ಮೃತ ಕಾರ್ಮಿಕರಿಗೆ 28 ಲಕ್ಷ ರೂ. ಪರಿಹಾರ ನೀಡಿ
Team Udayavani, Aug 7, 2018, 11:18 AM IST
ಸೇಡಂ: ತುತ್ತಿನ ಚೀಲ ತುಂಬಿಸಿಕೊಳ್ಳಲು ದೂರದ ರಾಜ್ಯಗಳಿಂದ ಶ್ರೀ ಸಿಮೆಂಟ್ ಕಾರ್ಖಾನೆಗೆ ಬಂದ ಕಾರ್ಮಿಕರು ಯಾರಧ್ದೋ ತಪ್ಪಿನಿಂದ ಜೀವ ಕಳೆದುಕೊಳ್ಳುವಂತಾಗಿದ್ದು, ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ 28 ಲಕ್ಷ ರೂ. ಪರಿಹಾರ ನೀಡಿ ಎಂದು ಮಾಜಿ ಕಾರ್ಮಿಕ ಸಚಿವ ಎಸ್.ಕೆ. ಕಾಂತಾ, ರೈತ ಮುಖಂಡ ಮಾರುತಿ ಮಾನ್ಪಡೆ ಆಗ್ರಹಿಸಿದ್ದಾರೆ.
ತಾಲೂಕಿನ ಕೋಡ್ಲಾ-ಬೆನಕನಹಳ್ಳಿ ಬಳಿಯ ಶ್ರೀ ಸಿಮೆಂಟ್ ಕಾರ್ಖಾನೆ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾರ್ಮಿಕರೊಂದಿಗೆ ಸಮಾಲೋಚನೆ ನಡೆಸಿದರು. ನಂತರ ಕಾರ್ಖಾನೆ ಅಧಿಕಾರಿಗಳು ಮತ್ತು ಪೊಲೀಸರ ನಡೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ನಂತರ ಕಾರ್ಮಿಕರ ಕಾಲೋನಿಯಲ್ಲಿದ್ದ ಕಾರ್ಮಿಕರೊಂದಿಗೆ ಮಾತನಾಡಿದ ಅವರು, ಘಟನೆ ಕುರಿತು ಮಾಹಿತಿ
ಪಡೆದರು. ಈ ವೇಳೆ ಕಾರ್ಮಿಕರು, ಕೆಲಸ ನಿರ್ವಹಿಸುವ ಜಾಗದಲ್ಲಿ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಒದಗಿಸಿಲ್ಲ.
ಇನ್ನೊಂದೆ ಡೆ ಕಾಮಗಾರಿ ಮಾಡುವ ವೇಳೆ ಎಚ್ಚರವಹಿಸಿಲ್ಲ. ಘಟನೆ ಸಂಭವಿಸಿದ ನಂತರ ಕಾರ್ಮಿಕರನ್ನು ಪೊಲೀಸ್ ಅಧಿಕಾರಿಗಳು ಹೀನಾಯವಾಗಿ ನೋಡಿದ್ದಾರೆ ಎಂದು ಆರೋಪಿಸಿದರು.
ಮಾಜಿ ಕಾರ್ಮಿಕ ಖಾತೆ ಸಚಿವ ಎಸ್.ಕೆ. ಕಾಂತಾ ಸಿಪಿಐ ಪಂಚಾಕ್ಷರಿ ಸಾಲಿಮಠ ಅವರಿಂದ ಮಾಹಿತಿ ಪಡೆದು, ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ