವು ನೀಡಬೇಕು. ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತರಬೇಕು. ಕೃಷಿ ಸಾಲ, ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಬೇಕು. ರೇಷನ್‌, ಹಾಲು ಉತ್ಪಾದಕರು ಮತ್ತಿತರ ಸಹಕಾರ ಸಂಘಗಳ ಮೂಲಕ ರಸಗೊಬ್ಬರ, ಕೀಟನಾಶಕ ಸರಬರಾಜು ಮಾಡಬೇಕು. ಕರ್ನಾಟಕ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ನಿರ್ಧಾರ ಕೈಬಿಡಬೇಕು. ಅರಣ್ಯ ಹಕ್ಕಿನ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದು 75 ವರ್ಷಗಳ ದಾಖಲೆ ನೀಡುವ ವಿಚಾರ ಕೈಬಿಡಬೇಕು. ಎಪಿಎಂಸಿ ಕಾಯ್ದೆಗೆ ಸುಗ್ರಿವಾಜ್ಞೆ ಹೊರಡಿಸುವುದಕ್ಕೂ ತಡೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ನಂತರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಸಂಘದ ಅಧ್ಯಕ್ಷ ಶಾಂತಪ್ಪ ಪಾಟೀಲ, ಪ್ರಧಾನ ಕಾರ್ಯದರ್ಶಿ ಸಿದ್ಧಲಿಂಗ ಪಾಳಾ, ಮಲ್ಲನಗೌಡ, ಬನ್ನೆಪ್ಪ ಪೂಜಾರಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.