ಸದಾಶಿವ ವರದಿ ಜಾರಿಗೆ ಕೇಂದ್ರಕ್ಕೆ ಒತ್ತಡ ಹೇರಿ


Team Udayavani, Jan 7, 2019, 6:30 AM IST

gul-7.jpg

ಕಲಬುರಗಿ: ನ್ಯಾ| ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಕಾಂಗ್ರೆಸ್‌ ಹಿರಿಯ ಮುಖಂಡರಾದ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಮತ್ತು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಬಿಜೆಪಿ ಮುಖಂಡ, ಮಾಜಿ ಸಚಿವ ಕೆ.ಬಿ. ಶಾಣಪ್ಪ ಒತ್ತಾಯಿಸಿದರು.

ನಗರದ ಡಾ| ಎಸ್‌.ಎಂ. ಪಂಡಿತ ರಂಗಮಂದಿರದಲ್ಲಿ ರವಿವಾರ ರಾಜ್ಯ ಮಾತಂಗ ವಿಕಾಸ ಸಮಿತಿ ಹಮ್ಮಿಕೊಂಡಿದ್ದ “ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ; ಸಾಮಾಜಿಕ ನ್ಯಾಯದ ಪರಿಕಲ್ಪನೆ’ ಎನ್ನುವ ರಾಜ್ಯ ಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
 
ಪರಿಶಿಷ್ಟ ಜಾತಿಗಳು ಒಳ ಮೀಸಲಾತಿ ಕಲ್ಪಿಸುವ ನ್ಯಾ| ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ ಒತ್ತಾಯಿಸಿ ಕಳೆದ ಎರಡು ದಶಕಗಳಿಂದಲೂ ಹೋರಾಟ ನಡೆಸಲಾಗುತ್ತಿದೆ. ವರದಿ ಜಾರಿಗೆ ಇದುವರೆಗೂ ಸರ್ಕಾರಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸದಾಶಿವ ಆಯೋಗದ ವರದಿ ಜಾರಿ ತರುವ ನಿಟ್ಟಿನಲ್ಲಿ ಸಂಸದ ಖರ್ಗೆ ಹಾಗೂ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ವರದಿ ಜಾರಿಯಾಗುವವರೆಗೂ ಸಮುದಾಯದ ಹೋರಾಟ ಮುಂದುವರಿಸಬೇಕೆಂದು ಹೇಳಿದರು.

 ಕ್ಷೀಣಿಸಿದ ರಾಜಕೀಯ ಬಲ: ಈ ಹಿಂದೆ ವಿಧಾನಸಭೆಯಲ್ಲಿ ಮಾದಿಗ ಸಮುದಾಯದ ಶಾಸಕರ ಸಂಖ್ಯೆ 15ರಿಂದ 20 ಇರುತ್ತಿತ್ತು. ಈಗ ಶಾಸಕರ ಸಂಖ್ಯೆ ಕೇವಲ ಮೂರರಿಂದ ನಾಲ್ಕಕ್ಕೆ ಕುಸಿದಿದ್ದು, ಮಾದಿಗ ಸಮುದಾಯದ ರಾಜಕೀಯ ಬಲ ಕಡಿಮೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಸಮುದಾಯದ ಹೊಸ ನಾಯಕರ ಸಂಖ್ಯೆ ಹೆಚ್ಚಾಗಬೇಕಿದೆ ಎಂದು ಹೇಳಿದರು. 

ವಿಧಾನಸಭೆ ಮತ್ತು ಸಂಸತ್‌ನಲ್ಲಿ ಸಮುದಾಯದ ನಾಯಕರ ಬಲ ಇದ್ದಾಗ ಮಾತ್ರ ಯಾವುದೇ ಹೋರಾಟಕ್ಕೆ ಜಯ ಲಭಿಸುತ್ತಿದೆ. ಆದ್ದರಿಂದ ಹೊಸ ಜನನಾಯಕರ ಹುಟ್ಟಬೇಕೆಂದು ಆಶಯ ವ್ಯಕ್ತಪಡಿಸಿದರು.
 
ವಿಚಾರ ಸಂಕಿರಣದಲ್ಲಿ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಉಗಮ; ಸಾಮಾಜಿಕ ಒಳನೋಟ’, “ಮಾದಿಗ ಜನಾಂಗದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿ-ಗತಿಗಳು’, “ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣದ ಔಚಿತ್ಯತೆ ಮತ್ತು ಸಾಮಾಜಿಕ ನ್ಯಾಯ’ ಹಾಗೂ “ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಹೋರಾಟದ ತಲ್ಲಣಗಳು ಹಾಗೂ ಸವಾಲುಗಳು’ ಎಂಬ ಗೋಷ್ಠಿಗಳು ಜರುಗಿದವು. ಹಂಪಿಯ ಮಾತಂಗ ಮಹರ್ಷಿ ಆಶ್ರಮದ ಪೀಠಾಧಿಪತಿ ಪೂರ್ಣಾನಾಂದ ಭಾರತೀ ಸ್ವಾಮೀಜಿ ವಿಚಾರ ಸಂಕಿರಣದ ಸಾನ್ನಿಧ್ಯ ವಹಿಸಿದರು. 

ಅಂಬಾರಾಯ ಬೆಳಕೋಟ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಎಐಸಿಸಿ ಸದಸ್ಯೆ ಚಂದ್ರಿಕಾ ಪರಮೇಶ್ವರ, ರಾಜ್ಯ ಮಾದಿಗ ಸಂಘಟನೆಗಳ ಮಹಾಸಭಾ ಅಧ್ಯಕ್ಷ ಅಂಬಣ್ಣ ಅರೋಲಿ, ಸಹ ಸಂಚಾಲಕ ಮುತ್ತಣ್ಣ ಬೆಣ್ಣೂರು, ಬಾಬು ಜಗಜೀವನ ರಾಮ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಭೀಮಣ್ಣ ಬಿಲ್ಲವ, ಮುಖಂಡರಾದ ಲಿಂಗರಾಜ ತಾರಫೈಲ್‌, ಗೋಪಾಲ ಕಟ್ಟಿಮನಿ, ಶಾಮ ನಾಟೀಕಾರ, ಹಣಮಂತ ಬಿರಾಳ, ದಶರಥ ಕಲಗುರ್ತಿ,ಅಂಬಾರಾಯ ಚಲಗೇರಿ ಹಾಗೂ ಮುಂತಾದವರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.