ಪದವಿ ಪೂರ್ವ ಕಾಲೇಜಿನಲ್ಲಿ ಪುನಶ್ಚೇತನ ಕಾರ್ಯಕ್ರಮ


Team Udayavani, Oct 30, 2017, 12:30 PM IST

bid-2.jpg

ಔರಾದ: ಪ್ರತಿಯೊಂದು ವಿಷಯ ಕುರಿತು ಆಳ ಅಧ್ಯಯನ ಮಾಡಿ ಅದನ್ನು ಇನ್ನಿತರರಿಗೆ ತಿಳಿಸುವ ಮೂಲಕ ಪುನಶ್ಚೇತನಕ್ಕೆ ನಾವು ಮುಂದಾಗಬೇಕಾಗಿದೆ ಎಂದು ಸಮಾಜ ಸೇವಕ ಶಿವಕುಮಾರ ತರನ್ನಳ್ಳಿ ಹೇಳಿದರು. ಸಂತಪುರ ಸಿದ್ದರಾಮೇಶ್ವರ ಪದವಿಪೂರ್ವ ಮಹಾ ವಿದ್ಯಾಲಯದಲ್ಲಿ ನಡೆದ ಪುನಶ್ಚೇತನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತಾಡಿದರು. ಆಧುನಿಕ ಯುಗದಲ್ಲಿ ನಾವು ಪ್ರತಿಯೊಂದು ವಿಷಯದ ಬಗ್ಗೆ ನಿತ್ಯ ನಿರಂತರ ಅಧ್ಯಯನ ಮಾಡುತ್ತೇವೆ.

ಅಧ್ಯಯನ ಮಾಡಿದ ವಿಷಯ ಕುರಿತು ಯುವಕರಿಗೆ, ವಿದ್ಯಾರ್ಥಿಗಳಿಗೆ ತಿಳಿಸಿ ಪುನಶ್ಚೇತನ ಮಾಡಲು ಮುಂದಾಗಬೇಕು. ಅಂದಾಗ ಮಾತ್ರ ಅಧ್ಯಯನ ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದರು. ವಿದ್ಯಾರ್ಥಿಗಳು ಹಾಗೂ ಯುವಕರು ತಾವು ವಿದ್ಯಾವಂತರು ಎನ್ನುವ ದರ್ಪ ತೋರಿಸದೇ ಗುರು-ಹಿರಿಯರು ಪಾಲಕರು ಮತ್ತು ಶಿಕ್ಷಕರಿಗೆ ಗೌರವ ನೀಡುವ ಸಂಪ್ರದಾಯ ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ತಾಲೂಕು ಜಾನಪದ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಂಜುಕುಮಾರ ಜುಮ್ಮಾ ಮಾತನಾಡಿ, ಭೂಮಿಯಲ್ಲಿ ಜನ್ಮ ತಾಳಿದ ಪ್ರತಿಯೊಬ್ಬರು ತಮ್ಮ ಕರ್ತವ್ಯಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಬೀರಪ್ಪ ಕಡ್ಲಿಮಟ್ಟಿ ಮಾತನಾಡಿ, ಪ್ರತಿಯೊಬ್ಬರು ತಮ್ಮಲ್ಲಿ ಅದ್ಭುತವಾದ ಶಕ್ತಿ, ಸೃಜನಶೀಲತೆ ಇದೆ ಎಂದು ನಂಬಿ ಜೀವನ ಸಾಗಿಸಬೇಕು ಎಂದು ಹೇಳಿದರು.

ಪ್ರಾಚಾರ್ಯ ನವೀಲಕುಮಾರ ಮಾತನಾಡಿ, ಶಾಲೆ ಹಾಗೂ ಕಾಲೇಜಿನಲ್ಲಿ ಬೋಧನೆ ಮಾಡಿದ ವಿಷಯವನ್ನು ವಿದ್ಯಾರ್ಥಿಗಳು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿ ಜೀವನವನ್ನು ಸುಂದರವಾಗಿ ನಿರ್ಮಿಸಿಕೊಳ್ಳಲು ಮುಂದಾಗಬೇಕು ಎಂದು ಸಲಹೆ ನೀಡಿದರು. ಗಣಪತಿ, ವಿಜಯಕುಮಾರ ಪಾಟೀಲ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿದ್ದರು. 

ಟಾಪ್ ನ್ಯೂಸ್

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.