ಕಲಬುರಗಿಯಲ್ಲಿ ರಸ್ತೆ ಒತ್ತುವರಿ ಕಾರ್ಯಾಚರಣೆ: ಮಾತಿನ ಚಕಮಕಿ
Team Udayavani, May 19, 2022, 2:48 PM IST
ಕಲಬುರಗಿ: ನಗರದಲ್ಲಿ ಇತ್ತೀಚೆಗೆ ರಸ್ತೆ, ಫುಟಪಾತ್ ಅತಿಕ್ರಮಣ ಹಾಗೂ ಒತ್ತುವರಿ ಹೆಚ್ಚಾಗುತ್ತಿರುವುದನ್ನು ಮನಗಂಡಿರುವ ಪಾಲಿಕೆ ಅಧಿಕಾರಿಗಳು ಈಗ ತೆರವಿಗೆ ಮುಂದಾಗಿದ್ದಾರೆ.
ನಗರದ ರಾಮಮಂದಿರ ವೃತ್ತದ ಬಳಿ ರಸ್ತೆ ಅತಿಕ್ರಮಿಸಿದ್ದ ಗೂಡಂಗಡಿಗಳನ್ನು ಬುಲ್ಡೋಜರ್ದಿಂದ ತೆರವುಗೊಳಿಸಲಾಯಿತು.
ಈ ಮೊದಲು ನೊಟೀಸ್ ನೀಡಿ ತೆರವುಗೊಳಿಸಲಾಗಿದ್ದರೂ ಮತ್ತೆ ಗೂಡಂಗಡಿ ಹಾಕಿದ್ದರಿಂದ ಪಾಲಿಕೆ ಅಧಿಕಾರಿಗಳು ಪೊಲೀಸ್ ಸಮ್ಮುಖದಲ್ಲಿ ತೆರವುಗೊಳಿಸಿದರು.
ಈ ಸಂದರ್ಭದಲ್ಲಿ ವ್ಯಾಪಾರಿಗಳು ಹಾಗೂ ಪಾಲಿಕೆ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ವ್ಯಾಪಾರಿಗಳು ಇನ್ನೊಂದಿಷ್ಟು ಸಮಯ ಕೊಡಬೇಕಿತ್ತು ಎಂದು ಹೇಳಿದರು.
ಈ ಹಿಂದೆ ತೆರವುಗೊಳಿಸಲಾಗಿ ಮತ್ತೆ ಒಳಚರಂಡಿ ಹಾಗೂ ರಸ್ತೆ ಮೇಲೆ ಗೂಡಂಗಡಿ ಹಾಕಿರುವುದು ಸಂಚಾರಕ್ಕೆ ತೊಂದರೆಯಾಗುತ್ತಿದೆ. ಸಮಯ ನೀಡುವ ಪ್ರಮೆಯ ಎದುರಾಗುವುದಿಲ್ಲ ಎಂದು ಪಾಲಿಕೆ ಅಧಿಕಾರಿಗಳು ಸಮಜಾಯಿಷಿ ನೀಡಿದರು.
ಕಾರ್ಯಾಚರಣೆ ಮುಂದುವರಿಕೆ: ರಾಮ ಮಂದಿರವಲ್ಲದೇ ಇತರ ರಸ್ತೆಗಳಲ್ಲೂ ರಸ್ತೆ ಹಾಗೂ ಒಳಚರಂಡಿ ಅತಿಕ್ರಮಣ ಆಗಿರುವ ತೆರವು ಕಾರ್ಯಾಚರಣೆ ಪಾಲಿಕೆ ಆಯುಕ್ತರ ನಿರ್ದೇಶನ ಮೇರೆಗೆ ಕೈಗೊಳ್ಳಲಾಗಿದೆ. ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಇಂಜಿನಿಯರುಗಳಾದ ಸುಧೀರ ಮೇತ್ರೆ ಹಾಗೂ ಪ್ರಭಾಕರ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
PU Exam ನಕಲು ಮಾಡಲು ಸಹಕಾರ ನೀಡಿಲ್ಲವೆಂದು ಪೇದೆ ಮೇಲೆಯೇ ಹಲ್ಲೆ!
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ