ಜೇವರ್ಗಿ ತಾಲೂಕಿನಲ್ಲಿ 1500 ಕೋಟಿ ರೂ. ಅಭಿವೃದ್ಧಿ ಕಾಮಗಾರಿ


Team Udayavani, Feb 12, 2018, 10:11 AM IST

gul-2.jpg

ಕಲಬುರಗಿ: ಜೇವರ್ಗಿ ತಾಲೂಕಿನಲ್ಲಿ ಪ್ರಮುಖವಾಗಿ ನಾಲ್ಕು ಸೇತುವೆಗಳ ನಿರ್ಮಾಣದ ಜತೆಗೆ ಸುಮಾರು 1500 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದು ಜೇವರ್ಗಿ ಶಾಸಕ ಡಾ| ಅಜಯಸಿಂಗ್‌ ತಿಳಿಸಿದರು. ನಗರದಲ್ಲಿ ರವಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮುಖವಾಗಿ ಕೋನಹಿಪ್ಪರಗಾ-ಸರಡಗಿ ಸೇತುವೆ ಪೂರ್ಣಗೊಂಡಿರುವುದು ಹಾಗೂ ನರಿಬೋಳ ಚಾಮನಾಳ ಸೇತುವೆಗೆ ಚಾಲನೆ ನೀಡಿರುವುದು ಅಭಿವೃದ್ಧಿಗೆ ಹಿಡಿದ ಕನ್ನಡಿಯಾಗಿದೆ. ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ತಿಳಿಸಿದರು.

ಜೇವರ್ಗಿಯಲ್ಲಿ ಈಗಾಗಲೇ ಅತ್ಯಂತ ಎತ್ತರದ ರಾಷ್ಟ್ರಧ್ವಜ ಸ್ಥಂಭ ನಿರ್ಮಿಸಲಾಗಿದೆ. ಯಡ್ರಾಮಿ ಹೊಸ ತಾಲೂಕು ರಚನೆ ಪ್ರಗತಿಯಲ್ಲಿದೆ. 10 ಕೋಟಿ ರೂ. ಒದಗಿಸಲಾಗಿದೆ. ಜೇವರ್ಗಿ ಪಟ್ಟಣದಲ್ಲಿ 2.94 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್‌ ಭವನದ ನಿರ್ಮಾಣ ಕೈಗೊಳ್ಳಲಾಗಿದೆ. ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ತಿಂಗಳಲ್ಲಿ ಕಾಮಗಾರಿ  ರ್ಣಗೊಳ್ಳಲಿದೆ ಎಂದು ತಿಳಿಸಿದರು. ಜೇವರ್ಗಿ ಪಟ್ಟಣಕ್ಕೆ ಸೋಮವಾರ ಮಧ್ಯಾಹ್ನ 3:20ಕ್ಕೆ ರಾಹುಲ್‌ಗಾಂಧಿ ಅವರು ಆಗಮಿಸುವರು. ಒಂದು ತಾಸು ಅಲ್ಲಿಯೇ ಕಳೆದು ಬೃಹತ್‌ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಸುಮಾರು 40, 000 ಜನರು ಭಾಗವಹಿಸುವ ನಿರೀಕ್ಷೆ ಇದೆ. ಜೇವರ್ಗಿ ಪಟ್ಟಣದ ರಸ್ತೆ ವಿಭಜಕದಲ್ಲಿ ಸಿದ್ಧಪಡಿಸಿದ ಮರಗಳನ್ನು ಧರ್ಮಸಿಂಗ್‌ ಫೌಂಡೇಷನ್‌ನಡಿ ಹಚ್ಚಲಾಗಿದೆ. 

ಇದು ಸರ್ಕಾರದಿಂದ ಹಾಗೂ ನನ್ನ ಶಾಸಕರ ಅನುದಾನದಿಂದ ಆಗಲಿ ಅಲ್ಲ ಎಂದು ಸ್ಪಷ್ಠಪಡಿಸಿದರು. ಜೇವರ್ಗಿ ಪಟ್ಟಣವು ಮರಗಳಿಂದಾಗಿ ಸಿಂಗಾರಗೊಂಡಿದೆ. ಇಂತಹ ಗಿಡಗಳನ್ನು ನಾನು ಬೆಂಗಳೂರಿನ ವಿಧಾನಸೌಧದ ಮುಂದೆ ನೋಡಿದ್ದೆ. ಅದೇ ರೀತಿಯ ಗಿಡಗಳನ್ನು ಇಲ್ಲಿ ವೈಯಕ್ತಿಕವಾಗಿ ಬೆಳೆಸಿದ್ದೇನೆ. ಅವುಗಳ ನಿರ್ವಹಣೆಯನ್ನೂ ಫೌಂಡೇಶನ್‌ ಮಾಡಲಿದೆ.  ವಿಧಾನಸೌಧದ ಮುಂದಿನ ಗಿಡಗಳಿಗೆ ಇರುವ ಲೈಟಿಂಗ್‌ ವ್ಯವಸ್ಥೆಯನ್ನೂ ರಸ್ತೆ ವಿಭಜಕದ ಗಿಡಗಳಿಗೂ ಮಾಡಲಾಗುವುದು. ಈ ಕುರಿತಾದ 1.8 ಕೋಟಿ ರೂ. ಟೆಂಡರ್‌ ಪ್ರಕ್ರಿಯೆ ಆರಂಭಗೊಂಡಿದೆ. ಯಡ್ರಾಮಿಯಲ್ಲಿಯೂ ಇಂತಹ ಗಿಡಗಳನ್ನು ಬೆಳೆಸಲಾಗಿದೆ. ಆರಂಭದಲ್ಲಿ ಅವು ಒಣಗಿದಂತೆ ಕಂಡು ಬಂದರು ನಂತರ ಅವು ಚಿಗುರೊಡೆಯುತ್ತವೆ ಎಂದು ಅವರು ತಿಳಿಸಿದರು. ಮಾಜಿ ಪ್ರಧಾನಿ ದಿ| ಇಂದಿರಾಗಾಂಧಿ ಅವರು ಕಳೆದ 40 ವರ್ಷಗಳ ಹಿಂದೆ ಭೇಟಿ ನೀಡಿದ ಜಿಲ್ಲೆಯ ಜೇವರ್ಗಿ ಪಟ್ಟಣಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಅವರು ಸೋಮವಾರ ಆಗಮಿಸುತ್ತಿರುವುದು ಕ್ಷೇತ್ರದ ಸೌಭಾಗ್ಯವಾಗಿದೆ ಎಂದು ಶಾಸಕ ಡಾ| ಅಜಯಸಿಂಗ್‌ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ, ಪ್ರಚಾರ ಸಮಿತಿ ಅಧ್ಯಕ್ಷ ಜಗನ್ನಾಥ ಗೋ ಧಿ, ಮುಖಂಡರಾದ ಭೀಮರಾವ ಟಿ.ಟಿ. ದೇವೆಂದ್ರಪ್ಪ ಮರತೂರ, ಶೌಕತ್‌ ಅಲಿ ಆಲೂರ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.