ಆರ್‌ಟಿಇನಲ್ಲೂ ನಡೆದಿದೆ ಲೂಟಿ!


Team Udayavani, Dec 17, 2018, 11:59 AM IST

gu5.jpg

ಕಲಬುರಗಿ: ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಬಡ ಹಾಗೂ ಹಿಂದುಳಿದ ಮಕ್ಕಳಿಗೆ ಪ್ರವೇಶಾತಿ ಕಲ್ಪಿಸುವ ಶಿಕ್ಷಣ ಕಾಯ್ದೆ ಹಕ್ಕು (ಆರ್‌ಟಿಇ) ಅಡಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಕ್ಕಳ ಸಂಖ್ಯೆ ಅಪರಾ ತಪರಾ ತೋರಿಸಿ ಶುಲ್ಕ ಎತ್ತಿ ಹಾಕಿ ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಿರುವುದು ಬಹಿರಂಗಗೊಂಡಿದ್ದು, ಹಣ ವಸೂಲಾತಿಗೆ ಆದೇಶಿಸಲಾಗಿದೆ.

ಲೆಕ್ಕ ಮಹಾಪರಿಶೋಧಕ (ಎಜಿ) ತನಿಖಾ ವರದಿಯಲ್ಲಿ ಆರ್‌ಟಿಇ ಶುಲ್ಕದಲ್ಲಿ ಗೋಲ್‌ಮಾಲ್‌ ನಡೆದಿರುವುದು ಪತ್ತೆಯಾಗಿದೆ. 2012-13, 2013-14 ಹಾಗೂ 2014-15ರ ಅವಧಿಯಲ್ಲಿ ಜಿಲ್ಲೆಯಲ್ಲಿ 2 ಕೋಟಿ ರೂ.ಗೂ ಅಧಿಕ ಹಣ
ಅಪರಾತಪರಾ ನಡೆದಿದೆ. ಅಂದರೆ ಆರ್‌ಟಿಇ ಅಡಿ ಮಕ್ಕಳ ಪ್ರವೇಶಾತಿ ಕಡಿಮೆಯಿದ್ದರೂ ಹೆಚ್ಚಿಗೆ ತೋರಿಸಿ ಹೆಚ್ಚುವರಿಯಾಗಿ ಹಣ ಎತ್ತಿ ಹಾಕಲಾಗಿದೆ. 

ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ, ಒಂದನೇ ತರಗತಿಗಳಿಗೆ ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶಾತಿ ನೀಡಿ ಶುಲ್ಕವನ್ನು ಸರ್ಕಾರವೇ ಭರಿಸುವ ಆರ್‌ಟಿಇ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಆರಂಭದ ವರ್ಷದಲ್ಲಿ ಒಂದು ಸೀಟಿಗೆ ಎಲ್‌ಕೆಜಿ ಹಾಗೂ ಒಂದನೇ ತರಗತಿಗೆ ಶುಲ್ಕ ಬೇರೆ ಬೇರೆ ಇದ್ದರೂ ಕನಿಷ್ಟ 6ರಿಂದ 11,800 ಸಾವಿರ ರೂ. ವರೆಗೆ ಭರಿಸಲಾಗಿದೆ.  ಆರಂಭದ 2012-15ರ ಈ ಮೂರು ವರ್ಷಗಳಲ್ಲಿ ಆರ್‌ಟಿಇ ಅಡಿ ಪ್ರವೇಶಾತಿ ಪ್ರಕ್ರಿಯೆ ಮ್ಯಾನುವಲ್‌ ಇತ್ತು. ಅಂದರೆ ಪುಸ್ತಕಗಳಲ್ಲಿ ಮಾತ್ರ ಬರೆದು ದಾಖಲಿಸುವ ಪ್ರಕ್ರಿಯೆ ಜಾರಿಯಲ್ಲಿತ್ತು. ಈ ಸಂದರ್ಭದಲ್ಲೇ ಗೋಲ್‌ಮಾಲ್‌ ನಡೆದಿದೆ.

ಅಂದರೆ ಅರ್ಜಿ ಸಲ್ಲಿಸುವುದು ಹಾಗೂ ತದನಂತರ ಪಟ್ಟಿ ಪ್ರಕಟಿಸುವುದು ಹೆಚ್ಚಿನ ಅರ್ಜಿಗಳು ಬಂದ ಪಕ್ಷದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಗಿತ್ತು. ಆದರೆ ಇಲ್ಲಿ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಖಾಸಗಿ ಶಾಲೆಗಳ ಮುಖ್ಯಸ್ಥರು ಮಕ್ಕಳ ಸಂಖ್ಯೆ ಪ್ರವೇಶಾತಿಯಾಗದಿದ್ದರೂ ಹೆಚ್ಚಿಗೆ ತೋರಿಸಿ ಗೋಲ್‌ಮಾಲ್‌ ಮಾಡಿದ್ದಾರೆ. ಬಹು ಮುಖ್ಯವಾಗಿ ಇದರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕೆಲ ಖಾಸಗಿ ಶಾಲೆಗಳ ಮುಖ್ಯಸ್ಥರು ಭಾಗಿಯಾಗಿದ್ದಾರೆ ಎನ್ನಲಾಗಿದೆ. ಆದರೆ ಈಗ ಆರ್‌ಟಿಇ ಪ್ರವೇಶಾತಿ ಪ್ರಕ್ರಿಯೆ ಆನ್‌ಲೈನ್‌ ವ್ಯವಸ್ಥೆ ಜಾರಿ ತರಲಾಗಿದೆ.

ಹಣ ಎತ್ತಿ ಹಾಕಿರುವುದು ತನಿಖೆಯಿಂದ ಬಹಿರಂಗವಾದ ನಂತರ ಹಣ ವಸೂಲಾತಿಗೆ ಆದೇಶ ನೀಡಲಾಗಿದ್ದು, ತದನಂತರ ಕೆಲವು ತಾಲೂಕುಗಳಲ್ಲಿ ಸರ್ಕಾರಕ್ಕೆ ಮರಳಿ ಹಣ ಜಮೆ ಮಾಡಲಾಗಿದೆ. ಆದರೆ ಇನ್ನು ಬಹುತೇಕ ತಾಲೂಕುಗಳಲ್ಲಿ ಹಣ ವಾಪಸಾತಿಯಾಗಿಲ್ಲ. ಈಗ ನೀಡಿರುವ ನೋಟಿಸ್‌ ಆಧಾರದ ಮೇಲೆ ಆಗಿರುವ ವ್ಯತ್ಯಾಸದ ಹಣ
ಸರ್ಕಾರಕ್ಕೆ ಕಳುಹಿಸದಿದ್ದಲ್ಲಿ ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸುವುದು, ಸಾಧ್ಯವಾದಲ್ಲಿ ಸಂಬಳದಲ್ಲಿ ಕಡಿತಗೊಳಿಸುವಂತಹ ದೃಢ ನಿರ್ಧಾರಕ್ಕೆ ಹಾಗೂ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅವಕಾಶ ನೀಡದಿರುವಂತಹ ಕಠಿಣ ಕ್ರಮಕ್ಕೆ ಮುಂದಾಗಲಾಗುತ್ತಿದೆ ಎನ್ನಲಾಗಿದೆ.

ಸರ್ಕಾರದ ಆದೇಶದಂತೆ ಆಯಾ ಶಾಲೆ ವ್ಯಾಪ್ತಿಯಲ್ಲಿ ಬರುವ ಮಕ್ಕಳನ್ನು ಆರ್‌ಟಿಇ ನಿಯಮದಂತೆ ಶೇ.25 ವಿದ್ಯಾರ್ಥಿಗಳನ್ನು ಆಯಾ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಪ್ರವೇಶಾತಿ ಮಾಡಿಕೊಳ್ಳಬೇಕು. ವ್ಯಾಪ್ತಿಗೆ ಬಾರದ ಮಕ್ಕಳನ್ನು ಜತೆಗೆ ಎಲ್‌ಕೆಜಿಗೆ ವಯಸ್ಸು ಮೀರಿದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿರುವ ಘಟನೆಗಳು ಈ ಸಂದರ್ಭದಲ್ಲಿ ನಡೆದಿವೆ. 

ಶಿಕ್ಷಣಾಧಿಕಾರಿಗಳಿಂದ ನೋಟಿಸ್‌: ನಿಗದಿತ ಸೀಟುಗಳಿಗಿಂತ ಹೆಚ್ಚಿನ ಸೀಟುಗಳ ಶುಲ್ಕ ಪಡೆದು ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಿದ್ದಿರಿ, ಆದ್ದರಿಂದ ಹೆಚ್ಚಿನ ಶುಲ್ಕ ಪಡೆದಿದ್ದನ್ನು ವಾಪಸ್‌ ನೀಡಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಆದರೆ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ತಮಗೆ ಹಣವೇ ನೀಡಿಲ್ಲ. ತಮ್ಮ ಹೆಸರಿನ ಮೇಲೆ ಅಧಿಕಾರಿಗಳೇ ಎತ್ತಿ ಹಾಕಿರಬಹುದು ಎಂದು ಆರೋಪಿಸಿದ್ದಾರೆ.

ಅಫಜಲಪುರದಲ್ಲೇ ಅತಿ ಹೆಚ್ಚು
ಆರ್‌ಟಿಇ ಶುಲ್ಕದ ಹೆಸರಿನಲ್ಲಿ ಅತಿ ಹೆಚ್ಚು ಹಣ ಎತ್ತಿ ಹಾಕಿರುವುದು ಅಫಜಲಪುರ ತಾಲೂಕಿನಲ್ಲೇ. ಇಲ್ಲಿ ಒಂದು ಕೋಟಿ ರೂ.ಗೂ ಹೆಚ್ಚು ಗೋಲ್‌ ಮಾಲ್‌ ಆಗಿದೆ ಎನ್ನಲಾಗಿದೆ. ಸ್ವಲ್ಪ ಪ್ರಮಾಣದಲ್ಲಿ ವಸೂಲಾತಿಯಾಗಿದ್ದರೂ ಇನ್ನೂ 64 ಲಕ್ಷ ರೂ. ಸರ್ಕಾರಕ್ಕೆ ಮರಳಿ ಪಾವತಿಸಬೇಕಿದೆ. ಉಳಿದಂತೆ ಆಳಂದ ತಾಲೂಕಿನಲ್ಲಿ 46 ಲಕ್ಷ ರೂ., ಕಲಬುರಗಿ ದಕ್ಷಿಣದಲ್ಲಿ 18 ಲಕ್ಷ ರೂ., ಜೇವರ್ಗಿಯಲ್ಲಿ 1.50 ಲಕ್ಷ ರೂ. ಹಾಗೂ ಕಲಬುರಗಿ ಉತ್ತರದಲ್ಲಿ 7ಲಕ್ಷ ರೂ., ಚಿತ್ತಾಪುರ ತಾಲೂಕಿನಲ್ಲಿ 32 ಸಾವಿರ ರೂ. ವಸೂಲಾತಿ ಆಗಬೇಕಿದೆ. ಆದರೆ ಚಿಂಚೋಳಿ ಹಾಗೂ ಸೇಡಂ ತಾಲೂಕಿನಲ್ಲಿ ನಯಾಪೈಸೆ ಗೋಲ್‌ಮಾಲ್‌ ಆಗಿಲ್ಲ.

ಹಣ ವಸೂಲಾತಿ ಮಾಡಿ ಶಿಕ್ಷಣ ಇಲಾಖೆಗೆ ತುಂಬಲು ಇಲಾಖೆ ಆಯುಕ್ತರು ಹೆಡ್‌ ಆಪ್‌ ಅಕೌಂಟ್‌ ನೀಡಿದ್ದು ಅದಕ್ಕೆ ಜಮಾ ಮಾಡಲು ಕ್ರಮ ಕೈಗೊಳ್ಳುವಂತೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೋಟಿಸ್‌ ನೀಡಲಾಗಿದೆ. ಅಫಜಲಪುರ ತಾಲೂಕಿನಿಂದಲೇ ಹೆಚ್ಚಿನ ಹಣ ಬರಬೇಕಿದೆ. 
 ಸಾದತ್‌ ಹುಸೇನ್‌, ಆರ್‌ಟಿಇ ನೋಡಲ್‌ ಅಧಿಕಾರಿ, ಶಿಕ್ಷಣ ಇಲಾಖೆ, ಕಲಬುರಗಿ

„ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.