ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ರಸ್ತೆ ತಡೆ
Team Udayavani, Oct 15, 2019, 10:22 AM IST
ಅಫಜಲಪುರ: ಅತಿ ವೃಷ್ಟಿಯಿಂದಾಗಿ ಲಕ್ಷಾಂತರ ಎಕರೆ ಬೆಳೆ ಹಾನಿಯಾಗಿದೆ. ನೂರಾರು ಸಾವು ನೋವುಗಳಾಗಿವೆ. ಮನೆ, ಆಸ್ತಿ ಕಳೆದುಕೊಂಡು ಜನ ಬೀದಿ ಪಾಲಾಗಿದ್ದಾರೆ. ಸರ್ಕಾರ ಆದಷ್ಟು ಬೇಗ ನೆರೆ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ತುಂಬಿ ಹರಿಯುತ್ತಿರುವ ಭೀಮಾ ನದಿಯಿಂದ ತಾಲೂಕಿನ ಕೆರೆ ತುಂಬಿಸಬೇಕು ಎಂದು ಒತ್ತಾಯಿಸಿ ಜೆಡಿಎಸ್ ತಾಲೂಕು ಘಟಕದಿಂದ ರಸ್ತೆ ತಡೆ ನಡೆಸಲಾಯಿತು.
ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ರಾಜು ಬಡದಾಳ, ಭೀಮಾ ನದಿ ತುಂಬಿದೆ. ಆದರೆ ಅದು ಉಪಯೋಗಕ್ಕೆ ಬಾರದಂತಾಗಿದೆ. ಇನ್ನೊಂದು ಕಡೆ ಸಮರ್ಪಕ ಮಳೆಯಾಗದೆ ಕೆರೆ ಕುಂಟೆಗಳೆಲ್ಲ ಖಾಲಿಯಾಗಿವೆ. ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಭೀಮಾ ನದಿ ನೀರನ್ನು ತಾಲೂಕಿನ ಕೆರೆಗಳಿಗೆ ತುಂಬಿಸುವ ಕೆಲಸ ಮಾಡಬೇಕು. ಅಲ್ಲದೆ ನದಿ ಪ್ರವಾಹದಿಂದ ಬೆಳೆ ಹಾಳಾಗಿದ್ದರಿಂದ ರೈತರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ತಹಶೀಲ್ದಾರ್ ಮಧುರಾಜ್ ಕೂಡಲಗಿ ಅವರಿಗೆ ಮನವಿ ಸಲ್ಲಿಸಲಾಯಿತು. ಸುನೀಲ ಹೊಸ್ಮನಿ, ಹಣಮಂತ ಬಿರಾದಾರ, ಸಂಜು ಕೋಳಿಗೇರಿ, ಗುಂಡುರಾವ್ ಬಂದರವಾಡ, ಅಸ್ಲಂ ನಗರಚಿ, ರಾಜು ಬಂದರವಾಡ, ಶರಣು ಸೂಲೇಕರ, ವಾಸುದೇವ ದೊಡ್ಮನಿ, ಶಿವು ಮಲ್ಲಾಬಾದ, ಪ್ರಕಾಶ ಕಲ್ಯಾಣಿ, ಕುಮಾರಸ್ವಾಮಿಮಠ, ಹರಿಸಿಂಗ ರಾಠೊಡ, ರಮೇಶ ರಾಠೊಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?