ರಸ್ತೆಗೆ ತಗ್ಗು-ಗುಂಡಿ ತೋಡಿ ಮುಳ್ಳು ಬಡಿತ!


Team Udayavani, Jul 4, 2022, 12:00 PM IST

7road

ಕಾಳಗಿ: ತಾಲೂಕಿನ ಕೋಡ್ಲಿ ಗ್ರಾಪಂ ವ್ಯಾಪ್ತಿಯ ಅಲ್ಲಾಪೂರ ಗ್ರಾಮ ಸಂಪರ್ಕಿಸುವ ರಸ್ತೆಯನ್ನು ನಿರ್ಮಾಣವಾಗಿ ಒಂದೇ ವಾರದಲ್ಲಿ ಜಮೀನಿನ ಮಾಲೀಕರು ಎರಡು ಮೂರು ಕಡೆ ತಗ್ಗು-ಗುಂಡಿ ತೋಡಿ, ಮುಳ್ಳು ಬಡಿದು ರಸ್ತೆ ಬಂದ್‌ ಮಾಡಿದ್ದಾರೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.

ಅಲ್ಲಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಇದಾಗಿದೆ. ಕಳೆದ ನಾಲ್ಕೈದು ವರ್ಷಗಳಿಂದ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಹೊಲದಲ್ಲಿ ಬರುತ್ತದೆ ಎಂದು ಜಮೀನಿನ ಮಾಲೀಕರು ರಸ್ತೆ ಬಂದ್‌ ಮಾಡಿದ್ದರು. ಇದರಿಂದ ಶಾಲಾ ಮಕ್ಕಳು, ಅನಾರೋಗ್ಯ ಪೀಡಿತರು, ಗ್ರಾಮಸ್ಥರು ಬೇರೆ ಗ್ರಾಮಗಳು, ಶಾಲೆ ಹಾಗೂ ಆಸ್ಪತ್ರೆಗೆ ಹೋಗಬೇಕಾದರೆ ಸುಮಾರು ಎಂಟು ಕಿ.ಮೀ ದೂರದ ಕೋಡ್ಲಿ ಗ್ರಾಮದವರೆಗೆ ನಡೆದುಕೊಂಡೆ ಹೋಗಬೇಕಿತ್ತು. ಆದರೆ ಮಳೆಗಾಲ ಪ್ರಾರಂಭದಲ್ಲಿ ಜೋರಾದ ಮಳೆಗೆ ಹಳ್ಳ ತುಂಬಿ ಹರಿದು ಕಾಲು ದಾರಿಯು ಮುಳುಗಿದ್ದಾಗ ಶಾಲಾ ಮಕ್ಕಳು ಹಾಗೂ ಗ್ರಾಮಸ್ಥರು ಹಗ್ಗದ ಸಹಾಯದಿಂದ ಅಪಾಯ ಲೆಕ್ಕಿಸದೇ ಹಳ್ಳ ದಾಟಿ ಮನೆಗೆ ತಲುಪಿದ್ದೇವೆ ಎಂದು ಗ್ರಾಮಸ್ಥರು ತಮ್ಮ ಅಳಲು ತೊಡಿಕೊಂಡರು.

ರಸ್ತೆ ಸಮಸ್ಯೆ ಬಗೆಹರಿಸುವಂತೆ ಅಲ್ಲಾಪೂರ ಗ್ರಾಮಸ್ಥರು ಲಾರಿ ಕಟ್ಟಿಕೊಂಡು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಮಾಡಿಕೊಂಡಿದ್ದರು. ಜಿಲ್ಲಾಧಿಕಾರಿ ಯಶವಂತ ಗುರುಕರ್‌ ಅವರು ಕಳೆದ ಹದನೈದು ದಿನಗಳ ಹಿಂದೆ ಅಲ್ಲಾಪೂರ ಗ್ರಾಮಕ್ಕೆ ಕಲಬುರಗಿ ಸಂಸದ ಡಾ| ಉಮೇಶ ಜಾಧವ, ಚಿಂಚೋಳಿ ಶಾಸಕ ಡಾ| ಅವಿನಾಶ ಜಾಧವ ನೇತೃತ್ವದಲ್ಲಿ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆ ಆಲಿಸಿದ್ದರು.

“ಸಾರ್ವಜನಿಕ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸುವ ಹಕ್ಕು ಯಾರಿಗೂ ಇಲ್ಲ, ಭೂಸ್ವಾಧೀನ ಕಾಯ್ದೆಯಡಿ ರಸ್ತೆ ನಿರ್ಮಾಕ್ಕೆ ಭೂಮಿ ವಶಪಡಿಸಿಕೊಳ್ಳಲಾಗುತ್ತದೆ. ಇದಕ್ಕೆ ನಿಮ್ಮ ಒಪ್ಪಿಗೆ ಬೇಕಾಗುವುದಿಲ್ಲ’ ಎಂದು ಜಮೀನಿನ ಮಾಲೀಕರಿಗೆ ಎಚ್ಚರಿಕೆ ನೀಡಿದ್ದರು. ಅಲ್ಲದೇ ರಸ್ತೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿ, ಕಾಮಗಾರಿ ಪೂರ್ಣಗೊಳಿಸುವವರೆಗೂ ಸುಮಾರು 100ಕ್ಕೂ ಹೆಚ್ಚು ಪೊಲೀಸರು ಬಂದೋಬಸ್ತ್ ಒದಗಿಸಿದ್ದರು.

ರಸ್ತೆ ನಿರ್ಮಾಣ ಮಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ರಸ್ತೆ ಸಮಸ್ಯೆಯಿಂದ ಮುಕ್ತಿ ಸಿಗುತ್ತೆ ಎಂದು ಖುಷಿಯಲ್ಲಿದ್ದರು. ಆದರೆ ರಸ್ತೆ ನಿರ್ಮಾಣವಾದ ವಾರದಲ್ಲೇ ಜಿಲ್ಲಾಧಿಕಾರಿ ಆದೇಶಕ್ಕೂ ಕಿವಿಗೊಡದೇ ಜಮೀನಿನ ಮಾಲೀಕರು ನಿರ್ಮಾಣವಾದ ರಸ್ತೆಯನ್ನೇ ಅಗೆದು ಮುಳ್ಳು ಬಡಿದಿರುವುದರಿಂದ ಮತ್ತೆ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಅದಲ್ಲದೇ ಕೋಡ್ಲಿ ಗ್ರಾಪಂನಿಂದ ಗ್ರಾಮಕ್ಕೆ ಕುಡಿಯುವ ನೀರು ಪೂರೈಸುವ ಬೋರ್‌ ವೆಲ್‌ ಜಮೀನಿನಲ್ಲಿವೆ ಎಂದು ನೀರಿನ ಮೋಟಾರ್‌ ಕೀಲಿ ಹಾಕಿದ್ದಾರೆ. ಇದರಿಂದ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ರಸ್ತೆ ಸಮಸ್ಯೆಯುಂಟಾಗಿದೆ ಎಂದು ಅಲ್ಲಾಪುರ ಗ್ರಾಪಂ ಸದಸ್ಯ ಸಿದ್ದಯ್ಯ ಸ್ವಾಮಿ ಆರೋಪಿಸಿದ್ದಾರೆ.

ಮಳೆಗಾಲ ಪ್ರಾರಂಭವಾಗಿದ್ದರಿಂದ ಜೋರು ಮಳೆ ಸುರಿದರೆ ಶಾಲೆ ಮಕ್ಕಳು, ಗ್ರಾಮಸ್ಥರು ಬೇರೆ ಗ್ರಾಮಗಳಿಗೆ ಹೋಗಬೇಕಾದರೆ ಹರಿಯುವ ಹಳ್ಳವನ್ನು ಲೆಕ್ಕಿಸದೆ ಜೀವಾಪಾಯದಲ್ಲಿ ದಾಟಿ ಹೋಗಬೇಕಾಗುತ್ತದೆ. ಅಪಾಯ ಸಂಭವಿಸುವ ಮೊದಲೇ ಜಿಲ್ಲಾಧಿಕಾರಿಗಳು ಗಮನಹರಿಸಿ ಶಾಶ್ವತ ಪರಿಹಾರ ಕಲ್ಪಿಸಿ ಕೊಡುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ರಸ್ತೆ ನಿರ್ಮಾಣವಾದ ವಾರದಲ್ಲೇ ಜಮೀನಿನ ಮಾಲೀಕರು ರಸ್ತೆ ಅಗೆದು ಬಂದ್‌ ಮಾಡಿದ್ದಾರೆ. ಅಲ್ಲದೇ ಗ್ರಾಪಂ ಕುಡಿಯುವ ನೀರಿನ ಬೋರ್‌ವೆಲ್‌ ಬೀಗ ಹಾಕಿದ್ದರಿಂದ ಅಲ್ಲಾಪುರ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಆಗಿದೆ. ಶೀಘ್ರವೇ ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗುತ್ತದೆ. -ಶ್ರೀಕಾಂತ ತಾಂಡೂರ. ಅಧ್ಯಕ್ಷರು ಗ್ರಾಪಂ ಕೋಡ್ಲಿ.

ಅಲ್ಲಾಪೂರ ಗ್ರಾಮಕ್ಕೆ ಸಂಪರ್ಕಿಸುವ ಏಕೈಕ ರಸ್ತೆಯನ್ನು ಅಗೆದು ಬಂದ್‌ ಮಾಡಿದ್ದರಿಂದ ಶಾಲಾ ಮಕ್ಕಳು, ಜನರು ಬೇರೆ ಗ್ರಾಮಗಳಿಗೆ ನಡೆದುಕೊಂಡೆ ಹೋಗುವಂತಾಗಿದೆ. ಜಿಲ್ಲಾಧಿಕಾರಿಗಳು ಗಮನಹರಿಸಿ ಶಾಶ್ವತ ಪರಿಹಾರ ನೀಡಬೇಕು. -ಸಿದ್ದಯ್ಯ ಸ್ವಾಮಿ, ಗ್ರಾಪಂ ಸದಸ್ಯ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.