ಆರೆಸ್ಸೆಸ್‌ ಕೈಯಲ್ಲಿ ಕೇಂದ್ರದ ಆಡಳಿತ: ರಾಹುಲ್‌


Team Udayavani, Feb 14, 2018, 8:37 AM IST

m-14.jpg

ಕಲಬುರಗಿ: ಕೇಂದ್ರ ಸರ್ಕಾರದ ಯಾವುದೇ ಯೋಜನೆ ಹಾಗೂ ಕಾರ್ಯಕ್ರಮ ಜಾರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವೇ ಪ್ರಮುಖವಾಗಿ ಪಾತ್ರ ನಿರ್ವಹಿಸುತ್ತಿದೆ ಎಂದು ಎಐಸಿಸಿಐ ಅಧ್ಯಕ್ಷ ರಾಹುಲ್‌ ಗಾಂಧಿ ಬಲವಾಗಿ ಆರೋಪಿಸಿದರು.

ನಗರದ ಎಚ್‌ಕೆಇ ಸಂಸ್ಥೆ ಸಭಾಂಗಣದಲ್ಲಿ ನವ ಉದ್ಯಮಿಗಳು, ವಿದ್ಯಾರ್ಥಿಗಳು ಹಾಗೂ ಗಣ್ಯರೊಂದಿಗೆ ಮಂಗಳವಾರ ಸಂವಾದ ನಡೆಸಿದ ಅವರು, ಯೋಜನೆ ಹಾಗೂ ಕಾರ್ಯಕ್ರಮ ಜಾರಿಯಲ್ಲದೇ ಕೇಂದ್ರ ಸರ್ಕಾರದ ಪ್ರತಿ ಇಲಾಖೆಗೂ ಆರ್‌ಎಸ್‌ಎಸ್‌ ಮಾರ್ಗದರ್ಶಕರೂ ಇದ್ದಾರೆ. ಇದೆಲ್ಲವನ್ನು ನವ ಉದ್ಯಮಿಗಳು ಅರ್ಥ ಮಾಡಿಕೊಳ್ಳಬೇಕು ಎಂದರು.

ನೋಟು ಬ್ಯಾನ್‌ ಮಾಡುವ ಸಂಬಂಧ ಆರ್‌ಬಿಐ ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳು ಎಲ್ಲೂ ಹೇಳಿಲ್ಲ. ಅಷ್ಟೇ ಏಕೆ ಹಣಕಾಸು ಖಾತೆ ಸಚಿವ ಅರುಣ್‌ ಜೇಟ್ಲಿ ಸಹ ಸಲಹೆ ನೀಡಿಲ್ಲ ಎಂದಾದ ಮೇಲೆ ರಾತೋರಾತ್ರಿ ಪ್ರಧಾನ ಮಂತ್ರಿ ಮೋದಿ ಅವರು ಆರ್‌ಎಸ್‌ಎಸ್‌ ವ್ಯಕ್ತಿಯೊಬ್ಬರು ನೀಡಿದ್ದ ಸಲಹೆ ಅನುಷ್ಠಾನಗೊಳಿಸಿದರು. ಇದರಿಂದ ಕಾಳಧನಿಕರ ಬಳಿ ಇದ್ದ ಕಪ್ಪು ಹಣ ಬಿಳಿಯಾಗಿಸಿದರು. ಜಿಎಸ್‌ಟಿ ಜಾರಿ ಮುನ್ನ ಪ್ರಾಯೋಗಿಕವಾಗಿ ಪರೀಕ್ಷೆ ಸಹ ನಡೆಸಲಿಲ್ಲ. ಒಂದು ತಂತ್ರಾಂಶ ಸಹ ಕೇಂದ್ರದ ಬಳಿ ಇರ ಲಿಲ್ಲ. ಅದೇ ರೀತಿ ವೈದ್ಯಕೀಯ ಕ್ಷೇತ್ರದಲ್ಲೂ ಹೊಸ ನೀತಿಯೊಂದನ್ನು ಚರ್ಚೆ- ಅಭಿಪ್ರಾಯ ಪಡೆಯದೇ ಜಾರಿಗೆ ಮುಂದಾಗುತ್ತಿದೆ. ಒಟ್ಟಾರೆ ಇದೇ ಮೋದಿ ಅವರ ಆರ್ಥಿಕ ಸುಧಾರಣೆ ಎಂದು ಜರಿದರು.

ಜಿಎಸ್‌ಟಿ ಸರಳೀಕರಣ: ಜಿಎಸ್‌ಟಿ ಸರಳವಾಗಿದೆಯೋ ಇಲ್ಲ ಕ್ಲಿಷ್ಟಕರವಾಗಿದೆ ಎಂದು ರಾಹುಲ್‌ ಗಾಂಧಿ ಅವರೇ ಸಂವಾದದಲ್ಲಿ ಪಾಲ್ಗೊಂಡವರನ್ನು ಪ್ರಶ್ನಿಸಿದರು. ಎಲ್ಲರೂ ಕ್ಲಿಷ್ಟಕರವಾಗಿದೆ ಎಂದು ಘೋಷಣೆ ಕೂಗಿ ಹೇಳಿದರು. ಇದಕ್ಕೆ ರಾಹುಲ್‌ ಗಾಂಧಿ, ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಜಿಎಸ್‌ಟಿಯಲ್ಲಿರುವ ಗೊಂದಲ ನಿವಾರಿಸಿ ಸರಳೀಕರಣಗೊಳಿಸಲಾಗುವುದು ಎಂದರು. ಲೋಕಸಭೆಯಲ್ಲಿನ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿಐ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ, ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಇದ್ದರು. ಐಟಿಬಿಟಿ ಖಾತೆ ಸಚಿವ ಪ್ರಿಯಾಂಕ್‌ ಖರ್ಗೆ ಸಂವಾದ ನಡೆಸಿಕೊಟ್ಟರು.

ಮದುವೆ ಕುರಿತುತೂರಿ ಬಂದ ಪ್ರಶ್ನೆ
ಸಂವಾದದಲ್ಲಿ ಮೊದಲೇ ನಿಗದಿಯಾಗಿದ್ದ 7 ಪ್ರಶ್ನೆಗಳಿಗೆ ರಾಹುಲ್‌ ತಕ್ಕಮಟ್ಟಿಗೆ ಉತ್ತರ ನೀಡಿದರು. ಅಲ್ಲದೇ ಮಹಿಳಾ ನ್ಯಾಯವಾದಿಯೊಬ್ಬರು ಸಲಹೆ ನೀಡಿ ಕೇಳಲಾದ ಪ್ರಶ್ನೆಗೆ ತಲೆದೂಗಿದರು. ಇದರ ನಡುವೆ ಯುವಕನೊಬ್ಬ, ರಾಹುಲ್‌ಜೀ ಮದುವೆ ಯಾವಾಗ ಆಗುತ್ತೀರಿ ಎಂದು ಕೇಳಿದ. ಇದನ್ನು ಕೇಳಿಸಿಕೊಂಡ ರಾಹುಲ್‌, ಥ್ಯಾಂಕು ವೆರಿ ಮಚ್‌ ಎಂದು ಹೇಳಿದರಷ್ಟೇ. ವೇದಿಕೆ ಮೇಲಿರುವವರೂ ಇದನ್ನೇ ಕೇಳಿದ್ದಾರೆ ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರತ್ತ ನೋಡಿ ಮುಗುಳ್ನಗೆ ಬೀರಿದರು.
 

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.